Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ರಾಜಕಾರಣಿಯಾಗಿ, ಸರ್ವಾಧಿಕಾರಿಯಾಗಿ ಮೆರೆದಿದ್ದ ಹಿಟ್ಲರ್ ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದ
Team Udayavani, Mar 19, 2024, 4:25 PM IST
ನವದೆಹಲಿ: ಜರ್ಮನಿಯ ಸರ್ವಾಧಿಕಾರಿ, ಕ್ರೂರಿ ಅಡಾಲ್ಫ್ ಹಿಟ್ಲರ್ ನ ಬಗ್ಗೆ ಯಾರಿಗೆ ಗೊತ್ತಿಲ್ಲ. ರಾಜಕಾರಣಿಯಾಗಿ, ಸರ್ವಾಧಿಕಾರಿಯಾಗಿ ಮೆರೆದಿದ್ದ ಹಿಟ್ಲರ್ ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದ. ಆದರೆ 2008ರಲ್ಲಿ ಮೇಘಾಲಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿನ ದಿನಪತ್ರಿಕೆಯ ಹೆಡ್ ಲೈನ್ಸ್ ದೇಶದ ಜನರನ್ನು ಕುತೂಹಲ ಕೆರಳಿಸುವಂತೆ ಮಾಡಿದ್ದು ಸುಳ್ಳಲ್ಲ!
ಇದನ್ನೂ ಓದಿ:CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ಹೌದು ಮೇಘಾಲಯದಲ್ಲಿ ಜಾನ್ ಎಫ್ ಕೆನಡಿಯಿಂದ ಅಡಾಲ್ಫ್ ಹಿಟ್ಲರ್ ನ ಬಂಧನ ಎಂಬುದು ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯ ಹೆಡ್ ಲೈನ್ಸ್ ಇದಾಗಿತ್ತು!
ಅಡಾಲ್ಫ್ ಹಿಟ್ಲರ್, ಜಾನ್ ಎಫ್ ಕೆನಡಿ ಎರಡೂ ಪರಿಚಿತವಾದ ಹೆಸರು. ಆದರೆ ಮೇಘಾಲಯದಲ್ಲಿ ನಿಜಕ್ಕೂ ಅಂದು ನಡೆದಿದ್ದೇನು ಎಂಬುದು ಕುತೂಹಲಕ್ಕೆ ಎಡೆಮಾಡಿತ್ತು. 2008ರಲ್ಲಿ ಮೇಘಾಲಯದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಎನ್ ಸಿಪಿ ಅಭ್ಯರ್ಥಿ ಅಡಾಲ್ಫ್ ಹಿಟ್ಲರ್ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗಲೇ ಅವರನ್ನು ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಜಾನ್ ಎಫ್ ಕೆನಡಿ ಬಂಧಿಸಿದ್ದರು!
ಈ ಸುದ್ದಿ ಮರುದಿನ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಅಡಾಲ್ಫ್ ಹಿಟ್ಲರ್ ನನ್ನು ಬಂಧಿಸಿದ ಜಾನ್ ಎಫ್ ಕೆನಡಿ ಎಂಬುದಾಗಿತ್ತು. ಒಂದು ವೇಳೆ 2008ರಲ್ಲಿ ಸಾಮಾಜಿಕ ಜಾಲತಾಣ ಹೆಚ್ಚು ಪ್ರಚಲಿತದಲ್ಲಿ ಇದ್ದಿದ್ದರೆ ತಕ್ಷಣವೇ ವೈರಲ್ ಆಗುತ್ತಿತ್ತು. ಆದರೆ 2008ರಲ್ಲಿ ಪತ್ರಿಕೆಗಳ ಹೆಡ್ ಲೈನ್ಸ್ ತುಂಬಾ ಚರ್ಚೆಯನ್ನು ಹುಟ್ಟುಹಾಕಿತ್ತು ಎಂದು ವರದಿ ವಿವರಿಸಿದೆ.
ಅಂದು ಬಂಧನಕ್ಕೀಡಾಗಿ ಸುದ್ದಿಯಾಗಿದ್ದ ಅಡಾಲ್ಫ್ ಹಿಟ್ಲರ್ ಮೇಘಾಲಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಕಳೆದ ವರ್ಷ ಹಿಟ್ಲರ್ ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.
ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲಿ ಚುನಾವಣಾ ಆಯೋಗವು ಎಕ್ಸ್ ನಲ್ಲಿ ಈ ಕುತೂಹಲಕಾರಿ ಮಾಹಿತಿಯನ್ನು ಹಂಚಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!