“ಯಾರು ಬಂದರೂ ಅವರಿಗೆ ಪಕ್ಷಕ್ಕೆ ಪ್ರವೇಶ”: ತೃಣಮೂಲ ಕಾಂಗ್ರೆಸ್
Team Udayavani, Nov 29, 2021, 6:19 PM IST
ಪಣಜಿ: ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು “ಯಾರು ಬಂದರೂ ಅವರಿಗೆ ಪಕ್ಷಕ್ಕೆ ಪ್ರವೇಶ” ಎಂಬ ಅಭಿಯಾನವನ್ನು ಆರಂಭಿಸಿದೆ. ಸೋಮವಾರ ಪಣಜಿಯ ಟಿಎಂಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ರಾಜ್ಯದ ಕೆಲವೆಡೆ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಟಿಎಂಸಿ ಪಕ್ಷಕ್ಕೆ ಎಂಟ್ರಿ ನೀಡುತ್ತಿದ್ದಾರೆ.
ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡರಾದ ಲವೋ ಮಾಮಲೇದಾರ್ ಮಾತನಾಡಿ- ಸದ್ಯ ಗೋವಾದ ಜನತೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಬೇಸರಗೊಂಡಿದ್ದಾರೆ. ಈ ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಎರಡೂ ಪಕ್ಷಗಳ ಬಗ್ಗೆ ಅಸಮಾಧಾನಗೊಂಡ ಜನರು ಹಳ್ಳಿ ಹಳ್ಳಿಯಲ್ಲಿ ಟಿಎಂಸಿ ಪಕ್ಷ ಸೇರುತ್ತಿದ್ದಾರೆ. ಟಿಎಂಸಿ ಪಕ್ಷವು ಗೋವಾದ ಜನರ ಹಿತಕ್ಕಾಗಿ ಕೆಲಸ ಮಾಡುತ್ತಿದೆ ಎಂದರು.
ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿತರಾಗಿದ್ದ ಮಾಜಿ ಶಾಸಕ ಟ್ರೋಜನ್ ಡಿಮೆಲೊ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ
Gujarat University;ದಾಳಿಯ ಬಳಿಕ ವಿದೇಶಿ ವಿದ್ಯಾರ್ಥಿಗಳ ಸ್ಥಳಾಂತರ: ಭದ್ರತೆ ಬಿಗಿ
Poll: ಪಶ್ಚಿಮಬಂಗಾಳ ಡಿಜಿಪಿ, 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ವರ್ಗಾವಣೆ; ಚುನಾವಣಾ ಆಯೋಗ