ಚುನಾವಣೆ ಸೋತರೆ ಸಚಿವ ಸ್ಥಾನಕ್ಕೇ ಕತ್ತರಿ

ಗೆಲ್ಲಲು ಶ್ರಮಿಸಿ: ಸಚಿವರಿಗೆ ಬಿಎಸ್‌ವೈ ಕರೆ

Team Udayavani, Nov 21, 2019, 6:30 AM IST

hh-36

ಬೆಂಗಳೂರು: ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಸೋಲು- ಗೆಲುವಿಗೆ ಆಯಾ ಕ್ಷೇತ್ರಗಳ ಉಸ್ತುವಾರಿ ಹೊತ್ತಿರುವ ಸಚಿವರೇ ಹೊಣೆ… ಒಂದೊಮ್ಮೆ ಹಿನ್ನಡೆಯಾದರೆ ಆ ಕ್ಷೇತ್ರದ ಉಸ್ತುವಾರಿ ಹೊತ್ತಿರುವ ಸಚಿವರ ತಲೆದಂಡ ಖಚಿತ…

-ಇದು ಮುಖ್ಯಮಂತ್ರಿ ಯಡಿಯೂರಪ್ಪ ಉಪ ಚುನಾವಣೆ ನಡೆಯುತ್ತಿ ರುವ ಕ್ಷೇತ್ರಗಳ ಉಸ್ತುವಾರಿ ಹೊತ್ತಿರುವ ಸಚಿವರಿಗೆ ನೀಡಿರುವ ಖಡಕ್‌ ಎಚ್ಚರಿಕೆ. ಕ್ಷೇತ್ರವಾರು ನಿಯೋಜಿಸಿ ರುವ ಉಸ್ತುವಾರಿಗಳು ಕ್ಷೇತ್ರದಲ್ಲೇ ಇದ್ದುಕೊಂಡು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂಬ ಎಚ್ಚರಿಕೆಯನ್ನೂ ಬಿಎಸ್‌ವೈ ನೀಡಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪ ಚುನಾವಣೆ ಕುರಿತಂತೆ ವಿಸ್ತೃತ ಚರ್ಚೆ ನಡೆದಿದ್ದು ಯಡಿಯೂರಪ್ಪ ಸಂಪುಟ ಸಹೋದ್ಯೋಗಿಗಳಿಗೆ ಉಪ ಚುನಾವಣೆ ಗೆಲುವಿನ ಸಂಬಂಧ ನಿರ್ದಿಷ್ಟ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಎಲ್ಲ ಮಾಹಿತಿ ಗೊತ್ತಾಗುತ್ತೆ
ಸಚಿವರು ಎಲ್ಲಿರುತ್ತೀರಿ, ಏನೆಲ್ಲ ಚಟುವಟಿಕೆ ಗಳಲ್ಲಿ ತೊಡಗಿಸಿ ಕೊಂಡಿದ್ದೀರಿ, ಯಾವ ಕೆಲಸ ಕಾರ್ಯಗಳಿಗೆ ಆದ್ಯತೆ ನೀಡುತ್ತಿದ್ದೀರಿ ಎಂಬುದು ಸಹಿತ ನಿಮ್ಮ ಚಟುವಟಿಕೆಗಳ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತದೆ.

ತ್ಯಾಗ ಮಾಡಿದವರ ಹಿತ ಕಾಪಾಡಬೇಕು
ಅನರ್ಹರು ಅಧಿಕಾರ, ಪಕ್ಷ, ಶಾಸಕ ಸ್ಥಾನ ಬಿಟ್ಟು ಬಂದಿದ್ದಾರೆ. ಅವರು ಮತ್ತೆ ವಿಧಾನಸಭೆಗೆ ಆಯ್ಕೆಯಾಗುವಂತೆ ಮಾಡುವುದು ನಮ್ಮ ಬದ್ಧತೆ. ಹಾಗಾಗಿ ಎಲ್ಲ ಅಭ್ಯರ್ಥಿಗಳ ಗೆಲುವಿಗೆ ಸಚಿವರೆಲ್ಲ ಒಟ್ಟಾಗಿ ಕಾರ್ಯ ನಿರ್ವಹಿಸಬೇಕು. ಆ ಮೂಲಕ ಸರಕಾರವನ್ನು ಸುಸ್ಥಿರಗೊಳಿಸಲು ಗಮನ ಹರಿಸಬೇಕು ಎಂದಿದ್ದಾರೆ ಎನ್ನಲಾಗಿದೆ.

ಕೆಲವೆಡೆ ಸಮಸ್ಯೆ ಇರುವ ಬಗ್ಗೆ ಕೆಲವು ಸಚಿವರು ತಿಳಿಸಿದಾಗ, ಕಾರಣ ಹೇಳಬೇಡಿ. ಧನಾತ್ಮಕ ಫ‌ಲಿತಾಂಶ ಬೇಕು. ಯಾವುದೇ ಕಾರಣಕ್ಕೂ ಉಪಚುನಾವಣೆಯಲ್ಲಿ ಹಿನ್ನಡೆ ಯಾಗಲೇಬಾರದು ಎಂದಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಶೆಟ್ಟರ್‌ ಹೆಗಲಿಗೆ !
ಅಥಣಿ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕೆ.ಎಸ್‌. ಈಶ್ವರಪ್ಪ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಿದೆ. ಆದರೆ ಲಕ್ಷ್ಮಣ ಸವದಿಯವರ ಕಾರ್ಯ ನಿರ್ವಹಣೆ ಬಗ್ಗೆಯೂ ಮಾಹಿತಿ ಪಡೆಯು ತ್ತಿರುವ ಬಿಎಸ್‌ವೈ, ಬೆಳಗಾವಿ ವ್ಯಾಪ್ತಿಯ ಅಥಣಿ, ಕಾಗವಾಡ, ಗೋಕಾಕ್‌ ಕ್ಷೇತ್ರಗಳ ಸಮನ್ವಯದತ್ತಲೂ ಗಮನಹರಿಸುವಂತೆ ಶೆಟ್ಟರ್‌ಗೆ ಸೂಚಿಸಿದ್ದಾರೆ.

ಡಿಸಿಎಂಗೆ ಕೆ.ಆರ್‌.ಪೇಟೆ
ಡಿಸಿಎಂ ಅಶ್ವತ್ಥನಾರಾಯಣ ಅವರಿಗೆ ಹೊಸಕೋಟೆ ಬದಲಾಗಿ ಕೆ.ಆರ್‌.ಪೇಟೆಯ ಉಸ್ತುವಾರಿ ವಹಿಸಲಾಗಿದೆ. ಈ ಕ್ಷೇತ್ರದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಜತೆಗೆ ಅಶ್ವತ್ಥನಾರಾಯಣ ಅವರಿಗೆ ಹೆಚ್ಚುವರಿಯಾಗಿ ಹೊಣೆ ನೀಡಲಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.