ಟೂತ್ಪೇಸ್ಟ್ ಎಂದುಕೊಂಡು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ವಿದ್ಯಾರ್ಥಿನಿ ಸಾವು
ತಂದೆ, ತಾಯಿ, ಸಹೋದರನನ್ನು ಅಗಲಿದ್ದಾಳೆ. ಮೃತರ ತಂದೆ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Team Udayavani, Feb 22, 2022, 10:46 AM IST
ಸುಳ್ಯ, ಫೆ. 21: ವಾರದ ಹಿಂದೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಫೆ. 20ರಂದು ಸಂಭವಿಸಿದೆ. ಮರ್ಕಂಜ ಗ್ರಾಮದ ಬೇರಿಕೆ ರಮೇಶ ಅವರ ಪುತ್ರಿ ಶ್ರಾವ್ಯಾ (17) ಮೃತ ವಿದ್ಯಾರ್ಥಿನಿ.
ಇದನ್ನೂ ಓದಿ:ಈಶ್ವರಪ್ಪ ವಿರುದ್ಧ ಕೇಸ್ ಯಾಕಿಲ್ಲ: ಸರ್ಕಾರ ಮತ್ತು ಪೋಲಿಸರ ವಿರುದ್ದ ಡಿಕೆ ಶಿವಕುಮಾರ್ ಗರಂ
ಪುತ್ತೂರಿನ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಶ್ರಾವ್ಯಾ ವಾರದ ಹಿಂದೆ ಮನೆಯಲ್ಲಿ ಹಲ್ಲುಜ್ಜುವ ಟೂತ್ಪೇಸ್ಟ್ ಎಂದು ತಪ್ಪಾಗಿ ತಿಳಿದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ್ದಳು. ಪರಿಣಾಮ ದೇಹದೊಳಗೆ ವಿಷ ಸೇರಿ ಆಕೆ ಅಸ್ವಸ್ಥಗೊಂಡಿದ್ದಳು.
ತತ್ಕ್ಷಣ ವಿಷಯ ತಿಳಿದ ಮನೆ ಮಂದಿ ಆಕೆ ಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ. ಆಕೆ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾಳೆ. ಮೃತರ ತಂದೆ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್-ಬೈಕ್ ಢಿಕ್ಕಿ:ವಿದ್ಯಾರ್ಥಿ ಸಾವು
ಮಂಗಳೂರು, ಫೆ.21: ಶಕ್ತಿನಗರ ಪದವಿನಲ್ಲಿ ಸೋಮವಾರ ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ, ಶಕ್ತಿನಗರ ರುದ್ರಭೂಮಿ ಸಮೀಪದ ನಿವಾಸಿ, ನಗರದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಪ್ರಜ್ವಲ್ ಸಾಲ್ಯಾನ್ (18) ಮೃತಪಟ್ಟಿದ್ದಾರೆ. ಢಿಕ್ಕಿಯಾದ ಬಳಿಕ ಬಸ್ ಪ್ರಜ್ವಲ್ ಅವರ ಮೇಲಿಂದ ಹಾದು ಹೋಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ