ವಿಂಬಲ್ಡನ್‌: 4ನೇ ಸುತ್ತಿನಲ್ಲಿ ಬಾರ್ಟಿ , 3ನೇ ಸುತ್ತಿಗೆ ಸಾನಿಯಾ-ಬೋಪಣ್ಣ


Team Udayavani, Jul 5, 2021, 12:08 AM IST

ವಿಂಬಲ್ಡನ್‌: 4ನೇ ಸುತ್ತಿನಲ್ಲಿ ಬಾರ್ಟಿ , 3ನೇ ಸುತ್ತಿಗೆ ಸಾನಿಯಾ-ಬೋಪಣ್ಣ

ಲಂಡನ್‌: ವಿಶ್ವದ ನಂ.1 ಹಾಗೂ ಅಗ್ರ ಶ್ರೇಯಾಂಕದ ಆಟಗಾರ್ತಿ ಆ್ಯಶ್ಲಿ ಬಾರ್ಟಿ ವಿಂಬಲ್ಡನ್‌ ಪಂದ್ಯಾವಳಿಯ 4ನೇ ಸುತ್ತು ತಲುಪಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ರೋಜರ್‌ ಫೆಡರರ್‌, ಅಲೆಕ್ಸಾಂಡರ್‌ ಜ್ವೆರೇವ್‌, ಫೆಲಿಕ್ಸ್‌ ಔಗರ್‌ ಅಲಿಯಾಸಿಮ್‌ ಕೂಡ ಮೂರನೇ ಸುತ್ತು ದಾಟುವಲ್ಲಿ ಯಶಸ್ವಿಯಾಗಿದ್ದಾರೆ. ಇವೆಲ್ಲ ಶನಿವಾರ ತಡರಾತ್ರಿಯ ಫ‌ಲಿತಾಂಶಗಳಾಗಿದ್ದು, ರವಿವಾರ ವಿಂಬಲ್ಡನ್‌ಗೆ ವಿರಾಮ ದಿನವಾಗಿತ್ತು.

“ಸೆಂಟರ್‌ ಕೋರ್ಟ್‌’ನಲ್ಲಿ ನಡೆದ ಮುಖಾಮುಖೀ ಯಲ್ಲಿ ಆ್ಯಶ್ಲಿ ಬಾರ್ಟಿ ಜೆಕ್‌ ಗಣರಾಜ್ಯದ ಕ್ಯಾಥರಿನಾ ಸಿನಿಯಕೋವಾ ವಿರುದ್ಧ 6-3, 7-5 ಅಂತರದ ಗೆಲುವು ಒಲಿಸಿಕೊಂಡರು. ಇವರಿಬ್ಬರು ಮುಖಾಮುಖೀಯಾದ ಮೊದಲ ನಿದರ್ಶನ ಇದಾಗಿದೆ.

ಬಾರ್ಟಿ ವರ್ಸಸ್‌ ಕ್ರೆಜಿಕೋವಾ
ಸೋಮವಾರದ ಸೆಣಸಾಟದಲ್ಲಿ ಬಾರ್ಟಿ ಮತ್ತೋರ್ವ ಜೆಕ್‌ ಆಟಗಾರ್ತಿ ಬಾಬೊìರಾ ಕ್ರೆಜಿಕೋವಾ ಅವರನ್ನು ಎದುರಿಸಲಿದ್ದಾರೆ. ಕ್ರೆಜಿಕೋವಾ ಸತತ 15 ಸಿಂಗಲ್ಸ್‌ ಪಂದ್ಯಗಳನ್ನು ಜಯಿಸಿದ್ದು, ಇತ್ತೀಚೆಗಷ್ಟೇ ಫ್ರೆಂಚ್‌ ಓಪನ್‌ ಚಾಂಪಿಯನ್‌ ಕೂಡ ಆಗಿದ್ದಾರೆ. ಹೀಗಾಗಿ ಈ ಪಂದ್ಯ ಟೆನಿಸ್‌ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬಾರ್ಬೊರಾ ಕ್ರೆಜಿಕೋವಾ ಲಾತ್ವಿಯಾದ ಅನಾಸ್ತಾಸಿಜಾ ಸೆವಸ್ತೋವಾ ವಿರುದ್ಧ ಭಾರೀ ಹೋರಾಟ ನಡೆಸಿ 7-6 (7-1), 3-6, 7-5 ಅಂತರದಿಂದ ಗೆದ್ದು ಬಂದರು.

3ನೇ ಸುತ್ತಿಗೆ ಸಾನಿಯಾ-ಬೋಪಣ್ಣ
ವನಿತಾ ಡಬಲ್ಸ್‌ನಲ್ಲಿ ಹೋರಾಟ ಕೊನೆಗೊಳಿಸಿದ ಕೆಲವೇ ಗಂಟೆಗಳಲ್ಲಿ ರೋಹನ್‌ ಬೋಪಣ್ಣ ಜತೆಗೂಡಿ ಮಿಶ್ರ ಡಬಲ್ಸ್‌ ದ್ವಿತೀಯ ಸುತ್ತಿನ ಪಂದ್ಯವನ್ನು ಆಡಲಿಳಿದ ಸಾನಿಯಾ ಮಿರ್ಜಾಗೆ ಗೆಲುವು ಒಲಿದಿದೆ. ಭಾರತೀಯ ಜೋಡಿಯೀಗ 3ನೇ ಸುತ್ತು ಪ್ರವೇಶಿಸಿದೆ.

“ಕೋರ್ಟ್‌ ನಂ. 18’ರಲ್ಲಿ ಉನ್ನತ ಮಟ್ಟದ ಪ್ರದರ್ಶನ ನೀಡಿದ ಸಾನಿಯಾ ಮಿರ್ಜಾ-ರೋಹನ್‌ ಬೋಪಣ್ಣ ಆತಿಥೇಯ ನಾಡಿನ ಐಡನ್‌ ಮೆಕ್‌ಹಗ್‌-ಎಮಿಲಿ ವೆಬ್ಲಿ ಸ್ಮಿತ್‌ ವಿರುದ್ಧ 6-3, 6-1 ಅಂತರದ ಜಯ ಸಾಧಿಸಿದರು. ಮಂಗಳವಾರದ ತೃತೀಯ ಸುತ್ತಿನ ಸ್ಪರ್ಧೆಯಲ್ಲಿ ಇವರು ಆಂಡ್ರೆಜಾ ಕ್ಲೆಪಾಕ್‌ (ಸ್ಲೊವೇನಿಯಾ)-ಜೀನ್‌ ಜೂಲಿಯನ್‌ ರೋಜರ್‌ (ನೆದರ್ಲೆಂಡ್ಸ್‌) ವಿರುದ್ಧ ಸೆಣಸಲಿದ್ದಾರೆ.

ದಿವಿಜ್‌ ದಂಪತಿ ಪರಾಭವ
ಮೊದಲ ಸಲ ವಿಂಬಲ್ಡನ್‌ನಲ್ಲಿ ಒಟ್ಟಿಗೇ ಕಣಕ್ಕಿಳಿದ ದಿವಿಜ್‌ ಶರಣ್‌-ಸಮಂತಾ ಮರ್ರೆ ದಂಪತಿಯ ಆಟ ಕೊನೆಗೊಂಡಿದೆ. ದ್ವಿತೀಯ ಸುತ್ತಿನ ಮಿಶ್ರ ಡಬಲ್ಸ್‌ ಸ್ಪರ್ಧೆಯಲ್ಲಿ ದಿಟ್ಟ ಪ್ರದರ್ಶನ ನೀಡಿದ ಹೊರತಾಗಿಯೂ ಡರಿಜಾ ಜುರಾಕ್‌ (ಕ್ರೊವೇಶಿಯಾ)-ರವೆನ್‌ ಕ್ಲಾಸೆನ್‌ (ದಕ್ಷಿಣ ಆಫ್ರಿಕಾ) ವಿರುದ್ಧದ ಪಂದ್ಯದಲ್ಲಿ ಅವರು 6-3, 6-7 (1-7), 3-6 ಅಂತರದಿಂದ ಪರಾಭವಗೊಂಡರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.