ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ


Team Udayavani, Dec 1, 2021, 10:15 PM IST

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ನವದೆಹಲಿ/ವಾಷಿಂಗ್ಟನ್‌:  ಕೊರೊನಾ ರೂಪಾಂತರಿ ಒಮಿಕ್ರಾನ್‌ ಆತಂಕದ ಹಿನ್ನೆಲೆಯಲ್ಲಿ ಲಸಿಕೆ ಪಡೆಯದೇ ಇರುವ, 60 ವರ್ಷ ಮೇಲ್ಪಟ್ಟವರು ಪ್ರಯಾಣ ಮುಂದೂಡಿಕೆ ಮಾಡುವುದು ಒಳಿತು ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‌ಒ) ಸಲಹೆ ನೀಡಿದೆ.

ಅಮೆರಿಕ, ಜಪಾನ್‌ ಮತ್ತು ಸಿಂಗಾಪುರ ದೇಶಗಳು ವಿದೇಶಿ ಪ್ರಯಾಣಿಕರಿಗೆ ಭಾಗಶಃ ಬಾಗಿಲು ಬಂದ್‌ ಮಾಡಿದ್ದು, ಈ ಬಗ್ಗೆ ಡಬ್ಲೂéಎಚ್‌ಒ ಆಕ್ಷೇಪ ವ್ಯಕ್ತಪಡಿಸಿದೆ. ಸಂಪೂರ್ಣ ಪ್ರಯಾಣ ನಿಷೇಧದಿಂದಾಗಿ ಕೊರೊನಾ ಹರಡುವಿಕೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. ಲಸಿಕೆ ಪಡೆಯದೇ ಇರುವ, 60 ವರ್ಷ ಮೇಲ್ಪಟ್ಟವರು ಈಗ ಹೈ ರಿಸ್ಕ್ ದೇಶಗಳು ಎಂದು ಗುರುತಿಸಲಾಗಿರುವಲ್ಲಿಗೆ ಹೋಗುವುದು ಬೇಡ ಎಂದು ಅದು ತಿಳಿಸಿದೆ.

ಲಸಿಕೆ ಕಡ್ಡಾಯ ಮಾಡಿ

ಒಮಿಕ್ರಾನ್‌ ಬಗ್ಗೆ ಆತಂಕಗೊಂಡಿರುವ ಐರೋಪ್ಯ ಒಕ್ಕೂಟ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಬೇಕು ಎಂದು ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಯಂತೆ ಈ ವರ್ಷದ ಅಂತ್ಯದ ಒಳಗೆ ಇಡೀ ಜಗತ್ತಿನಲ್ಲಿ ಕಡೇ ಪಕ್ಷ ಶೇ.40ರಷ್ಟು ಮಂದಿಗಾದರೂ ಲಸಿಕೆ ಹಾಕಬೇಕು. ಮುಂದಿನ ವರ್ಷದ ಮಧ್ಯ ಭಾಗದ ಹೊತ್ತಿಗೆ ಶೇ.70 ಗುರಿ ಸಾಧನೆ ಮಾಡಬೇಕು. ಅಲ್ಲದೇ, ಈಗಾಗಲೇ ಶೇ.70ರಷ್ಟು ಮಂದಿಗೆ ಲಸಿಕೆ ಹಾಕಿರುವ ದೇಶಗಳು, ಬಡ ದೇಶಗಳಿಗೆ ಲಸಿಕೆಯನ್ನು ಪೂರೈಕೆ ಮಾಡಬೇಕು ಎಂದು ಸಲಹೆ ನೀಡಿದೆ.

ಯೂರೋಪ್‌ನಲ್ಲಿ ಮೊದಲೇ ಬಂದಿತ್ತೇ?

ದಕ್ಷಿಣ ಆಫ್ರಿಕಾಗಿಂತಲೂ ಮೊದಲೇ ಯೂರೋಪ್‌ ದೇಶಗಳಲ್ಲಿ ಒಮಿಕ್ರಾನ್‌ ರೂಪಾಂತರಿ ಪತ್ತೆಯಾಗಿತ್ತೇ ಎಂಬ ಅನುಮಾನಗಳು ಈಗ ಸೃಷ್ಟಿಯಾಗಿವೆ. ಇಡೀ ಜಗತ್ತಿಗೆ ಹೊಸ ರೂಪಾಂತರಿ ಬಗ್ಗೆ ದಕ್ಷಿಣ ಆಫ್ರಿಕಾ ಎಚ್ಚರಿಕೆ ನೀಡುವ ಒಂದು ವಾರ ಮುಂಚೆಯೇ ಯೂರೋಪ್‌ನ ದೇಶಗಳಲ್ಲಿ ಇದು ಇತ್ತು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಕೇಂದ್ರ ವರ್ಸಸ್‌ ಮಹಾರಾಷ್ಟ್ರ

ಒಮಿಕ್ರಾನ್‌ ತಡೆಗಾಗಿ ನಿಯಮ ರೂಪಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಮಹಾರಾಷ್ಟ್ರ ಸರ್ಕಾರಗಳ ನಡುವೆ ಭಿನ್ನಾಭಿಪ್ರಾಯ ಮೂಡಿದೆ. ಕೇಂದ್ರ ಸರ್ಕಾರ, ತನ್ನ ಮಾರ್ಗಸೂಚಿಯಲ್ಲಿ ವಿದೇಶದಿಂದ ಬಂದಿದ್ದು, ಇಲ್ಲಿನ ಪರೀಕ್ಷೆ ವೇಳೆ ನೆಗೆಟೀವ್‌ ಬಂದಿದ್ದರೂ ಕಡ್ಡಾಯವಾಗಿ 14 ದಿನ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದಿದೆ. ಆದರೆ, ಮಹಾ ಸರ್ಕಾರ ನೆಗಟೀವ್‌ ಬಂದವರು ಕೇವಲ 7 ದಿನ ಕ್ವಾರಂಟೈನ್‌ನಲ್ಲಿ ಇದ್ದರೆ ಸಾಕು ಎಂದು ಹೇಳಿದೆ. ಈ ಸಂಬಂಧ ಆರೋಗ್ಯ ಕಾರ್ಯದರ್ಶಿ ಅಜಯ್‌ ಭೂಷಣ್‌ ಮಹಾ ಸರ್ಕಾರಕ್ಕೆ ಪತ್ರ ಬರೆದು, ಕೇಂದ್ರದ ಮಾರ್ಗಸೂಚಿ ಪಾಲನೆ ಮಾಡುವಂತೆ ಹೇಳಿದ್ದಾರೆ.

ಒಮಿಕ್ರಾನ್‌ ವಿರುದ್ಧ ಕೊವ್ಯಾಕ್ಸಿನ್‌ ಪ್ರಬಲ?

ಒಮಿಕ್ರಾನ್‌ ವಿರುದ್ಧ ಹೋರಾಟ ನಡೆಸುವಲ್ಲಿ ದೇಶೀಯವಾಗಿ ತಯಾರಿಸಲಾಗಿರುವ ಕೊವ್ಯಾಕ್ಸಿನ್‌ ಶಕ್ತಿಶಾಲಿಯಾಗಿದೆ ಎಂದು ಐಸಿಎಂಆರ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕೊವ್ಯಾಕ್ಸಿನ್‌ ವಿರಾಯಿನ್‌ ಲಸಿಕೆಯಾಗಿರುವುದರಿಂದ ಹೊಸ ರೂಪಾಂತರಿ ವಿರುದ್ಧ ಪ್ರಬಲವಾಗಿ ಕೆಲಸ ಮಾಡಬಹುದು. ಆದರೆ, ಉಳಿದ ಲಸಿಕೆಗಳು ಎಂಆರ್‌ಎನ್‌ಎ ವೇದಿಕೆಯಲ್ಲಿ ಸೃಷ್ಟಿಸಿದ್ದು, ಹೀಗಾಗಿ ಕೆಲಸ ಮಾಡದೇ ಇರಬಹುದು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.