ತಲೆ ಹೊಟ್ಟಿನ ಸಮಸ್ಯೆ ಕಾಡುತ್ತಿದೆಯಾ? ಈ ಸಮಸ್ಯೆ ನಿವಾರಣೆಗೆ ಸುಲಭ ಮನೆಮದ್ದು

ವಾರದಲ್ಲಿ ಮೂರು ಸಲ ಒಂದು ತಿಂಗಳ ಕಾಲ ಪ್ರಯೋಗಿಸಬೇಕು.

Team Udayavani, Mar 17, 2023, 3:34 PM IST

ತಲೆ ಹೊಟ್ಟಿನ ಸಮಸ್ಯೆ ಕಾಡುತ್ತಿದೆಯಾ? ಈ ಸಮಸ್ಯೆ ನಿವಾರಣೆಗೆ ಸುಲಭ ಮನೆಮದ್ದು

ತಲೆಹೊಟ್ಟಿನ ಸಮಸ್ಯೆಯನ್ನು ಬಹುತೇಕ ಮಂದಿ ಎದುರಿಸುತ್ತಿದ್ದಾರೆ. ಒಮ್ಮೆ ಕೂದಲಿಗೆ ಕೈಯಾಡಿಸಿದರೆ ಗಾಳಿಗೆ ತರಗೆಲೆಗಳು ಹಾರಿ ಹೋಗುವಂತೆ ತಲೆಯಿಂದ ತಲೆಹೊಟ್ಟು ಬರುತ್ತಿರುತ್ತದೆ. ಅಷ್ಟೇ ಅಲ್ಲದೆ, ಅಸಾಧ್ಯ ತುರಿಕೆಯೂ ಉಂಟಾಗುತ್ತದೆ. ತಲೆಹೊಟ್ಟು ಉಂಟಾಗಲು ಮುಖ್ಯ ಕಾರಣವೆಂದರೆ ತಲೆಬುರುಡೆ ಒಣಗುವುದು. ಇದರ ಪರಿಹಾರಕ್ಕೆ ಮಾರುಕಟ್ಟೆಯಲ್ಲಿ ವಿವಿಧ ತೈಲಗಳು, ಡೆನ್‌ರ್ರೆಪ್‌ ಶ್ಯಾಂಪೂಗಳು ಸಿಗುತ್ತವೆ. ಆದರೆ, ಇದರಿಂದ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗದು. ಈ ಕೆಳಗಿನ ಮನೆಮದ್ದು ಪ್ರಯೋಗಿಸಿದರೆ ಈ “ತಲೆಚಿಟ್ಟಿ’ನ ಸಮಸ್ಯೆ ದೂರವಾಗುತ್ತದೆಯೋ ನೋಡಬಹುದು.

ಮೆಂತೆ ಕಾಳು
ಮೆಂತ್ಯೆ ಕಾಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತೆ ಕಾಳಿನಲ್ಲಿ ಇರುವಂತಹ ಫ‌ಂಗಲ್‌ ವಿರೋಧಿ ಗುಣಗಳು ತಲೆಹೊಟ್ಟು ದೂರ ಮಾಡುತ್ತದೆ. ಎರಡರಿಂದ ಮೂರು ಚಮಚ ಮೆಂತ್ಯೆ ಕಾಳುಗಳನ್ನು ತೆಗೆದುಕೊಂಡು ಅದನ್ನು ರಾತ್ರಿ ನೀರಿಗೆ ಹಾಕಿ ನೆನೆಸಿಡಿ. ಮರುದಿನ ಇದನ್ನು ರುಬ್ಬಿಕೊಂಡು ಪೇಸ್ಟ್  ಮಾಡಿ ತಲೆಗೆ ಹಚ್ಚಿಕೊಂಡು ಮರುದಿನ ಶಾಂಪೂವಿನಿಂದ ತೊಳೆದರೆ ಸಮಸ್ಯೆ ಪರಿಹಾರದ  ಜೊತೆಗೆ ಕೂದಲು ಸೊಂಪಾಗಿ ಬೆಳೆಯುತ್ತದೆ.

ಮೊಸರು
ತಲೆಯನ್ನು ಚೆನ್ನಾಗಿ ತೊಳೆದುಕೊಂಡು ಬಂದು ಒಂದು ಕಪ್‌ ಮೊಸರನ್ನು ತೆಗೆದುಕೊಂಡು ತಲೆಗೆ ಹಚ್ಚಿಕೊಂಡು ಸುಮಾರು 15 ನಿಮಿಷ ಕಾಲ ಹಾಗೆ ಬಿಡಬೇಕು. ಇದರ ಬಳಿಕ ಶಾಂಪೂ ಬಳಸಿ ಕೂದಲು ತೊಳೆದರೆ ತಲೆಹೊಟ್ಟು ನಿವಾರಣೆಯಾಗುತ್ತದೆ. ಮೊಸರು ಪಾರಜೈವಿಕ ಗುಣ ಮತ್ತು ಒಳ್ಳೆಯ ಬ್ಯಾಕ್ಟೀರಿಯಾವನ್ನು ಹೊಂದಿರುವುದರಿಂದ ಕಿಣ್ವದ ಕೋಶಗಳು ಬೆಳವಣಿಗೆಯಾಗುವುದನ್ನು ತಡೆಯುವುದು.

ಲಿಂಬೆ ಮತ್ತು ತೆಂಗಿನೆಣ್ಣೆ
ಎರಡು ಚಮಚ ಉಗುರುಬೆಚ್ಚಗಿನ ತೆಂಗಿನ ಎಣ್ಣೆಗೆ ಅಷ್ಟೇ ಪ್ರಮಾಣದ ಲಿಂಬೆ ರಸವನ್ನು ಬೆರೆಸಿಕೊಂಡು ತಲೆಬುರುಡೆಗೆ ಮಸಾಜ್‌ ಮಾಡಿ 30 ನಿಮಿಷ ಕಾಲ ಹಾಗೇ ಬಿಟ್ಟು ಶಾಂಪೂವಿನಿಂದ ಕೂದಲು ತೊಳೆದರೆ  ತಲೆಹೊಟ್ಟನ್ನು ನಿಯಂತ್ರಿಸಬಹುದು. ತೆಂಗಿನ ಎಣ್ಣೆಯು ನೈಸರ್ಗಿಕವಾಗಿ ಆ್ಯಂಟಿಬ್ಯಾಕ್ಟೀರಿಯಾ ಗುಣವನ್ನು ಹೊಂದಿರುವ ಕಾರಣದಿಂದ ಇದು ತಲೆಬುರುಡೆಗೆ ತೇವಾಂಶ ಒದಗಿಸುವುದು. ವಾರದಲ್ಲಿ ಮೂರು ಸಲ ಒಂದು ತಿಂಗಳ ಕಾಲ ಪ್ರಯೋಗಿಸಬೇಕು.

ಬೆಳ್ಳುಳ್ಳಿ
ಬೆಳ್ಳುಳ್ಳಿಯಲ್ಲಿ ಫ‌ಂಗಲ್‌ ವಿರೋಧಿ ಗುಣಗಳು ಇರುವ ಕಾರಣದಿಂದ ಇದು ತುರಿಕೆ ಮತ್ತು ಕಿರಿಕಿರಿ ಉಂಟು ಮಾಡುವ ತಲೆಹೊಟ್ಟನ್ನು ದೂರವಿಡುವುದು. ಹಲವಾರು ರೋಗಗಳನ್ನು ಗುಣಪಡಿಸುವ ಸಾಮರ್ಥ್ಯವಿರುವ ಬೆಳ್ಳುಳ್ಳಿ ತಲೆಹೊಟ್ಟನ್ನು ದೂರವಿಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ. ಎರಡು ಎಸಲು ಬೆಳ್ಳುಳ್ಳಿಯನ್ನು ತೆಗೆದುಕೊಂಡು ಅದನ್ನು ಜಜ್ಜಿ. ಇದನ್ನು ಜೇನುತುಪ್ಪದ ಜತೆ ಸೇರಿಸಿಕೊಂಡು ಪೇಸ್ಟ್‌ ತಯಾರಿಸಿ ತಲೆಬುರುಡೆಗೆ ಹಚ್ಚಿಕೊಂಡು ಸುಮಾರು 20 ನಿಮಿಷ ಕಾಲ ಹಾಗೇ ಬಿಟ್ಟು  ಶಾಂಪೂವಿನಿಂದ ಕೂದಲನ್ನು ತೊಳೆದರೆ ತಲೆಹೊಟ್ಟು ನಿವಾರಣೆಯಾಗುವುದು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.