ಸಿಬಿಐ, ಇಡಿ ನಿರ್ದೇಶಕರ ಅಧಿಕಾರಾವಧಿ ಹೆಚ್ಚಳಕ್ಕೆ ಕಾರಣ?: ಮಾಹಿತಿಗೆ ನಕಾರ
Team Udayavani, Dec 28, 2021, 10:30 PM IST
ನವದೆಹಲಿ: ಕೇಂದ್ರ ಸರ್ಕಾರ ಹೊರಡಿಸಿರುವ ಎರಡು ಮಹತ್ವದ ಸುಗ್ರೀವಾಜ್ಞೆಗಳ ಹಿಂದಿನ ಕಾರಣವನ್ನು ತಿಳಿಸಲು ರಾಷ್ಟ್ರಪತಿಯವರ ಕಾರ್ಯದರ್ಶಿ ಉಷಾ ಶಶಿಧರನ್ ನಿರಾಕರಿಸಿದ್ದಾರೆ.
ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ (ಇಡಿ) ನಿರ್ದೇಶಕರ ಅಧಿಕಾರಾವಧಿ ತಲಾ ಮೂರು ವರ್ಷಗಳ ಕಾಲ ಹೆಚ್ಚಾಗಿದೆ. ಇದರ ಕಾರಣವನ್ನು ಬಹಿರಂಗಪಡಿಸುವಂತಿಲ್ಲ ಎಂದು ಸಂಪುಟಸಭೆಯಲ್ಲೇ ನಿರ್ಧರಿಸಲಾಗಿದೆ ಎಂದು ರಾಷ್ಟ್ರಪತಿಯವರ ಕಾರ್ಯದರ್ಶಿ ತಿಳಿಸಿದ್ದಾರೆ.
ಇದನ್ನೂ ಓದಿ:ಚೀನಾದಲ್ಲೂ ಕೋವಿಡ್ ಬಿಗಿ ಕ್ರಮ: ತತ್ತರಿಸಿದ ನಾಗರಿಕರು, ಆಕ್ರೋಶ
ನ.14ರಂದು ಕೇಂದ್ರ ಸರ್ಕಾರ, ಕೇಂದ್ರ ವಿಚಕ್ಷಣಾ ಆಯೋಗ (ತಿದ್ದುಪಡಿ), ದೆಹಲಿ ವಿಶೇಷ ಪೊಲೀಸ್ ವ್ಯವಸ್ಥೆ (ತಿದ್ದುಪಡಿ) ಎಂಬ ಎರಡು ಸುಗ್ರೀವಾಜ್ಞೆಗಳನ್ನು ಹೊರಡಿಸಿತ್ತು. ಇದು ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಮಿಶ್ರಾರನ್ನು ಅದೇ ಸ್ಥಾನದಲ್ಲಿ ಉಳಿಸಲು ಕೇಂದ್ರ ಮಾಡಿದ ತಂತ್ರ ಎಂದು ವಿರೋಧಪಕ್ಷಗಳು ಆರೋಪಿಸಿದ್ದವು. ಈ ಕುರಿತು ಸ್ಪಷ್ಟ ಮಾಹಿತಿ ಕೇಳಿ ಅಂಜಲಿ ಭಾರದ್ವಾಜ್ ಎನ್ನುವವರು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!