ಕಾಂಗ್ರೆಸ್ ಟ್ವೀಟ್ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದ್ದೇಕೆ ?

ಬೊಮ್ಮಾಯಿ ನಾಯಕತ್ವ ಅಭಾದಿತವೇ ? ಎಂಬ ಪ್ರಶ್ನೆ ಇನ್ನೂ ನಿಗೂಢವಾಗಿಯೇ ಉಳಿದಿದೆ.

Team Udayavani, Aug 10, 2022, 11:56 AM IST

ಕಾಂಗ್ರೆಸ್ ಟ್ವೀಟ್ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದ್ದೇಕೆ ?

ಬೆಂಗಳೂರು : ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ.40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್ ಮಾಡಿರುವ ಟ್ವೀಟ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ತೀವ್ರ ವಿಚಲಿತಗೊಳಿಸಿದೆ.

ಕಾಂಗ್ರೆಸ್ ಮಾಡಿರುವ ಈ‌ ಮೂರು ಟ್ವೀಟ್ ಗೆ ಬೊಮ್ಮಾಯಿ ಅವರು ಈ ಮಟ್ಟದಲ್ಲಿ‌ ಕಳವಳಗೊಳ್ಳುವ ಅಗತ್ಯವಿತ್ತೇ ? ಅಷ್ಟಕ್ಕೂ ಅವರು ಆತಂಕಗೊಳ್ಳುವಂಥ ವಿದ್ಯಮಾನಗಳು ಬಿಜೆಪಿಯಲ್ಲಿ ನಡೆಯುತ್ತಿವೆಯೇ ? ಎಂಬ ಪ್ರಶ್ನೆಗಳಿಗೆ ಉತ್ತರ ಕೆದಕುವುದಕ್ಕೆ ಅವರೇ ಈಗ ದಾರಿ ಮಾಡಿಕೊಟ್ಟಂತಾಗಿದೆ.

ಕಾಂಗ್ರೆಸ್  ಮಾಡಿದ ಟ್ವೀಟ್  ಎಲ್ಲ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಬೇಸರಗೊಂಡ ಅವರು ತಮ್ಮ ಆಪ್ತ ಸಚಿವರೆಲ್ಲರಿಗೂ ದೂರವಾಣಿ‌ ಕರೆ ಮಾಡಿ ಕಾಂಗ್ರೆಸ್ ಆರೋಪಕ್ಕೆ ಕೌಂಟರ್ ಮಾಡುವಂತೆ ಸೂಚಿಸಿದ್ದಾರೆಂಬುದು ಮೂಲಗಳು ಹೇಳುತ್ತಿವೆ.

ಹೀಗಾಗಿ ಸಚಿವರಾದ ಆರ್.ಅಶೋಕ, ಸಿ.ಸಿ.ಪಾಟೀಲ್, ಡಾ.ಸುಧಾಕರ್, ಸುನೀಲ್ ಕುಮಾರ್, ಬೈರತಿ ಬಸವರಾಜ್ ಸೇರಿದಂತೆ ಒಬ್ಬರಾದ ಮೇಲೆ ಒಬ್ಬರು ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದರು. ಸಾಲದಕ್ಕೆ ಅವಧಿ ಪೂರೈಕೆ ಹೊಸ್ತಿಲಲ್ಲಿ ಇರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡಾ ಬೊಮ್ಮಾಯಿ ಪರ‌ ಬ್ಯಾಟ್ ಬೀಸಿದರು. ಇಷ್ಟಾದ ಮೇಲೂ‌ ಬೊಮ್ಮಾಯಿ ನಾಯಕತ್ವ ಅಭಾದಿತವೇ ? ಎಂಬ ಪ್ರಶ್ನೆ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಕಾಂಗ್ರೆಸ್ ಆರೋಪ ಏನು ? :

ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡುತ್ತಿಲ್ಲ. ಯಾರಲ್ಲೂ ಸಂಭ್ರಮ ಇಲ್ಲದಿರುವುದೇ ಇದಕ್ಕೆ ನಿದರ್ಶನ ಎಂದು ಟ್ವೀಟ್ ಮೂಲಕ‌ ಸಿಎಂ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿತ್ತು.

ಬಿಜೆಪಿಯಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಇದೆ, ಸಂಘಟನಾತ್ಮಕವಾಗಿ ಬದಲಾವಣೆಯಾಗುತ್ತದೆ ಎಂಬ ಬಿಸಿ ಬಿಸಿ ಚರ್ಚೆ ಮಧ್ಯೆಯೇ ಕಾಂಗ್ರೆಸ್ ಈ ರೀತಿಯ ವ್ಯಂಗ್ಯಬರಿತ ಟ್ವೀಟ್ ಮಾಡಿ, ಬೊಮ್ಮಾಯಿ ಅವರನ್ನು “ಕೈಗೊಂಬೆ ಸಿಎಂ” ಎಂದು ಟೀಕಿಸಿತ್ತು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.