ಏನಿದು ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣ?
Team Udayavani, Mar 16, 2021, 6:56 AM IST
ಇಂಡಿಯನ್ ಮುಜಾಹಿದೀನ್ (ಐಎಂ) ಭಯೋತ್ಪಾದಕ ಅರಿಜ್ ಖಾನ್ಗೆ ದಿಲ್ಲಿಯ ಸ್ಥಳೀಯ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ಇದನ್ನು ಅಪರೂಪದ ಪ್ರಕರಣವೆಂದು ಪರಿಗಣಿಸಿದೆ. 2008ರಲ್ಲಿ ದಿಲ್ಲಿಯಲ್ಲಿ ನಡೆದ ಬಾಟ್ಲಾ ಹೌಸ್ ಎನ್ಕೌಂಟರ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಅರಿಜ್ ಶಿಕ್ಷೆಗೊಳಗಾಗಿದ್ದ.
ಬಾಟ್ಲಾ ಹೌಸ್ ಎಂದರೇನು?
ಬಾಟ್ಲಾ ಹೌಸ್ ಎನ್ಕೌಂಟರ್ ಎಂದರೆ ಉಗ್ರರು ಅಡಗಿದ್ದ ದಿಲ್ಲಿಯ ಜಾಮಿಯಾನಗರದ ಅಪಾರ್ಟ್ಮೆಂಟ್ (ಎಲ್ 18 ಬಾಟ್ಲಾ ಹೌಸ್).
36 ಸಾವು
ದಿಲ್ಲಿಯ ಇಂಡಿಯಾ ಗೇಟ್, ಕರೋಲ್ ಬಾಗ್ ಹಾಗೂ ಕನೌಟ್ ಬಳಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 36 ಮಂದಿ ಸಾವನ್ನಪ್ಪಿದ್ದು 133ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ದಿಲ್ಲಿ ಸಹಿತ ದೇಶದ ಎಲ್ಲ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿತ್ತು. ಗಡಿ ರಸ್ತೆಗಳು ಸೇರಿದಂತೆ ದೇಶದ ಹಲವೆಡೆ ಪೊಲೀಸರು ನಾಕಾಬಂದಿ ಹಾಕಿ ತಪಾಸಣೆ ಆರಂಭಿಸಿದ್ದರು. ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿತ್ತು.
ವಾರದ ಬಳಿಕ ಸುಳಿವು
ಬಾಂಬ್ ಸ್ಫೋಟ ನಡೆದ ವಾರದ ಬಳಿಕ ಅಂದರೆ ಸೆಪ್ಟಂಬರ್ 19ರಂದು ಜಾಮಿಯಾನಗರದ ಬಾಟ್ಲಾ ಹೌಸ್ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಸರಣಿ ಬಾಂಬ್ ಸ್ಫೋಟದ ಆರೋಪಿಗಳು ಅಡಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಬಾಟ್ಲಾ ಹೌಸ್ಗೆ ಮುತ್ತಿಗೆ ಹಾಕಿದ ದಿಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು. ಪ್ರತಿಯಾಗಿ ಉಗ್ರರು ಕೂಡ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಇಬ್ಬರು ಉಗ್ರರು ಹತರಾದರು. ಆದರೆ ಎನ್ಕೌಂಟರ್ ನಡೆಸಿದ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಉಗ್ರರ ದಾಳಿಗೆ ಹುತಾತ್ಮರಾದರು. ಇನ್ನಿಬ್ಬರು ಪೊಲೀಸ್ ಪೇದೆಗಳು ತೀವ್ರವಾಗಿ ಗಾಯಗೊಂಡರು. 3 ಉಗ್ರರು ತಪ್ಪಿಸಿಕೊಂಡಿದ್ದರು.
ನೇಪಾಲದಲ್ಲಿ ಬಂಧನ: ಎನ್ಕೌಂಟರ್ ಸಮಯದಲ್ಲಿ ತಪ್ಪಿಸಿಕೊಂಡ ಅರಿಜ್ ಖಾನ್ ಅಲಿಯಾಸ್ ಜುನೈದ್ನನ್ನು 2018ರಲ್ಲಿ ನೇಪಾಲದಲ್ಲಿ ಬಂಧಿಸಲಾಗಿತ್ತು. ನ್ಯಾಯಾಲಯವು ಸೆಕ್ಷನ್ 302, 307 ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಶಿಕ್ಷೆ ವಿಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್