ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್; 10+03 ಸೂತ್ರ-ಬಿಎಸ್ ವೈ
ಸಂಪುಟದಲ್ಲಿರುವ ಹಾಲಿ ಸಚಿವರಿಗೆ ಯಾವುದೇ ತೊಂದರೆ ಇಲ್ಲ.
Team Udayavani, Jan 31, 2020, 6:31 PM IST
ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಕೊನೆಗೂ ಗ್ರೀನ್ ಸಿಗ್ನಲ್ ನೀಡಿರುವುದಾಗಿ ಬಿಎಸ್ ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಾತುಕತೆ ನಡೆಸಿದ ನಂತರ ತಿಳಿಸಿದರು.
ಶುಕ್ರವಾರ ದಿಲ್ಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಶಾ ಜತೆ ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಇನ್ನು ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಿಸುವುದಾಗಿ ಹೇಳಿದರು.
ಹಾಲಿ ಉಪಮುಖ್ಯಮಂತ್ರಿಗಳ ಹುದ್ದೆ ಮುಂದುವರಿಯಲಿದೆ. ಉಪಚುನಾವಣೆಯಲ್ಲಿ ಗೆದ್ದಿರುವ ಹತ್ತು ಮಂದಿಗೆ ಹಾಗೂ ಹಾಲಿ ಬಿಜೆಪಿ ಶಾಸಕರಿಗೆ ಸೇರಿ 10+3ರ ಸೂತ್ರದಡಿ ಸಚಿವ ಸಂಪುಟ ವಿಸ್ತರಿಸಲು ಹೈಕಮಾಂಡ್ ಅನುಮತಿ ನೀಡಿದೆ ಎಂದರು.
ಸಂಪುಟದಲ್ಲಿರುವ ಹಾಲಿ ಸಚಿವರಿಗೆ ಯಾವುದೇ ತೊಂದರೆ ಇಲ್ಲ. ಬೆಂಗಳೂರಿಗೆ ತೆರಳಿದ ಮೇಲೆ ಮಾತುಕತೆ ನಡೆಸಿ ಶೀಘ್ರವೇ ಸಚಿವ ಸಂಪುಟ ವಿಸ್ತರಿಸುತ್ತೇನೆ. ನಂತರ ಮುಂದಿನ ಒಂದು ವರ್ಷದವರೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು.