ಫೇಸ್ಬುಕ್, ಟ್ವಿಟರ್ಗೆ ನಿಷೇಧದ ಭೀತಿ : ಸರಕಾರದ ನಿಯಮ ಪಾಲನೆ ವಿಫಲ ಹಿನ್ನೆಲೆ ಕ್ರಮ
Team Udayavani, May 25, 2021, 7:30 AM IST
ಹೊಸದಿಲ್ಲಿ: ಸದ್ಯದಲ್ಲೇ ದೇಶಾದ್ಯಂತ ಫೇಸ್ಬುಕ್, ಟ್ವಿಟರ್ ಬ್ಯಾನ್ ಆಗಲಿವೆಯೇ?
ಡಿಜಿಟಲ್ ಕಂಟೆಂಟ್ ಗಳ ಮೇಲೆ ನಿಯಂತ್ರಣ ಹೇರಲು ಕೇಂದ್ರ ಸರಕಾರ ಜಾರಿ ಮಾಡಿರುವ ನಿಯಮಗಳನ್ನು ಟ್ವಿಟರ್, ಫೇಸ್ ಬುಕ್, ಇನ್ ಸ್ಟಾಗ್ರಾಂ ಸೇರಿದಂತೆ ಬಹುತೇಕ ಸಾಮಾಜಿಕ ಜಾಲತಾಣಗಳು ಇನ್ನೂ ಅನುಸರಿಸಿಲ್ಲ. ಮಂಗಳವಾರದಿಂದಲೇ ಈ ನಿಯಮಗಳು ಜಾರಿಗೆ ಬರಲಿದ್ದು, ನಿಯಮ ಪಾಲಿಸದ ತಾಣಗಳನ್ನು ಸರಕಾರ ಬ್ಲಾಕ್ ಮಾಡುವ ಸಾಧ್ಯತೆ ಅಧಿಕವಾಗಿದೆ.
ನಿಯಮ ಪಾಲನೆ ಅಧಿಕಾರಿಗಳ ನೇಮಕ, ಭಾರತದಲ್ಲಿರುವ ಆ ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ಸಂಖ್ಯೆ ಸಲ್ಲಿಕೆ, ದೂರುಗಳು ಬಂದರೆ ಕೂಡಲೇ ಪರಿಹರಿಸುವುದು, ಆಕ್ಷೇಪಾರ್ಹ ಕಂಟೆಂಟ್ ಗಳ ಮೇಲೆ ನಿಗಾ ಇಡುವುದು ಮತ್ತು ಅವುಗಳನ್ನು ತೆಗೆದುಹಾಕುವುದು ಸೇರಿದಂತೆ ಕೆಲವೊಂದು ನಿಯಮಗಳನ್ನು ಪಾಲಿಸುವಂತೆ ಕಳೆದ ಫೆ.25ರಂದು ಸರಕಾರ ಸೂಚಿಸಿತ್ತು. ಜತೆಗೆ ಇದನ್ನು ಪೂರ್ಣಗೊಳಿಸಲು 3 ತಿಂಗಳ ಗಡುವು ನೀಡಿತ್ತು. ಮೇ 25ರಂದು ಈ ಗಡುವು ಮುಗಿದಿದ್ದು, ಜಾಲತಾಣಗಳಿಗೆ ನಿಷೇಧದ ಭೀತಿ ಶುರುವಾಗಿದೆ.
ಟೂಲ್ಕಿಟ್: ಟ್ವಿಟರ್ಗೆ ನೋಟಿಸ್
ಹೊಸದಿಲ್ಲಿ: ಕಾಂಗ್ರೆಸ್ ನದ್ದು ಎನ್ನಲಾದ ಟೂಲ್ಕಿಟ್ ಅನ್ನು “ತಿರುಚಿದ ಅಂಶಗಳುಳ್ಳ ವಿಷಯ’ ಎಂದು ಉಲ್ಲೇಖೀಸಿದ್ದ ಟ್ವಿಟರ್ಗೆ ದಿಲ್ಲಿ ಪೊಲೀಸರ ವಿಶೇಷ ಘಟಕ ಸೋಮವಾರ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು ಟೂಲ್ಕಿಟ್ ಕುರಿತು ಮಾಡಿದ್ದ ಟ್ವೀಟ್ ಅನ್ನು ಟ್ವಿಟರ್ ಇತ್ತೀಚೆಗೆ “ತಿರುಚಿದ ಅಂಶಗಳುಳ್ಳ ವಿಷಯ’ ಎಂದು ಘೋಷಿಸದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ನೇತೃತ್ವದ ಸರಕಾರವನ್ನು ದೂಷಿಸಲೆಂದು ಕಾಂಗ್ರೆಸ್ ಈ ಟೂಲ್ ಕಿಟ್ ಸಿದ್ಧಪಡಿಸಿತ್ತು ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಇದನ್ನು ನಕಲಿ ಟೂಲ್ಕಿಟ್ ಎಂದು ಕರೆದಿದ್ದ ಕಾಂಗ್ರೆಸ್ ಎಫ್ಐಆರ್ ಕೂಡ ದಾಖಲಿಸಿತ್ತು. ಪ್ರಕರಣ ತನಿಖೆ ಹಂತದಲ್ಲಿರುವಾಗ ನೀವು ಮಧ್ಯಪ್ರವೇಶಿಸಬೇಡಿ ಎಂದು ಟ್ವಿಟರ್ಗೆ ಕೇಂದ್ರ ಸರಕಾರ ಖಡಕ್ ಸೂಚನೆಯನ್ನೂ ನೀಡಿತ್ತು. ಸೋಮವಾರ ಪೊಲೀಸರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಟ್ವಿಟರ್ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದಾರೆ.
ರಮಣ್ ಸಿಂಗ್ ಹೇಳಿಕೆ ದಾಖಲು: ನಕಲಿ ಟೂಲ್ಕಿಟ್ ಹಂಚಿಕೊಂಡಿರುವ ಆರೋಪಕ್ಕೆ ಸಂಬಂಧಿಸಿ ಸೋಮವಾರ ರಾಯು³ರ ಪೊಲೀಸರು ಛತ್ತೀಸ್ ಗಡದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ರಮಣ್ ಸಿಂಗ್ ಅವರ ಹೇಳಿಕೆ ದಾಖಲಿಸಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MIT: ಮಾ.27ರಿಂದ 31ರವರೆಗೆ ಸೋಲಾರ್ ಎಲೆಕ್ಟ್ರಿಕ್ ವೆಹಿಕಲ್ ಚಾಂಪಿಯನ್ಶಿಪ್
Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ
Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್
STEAG: ಸೇನೆಯಲ್ಲಿ ಹೈಟೆಕ್ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್’ ತಂಡ!
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ