ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ


Team Udayavani, Dec 6, 2021, 8:57 PM IST

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

ಹುಣಸೂರು :  ನಾಗರಹೊಳೆ ಉದ್ಯಾನದಂಚಿನ ಗುರುಪುರದ ಟಿಬೆಟ್ ಕ್ಯಾಂಪಿನಲ್ಲಿ ಸಲಗದ ಹಾವಳಿ ಮುಂದುವರೆದಿದ್ದು, ಹಗಲು ವೇಳೆಯೇ ದಾಳಿ ನಡೆಸಿದ್ದು, ಸಾಕಷ್ಟು ಹಾನಿ ಉಂಟುಮಾಡಿದ ಸಲಗವನ್ನು ಗ್ರಾಮಸ್ಥರು ಕಾಡಿಸಿ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಕೂಗಾಟಕ್ಕೆ ಬೆದರಿದ ಸಲಗ :
ಮೇವಿಗಾಗಿ ಉದ್ಯಾನವನ್ನು ದಾಟಿಬಂದ ಈ ಪುಂಡಾನೆಯು ವಾಪಸ್ ತೆರಳದೆ ಮದ್ಯಾಹ್ನ ಗುರುಪುರ ಸಿ ಮತ್ತು ಜೆಡ್ ವಿಲೇಜ್‌ಗೆ ನುಗ್ಗಿದ ಸಲಗವನ್ನು ಕಂಡ ಜನರು ಕೂಗಾಟ ನಡೆಸಿದ್ದರಿಂದ ಗಾಬರಿಯಾಗಿ ಎದುರಿಗೆ ಸಿಕ್ಕ ಜಮೀನಿಗೆ ಅಳವಡಿಸಿದ್ದ ಕಲ್ಲುಕಂಬ, ತಂತಿಬೇಲಿಯನ್ನು ತುಳಿದು ನಾಶಪಡಿಸಿದೆ.

ಘೀಳಿಟ್ಟ ಸಲಗ:
ನಾಗರಹೊಳೆ ಮುಖ್ಯರಸ್ತೆಯಲ್ಲಿದ್ದ ಸಲಗವು ಜನರ ಕೂಗಾಟ-ರಂಪಾಟದಿAದ ಬೇಸತ್ತು ಹಲವು ಬಾರಿ ಘೀಳಿಡುತ್ತಾ ಜನರನ್ನೇ ಅಟ್ಟಾಡಿಸಿಕೊಂಡು ಬಂತು. ಕೋಪಗೊಂಡಿದ್ದ ಸಲಗವು ನಾಗಪುರ ಶಾಲೆಯ ಮುಂಭಾಗದಲ್ಲಿನ ವಿದ್ಯುತ್ ಕಂಬವನ್ನೇ ಗುದ್ದಿ ಮುರಿದು ಹಾಕಿತು. ಈ ವೇಳೆ ವಿದ್ಯುತ್ ಕಿಡಿಗಳು ಹೊರಹೊಮ್ಮಿತ್ತಾದರೂ ಯಾವುದೇ ಅಪಾಯ ಸಂಭವಿಸಿಲ್ಲ.

ಬೆಳೆ ನಾಶ:
ಸುಮಾರು ಎರಡು ಗಂಟೆಗಳ ಕಾಲ ರಸ್ತೆಯಲ್ಲಿದ್ದ ಸಾರ್ವಜನಿಕರನ್ನು ಅಟ್ಟಾಡಿಸಿತು. ಅಲ್ಲದೆ ನಾಗಪುರ ಮತ್ತು ಟಿಬೆಟ್ ಕ್ಯಾಂಪ್‌ನ ಶುಂಠಿ ಜಮೀನಿಗೆ ದಾಂಗುಡಿಯಿಟ್ಟು ರೈತರ ಬೆಳೆಯನ್ನು ತಿಂದು ತುಳಿದು ನಾಶಪಡಿಸಿದೆ. ಟಿಬೇಟ್ ಕ್ಯಾಂಪಿನ ಬಳಿ ವ್ಯಕ್ತಿಯೊರ್ವ ಉರಿಯುವ ಪಂಜು ಹಿಡಿದು ಆನೆಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಿದರಾದರೂ ಬೆಂಕಿಗೂ ಹೆದರದೆ ಕಲ್ಲುಕಂಬ-ತAತಿ ಬೇಲಿಯನ್ನು ತುಳಿದು ಹಾಳು ಮಾಡಿತು.

ವಿಷಯ ತಿಳಿದು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಸಾರ್ವಜನಿಕರ ನೆರವಿನಿಂದ ಕಾಡಿಗಟ್ಟುವಲ್ಲಿ ಯಶಸ್ವಿಯಾದರು.

ಪುಂಡಾನೆಯ ಪುಂಡಾಟ:
ಈ ಪುಂಡಾನೆಯು ವರ್ಷದ ಹಿಂದಷ್ಟೆ ಮುದಗನೂರು ಬಳಿಯ ಜಮೀನಿನಲ್ಲಿದ್ದ ಟ್ರ್ಯಾಕ್ಟರ್, ಟ್ರೇಲರ್‌ಗಳನ್ನು ಗುದ್ದಿ ಕೆಡವಿ ಹಾಳು ಜಖಂಗೊಳಿಸಿತ್ತು. ಅಲ್ಲದೆ ತಿಂಗಳ ಹಿಂದಷ್ಟೆ ಮತ್ತೊಂದು ಪುಂಡಾನೆ ಟಿಬೇಟ್ ಕ್ಯಾಂಪಿನಲ್ಲಿ ಮನೆಗೆ ನುಗ್ಗಿ ಸಾಕಷ್ಟು ಹಾನಿ ಮಾಡಿದ್ದಲ್ಲದೆ ಭರತವಾಡಿ ಗ್ರಾಮದಮನೆ, ವೀರನಹೊಸಳ್ಳಿ ಅರಣ್ಯ ವಸತಿಗೃಹ ಸೇರಿದಂತೆ ನಾಗಪುರ, ಪೆಂಜಳ್ಳಿ ಗಿರಿಜನಹಾಡಿಯಲ್ಲಿ ಅಪಾರ ಪ್ರಮಾಣದ ಶುಂಠಿ, ಜೋಳ ಮತ್ತು ಬಾಳೆಬೆಳೆ ಸೇರಿದಂತೆ ಇತರ ಬೆಳೆಗಳನ್ನು ನಾಶಪಡಿಸಿತ್ತು ಹಾಗೂ ಇತ್ತೀಚೆಗಷ್ಟೆ ಮದಗಜವೊಂದು ಹುಣಸೂರು-ನಾಗರಹೊಳೆ ಮುಖ್ಯರಸ್ತೆಯ ನಾಗಾಪುರ ಬಳಿ ರೈಲ್ವೆ ಕಂಬಿ ತಡೆಗೋಡೆ ಹತ್ತಿ ಕಾಡು ಸೇರಿಕೊಂಡಿದ್ದನ್ನು ಸ್ಮರಿಸಬಹುದು.

ಒಂಟಿ ಸಲಗದ ಹಾವಳಿ ತಪ್ಪಿಸಿ:
ಈ ಭಾಗದಲ್ಲಿ ಒಂಟಿ ಸಲಗಗಳ ಹಾವಳಿ ವಿಪರೀತವಾಗಿದ್ದು, ರೈತರು ಹೈರಾಣಾಗಿದ್ದಾರೆ. ರಾತ್ರಿವೇಳೆ ಓಡಾಡಲು ಭಯಪಡುವಂತಾಗಿದ್ದು, ಇನ್ನಾದರೂ ಅರಣ್ಯದಂಚಿನಲ್ಲಿ ರೈಲ್ವೆ ಹಳಿ ಬೇಲಿ ಪೂರ್ಣಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.