ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ


Team Udayavani, Jun 16, 2021, 7:20 AM IST

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

ಬ್ರಿಸ್ಟಲ್‌: ಅತ್ತ ವಿರಾಟ್‌ ಕೊಹ್ಲಿ ಪಡೆ ಇಂಗ್ಲೆಂಡ್‌ ನೆಲದಲ್ಲಿ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಕಾರ್ಯತಂತ್ರ ರೂಪಿಸುತ್ತಿದ್ದರೆ, ಇತ್ತ ಮಿಥಾಲಿ ಬಳಗ ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಪಂದ್ಯವಾಡಲು ಕ್ಷಣಗಣನೆ ಆರಂಭಿಸಿದೆ. ಬುಧವಾರದಿಂದ 4 ದಿನಗಳ ಕಾಲ ಆತಿಥೇಯ ಇಂಗ್ಲೆಂಡ್‌ ವಿರುದ್ಧ ಬ್ರಿಸ್ಟಲ್‌ನಲ್ಲಿ ಏಕೈಕ ಟೆಸ್ಟ್‌ ಪಂದ್ಯ ನಡೆಯಲಿದೆ. ಇದು 7 ವರ್ಷಗಳ ಬಳಿಕ ಭಾರತದ ವನಿತೆಯರು ಆಡಲಿರುವ ಮೊದಲ ಟೆಸ್ಟ್‌ ಎಂಬ ಕಾರಣಕ್ಕೆ ಸಾಕಷ್ಟು ಕುತೂಹಲ ಹಾಗೂ ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಭಾರತ 2014ರಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಮೈಸೂರಿನಲ್ಲಿ ತನ್ನ ಕೊನೆಯ ಟೆಸ್ಟ್‌ ಆಡಿತ್ತು. ಅಂದು ಕೂಡ ಮಿಥಾಲಿ ಅವರೇ ಭಾರತದ ನಾಯಕಿ ಆಗಿದ್ದರು. ಜತೆಗೆ ಮಿಥಾಲಿ ಸೇರಿದಂತೆ ಅಂದಿನ ಇನ್ನಿಂಗ್ಸ್‌ ಗೆಲುವಿಗೆ ಸಾಕ್ಷಿಯಾದ 7 ಆಟಗಾರ್ತಿಯರು ಈಗಿನ ತಂಡದಲ್ಲಿರುವುದೊಂದು ವಿಶೇಷ. ಹೀಗಾಗಿ ಇಂಗ್ಲೆಂಡಿಗೆ ಹೋಲಿಸಿದರೆ ಭಾರತ ಹೆಚ್ಚು ಅನುಭವಿ ಎನ್ನಲಡ್ಡಿಯಿಲ್ಲ. 7 ವರ್ಷಗಳಿಂದ ಟೆಸ್ಟ್‌ ಆಡಿಲ್ಲ ಎಂಬುದಷ್ಟೇ ಒಂದು ಕೊರತೆ.

ಯುವ ಆಟಗಾರ್ತಿಯರಿಗೆ ಸವಾಲು
ಉಪನಾಯಕಿ ಹರ್ಮನ್‌ಪ್ರೀತ್‌ ಕೌರ್‌, ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ, ವೇಗಿ ಜೂಲನ್‌ ಗೋಸ್ವಾಮಿ ಮೊದಲಾದ ಅನು
ಭವಿಗಳಿಂದ ಭಾರತ ತಂಡ ಸದೃಢವಾಗಿದೆ. ಆದರೆ ಯುವ ಆಟಗಾರ್ತಿಯರಿಗೆ ಈ ಪಂದ್ಯ ದೊಡ್ಡ ಸವಾಲಾಗಬಹುದು. ಇವರೆಲ್ಲ ಸೀಮಿತ ಓವರ್‌ಗಳ ಪಂದ್ಯವನ್ನೇ ಆಡುತ್ತ ಬಂದವರಾದ್ದರಿಂದ ನಾಲ್ಕು ದಿನಗಳ ಮುಖಾಮುಖೀಗೆ ಹೊಂದಿಕೊಳ್ಳುವರೇ ಎಂಬ ಪ್ರಶ್ನೆಯೊಂದು ಸಹಜವಾಗಿಯೇ ಕಾಡುತ್ತಿದೆ. ಆದರೆ ಇವರೆಲ್ಲ ಪ್ರತಿಭಾವಂತರು ಹಾಗೂ ನಿರ್ಭೀತ ಆಟಗಾರ್ತಿಯರು ಎಂಬುದರಲ್ಲಿ ಎರಡು ಮಾತಿಲ್ಲ.

“ಲೇಡಿ ಸೆಹವಾಗ್‌’ ಎಂದೇ ಗುರುತಿಸಲ್ಪಡುವ 17 ವರ್ಷದ ಶಫಾಲಿ ವರ್ಮ ಆಡುವ ಬಳಗದಲ್ಲಿ ಸ್ಥಾನ ಪಡೆಯುವರೇ ಎಂಬು ದೊಂದು ಕುತೂಹಲ. ಅವರಿಗೆ ಸಚಿನ್‌ ಶುಭ ಹಾರೈಸಿದ್ದಾರೆ.

ದಾಖಲೆ ಭಾರತದ ಪರ
ಇಂಗ್ಲೆಂಡ್‌ ನೆಲದಲ್ಲಿ ಭಾರತೀಯರ ಟೆಸ್ಟ್‌ ದಾಖಲೆ ಅತ್ಯುತ್ತಮ ವಾಗಿದೆ ಎಂಬುದೊಂದು ಪ್ಲಸ್‌ ಪಾಯಿಂಟ್‌. ಇಲ್ಲಿ ಆಡಿದ ಕಳೆದೆರಡೂ ಟೆಸ್ಟ್‌ಗಳಲ್ಲಿ ಭಾರತ ಜಯ ಸಾಧಿಸಿರುವುದನ್ನು ಮರೆಯುವಂತಿಲ್ಲ.

ಇಂಗ್ಲೆಂಡ್‌ ನೆಚ್ಚಿನ ತಂಡವಾಗಿ ಗೋಚರಿಸಿದರೂ ಭಾರತದ ಅನುಭವಿ ಹಾಗೂ ಯುವ ಆಟಗಾರರ ಸಮ್ಮಿಶ್ರ ಪಡೆಯ ಬಗ್ಗೆ ಆತಿಥೇಯರಿಗೆ ಭೀತಿ ಇದ್ದೇ ಇದೆ. ಹೊಸಬರು ಹಾಗೂ ಪ್ರತಿಭಾನ್ವಿತರ ಪಡೆ ಯಾವತ್ತೂ ಹೆದರಿಕೆ ಇಲ್ಲದೆ ಆಡುತ್ತದೆ ಎಂಬುದಾಗಿ ಆತಿಥೇಯ ತಂಡದ ಉಪನಾಯಕಿ ನ್ಯಾಟ್‌ ಶಿವರ್‌ ಹೇಳಿರುವುದು ಭಾರತಕ್ಕೊಂದು ಸ್ಫೂರ್ತಿ!

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.