ನಾನು ಎಷ್ಟು ಬೇಕಾದರೂ ಕೇಸರಿ ಶಾಲು ಹಂಚ್ತೇನೆ: ಡಿಕೆಶಿಗೆ ಈಶ್ವರಪ್ಪ ತಿರುಗೇಟು
Team Udayavani, Feb 9, 2022, 6:23 PM IST
ಬೆಂಗಳೂರು : ನಾನು ಎಷ್ಟು ಬೇಕಾದರೂ ಕೇಸರಿ ಶಾಲು ಹಂಚ್ತೇನೆ, ನನ್ನ ಸ್ವಾತಂತ್ರ್ಯ ಕೇಳಲು ಡಿ.ಕೆ. ಶಿವಕುಮಾರ್ ಗೆ ಅಧಿಕಾರ ನೀಡಿದ್ದು ಯಾರು? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಂಡೆ ಲೂಟಿ ಮಾಡಿದ ವ್ಯಕ್ತಿ ಶಿವಕುಮಾರ್. ತಿಹಾರ್ ಜೈಲಿಗೆ ಹೋಗಿ ಬಂದವರು ಶಿವಕುಮಾರ್, ಇ ಡಿ ದಾಳಿ ಕೂಡ ಶಿವಕುಮಾರ್ ಮೇಲೆ ಆಗಿತ್ತು ಎಂದು ಆರೋಪಿಸಿದರು.
ಶಿವಕುಮಾರ್ ಗೆ ತಾಕತ್ತು, ಧಮ್ ಇದ್ರೆ ಮಸೀದಿಗೆ ಗುಲ್ಬಾರ್ಗಾ ಶಾಸಕಿಯನ್ನ ಕರ್ಕೊಂಡು ಹೋಗ್ಲಿ.ಶಾಲೆಗೆ ಸಮವಸ್ತ್ರ ಧರಿಸಿ ಹೋಗಬೇಕು.ಕೇಸರಿ ಧ್ವಜ ಪ್ರಪಂಚದ ಯಾವ ಮೂಲೆಯಲ್ಲಿ ಬೇಕಾದರೂ ಹಾರಿಸ್ತೇವೆ ಎಂದು ಸವಾಲು ಹಾಕಿದರು.
ಸಿದ್ಧರಾಮಯ್ಯನನ್ನು ಮೀರಿಸಿದ ಸುಳ್ಳುಗಾರ ಶಿವಕುಮಾರ್.ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾರಿಸಿಲ್ಲ. ಶಿವಕುಮಾರ್ ಗಿಂತ ಹೆಚ್ಚಿನ ದೇಶ ಭಕ್ತಿ ನನಗಿದೆ. ರಾಷ್ಟ್ರ ಧ್ವಜವನ್ನು ಹಾರಿಸಲು ನಿಯಮ ಇದೆ .ಕಾಂಗ್ರೆಸ್ ನವರು ಹಿಂದೂಸ್ಥಾನ- ಪಾಕಿಸ್ತಾನ ಮಾಡಿದರು ಎಂದು ಆರೋಪಿಸಿದರು.
ಹಿಜಾಬ್ ಹಿಂದೆ ಸಂಘ ಪರಿವಾರದ ನಾಯಕರು ಇದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕೆಂಡ ಕಾರಿದ ಈಶ್ವರಪ್ಪ, ಯಾವನೋ ಕುಡುಕ ಹೇಳ್ತಾನೆ… ರೀ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ