ಮನೆ ನಿರ್ಮಾಣಕ್ಕೆ ಆಗ್ರಹಿಸಿ ಮಳೆಯನ್ನೂ ಲೆಕ್ಕಿಸದೇ ಡಿಸಿ ಕಛೇರಿ ಎದುರು ಮಹಿಳೆಯರ ಪ್ರತಿಭಟನೆ
Team Udayavani, Sep 22, 2021, 2:31 PM IST
ವಿಜಯಪುರ : ಮನೆ ನಿರ್ಮಾಣಕ್ಕೆ ಆಗ್ರಹಿಸಿ ಕೊಲ್ಹಾರ ಪಟ್ಟಣದ ಕೊಳಚೆ ಪ್ರದೇಶದ ಮಹಿಳೆಯರು ಮಳೆಯನ್ನೂ ಲೆಕ್ಕಿಸದೇ ಪ್ರತಿಭಟನೆ ಆರಂಭಿಸಿದ್ದಾರೆ.
ಬುಧವಾರ ನಗರದಲ್ಲಿನ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ 50-60 ಜನರಿದ್ದ ಕೊಲ್ಹಾರ ಸ್ಲಂ ನಿವಾಸಿ ಮಹಿಳೆಯರು ಭಾರೀ ಮಳೆಯಲ್ಲೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೋಲ್ಹಾರ ಪಟ್ಟಣದಲ್ಲಿ ಕಳೆದ 25 ವರ್ಷಗಳಿಂದ ಸುಮಾರು 300 ಕುಟುಂಬಗಳು ವಾಸವಾಗಿರುವ ತಮನ್ನು ಸ್ಥಳ ಖಾಲಿ ಮಾಡುವಂತೆ ಪಟ್ಟಣ ಪಂಚಾಯತ ಅಧಿಕಾರಿಗಳು ಸೂಚಿಸಿದ್ದನ್ನು ವಿರೋಧಿಸಿ ಮಳೆಯಲ್ಲೂ ಪ್ರತಿಭಟನೆ ನಡೆಸಿದ್ದಾರೆ.
ತಮಗೆ ಪರ್ಯಾಯ ಸ್ಥಳ ತೋರಿಸದೇ ಇರುವ ಸ್ಥಳದಿಂದ ತೆರವು ಮಾಡಲು ಮುಂದಾಗಿರುವ ಕೊಲ್ಹಾರ ಪಟ್ಟಣ ಪಂಚಾಯತ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಾವು ಶಡ್ ಹಾಕಿಕೊಂಡು ವಾಸವಾಗಿದ್ದು, ಏಕಾಏಕಿ ಮನೆ ತೆರವು ಮಾಡಬೇಕು ಎಂದರೆ ಎಲ್ಲಿಗೆ ಹೋಗಬೇಕು ಎಂದು ಪ್ರತಿಭಟನಾ ನಿರತ ಮಹಿಳೆಯರು ಪ್ರಶ್ನಿಸಿದರು.
ಇದನ್ನೂ ಓದಿ :1.2 ಕೋಟಿ ವೈದ್ಯಕೀಯ ಸಲಹೆ; ಟೆಲಿಮೆಡಿಸಿನ್ ಬಳಕೆ ಕರ್ನಾಟಕ ನಂ.2
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ