ಜೂ.14 ವಿಶ್ವ ರಕ್ತದಾನಿಗಳ ದಿನ; ಜೀವ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಲಿ

ಪ್ರತೀ ವರ್ಷ ಜೂನ್‌ 14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ.

Team Udayavani, Jun 14, 2022, 1:24 PM IST

ಜೂ.14 ವಿಶ್ವ ರಕ್ತದಾನಿಗಳ ದಿನ; ಜೀವ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಲಿ

ಮಾನವ ಆರೋಗ್ಯದಿಂದಿದ್ದರೆ ಏನನ್ನೂ ಸಾಧಿಸಬಲ್ಲ. ಆದರೆ ಇಂದಿನ ಧಾವಂತದ ಬದುಕಿನಲ್ಲಿ ಆರೋಗ್ಯದತ್ತ ಗಮನಕೊಡುವುದನ್ನೇ ಆತ ಮರೆಯುತ್ತಿ ದ್ದಾನೆ. ಇದರ ಪರಿಣಾಮವಾಗಿ ಹಲವಾರು ಕಾಯಿಲೆ, ವೈಕಲ್ಯಗಳು ನಮ್ಮನ್ನು ಕಾಡತೊಡಗಿವೆ. ಆದರೆ ಕೊರೊನಾ ಸಾಂಕ್ರಾಮಿಕ ಇಡೀ ವಿಶ್ವವನ್ನು ಬಾಧಿಸಿದ ಬಳಿಕ ಪ್ರತಿಯೊಬ್ಬರಿಗೂ ಆರೋಗ್ಯದ ಮಹತ್ವ ಅರಿವಿಗೆ ಬರತೊಡಗಿದೆ. ಮನುಷ್ಯನ ಪಾಲಿಗೆ ರಕ್ತ ಜೀವದ್ರವ್ಯ. ಸರಿಯಾದ ಪ್ರಮಾಣದಲ್ಲಿ ಉತ್ತಮ ರಕ್ತ ಹೊಂದಿರುವುದು ವ್ಯಕ್ತಿಯೋರ್ವ ಆರೋಗ್ಯದಿಂದಿರಲು ಆವಶ್ಯಕ. ಯಾವುದಾದರೂ ಕಾಯಿಲೆ, ಶಸ್ತ್ರಚಿಕಿತ್ಸೆ, ಅಪಘಾತ ಅಥವಾ ಇನ್ನಾವುದೇ ದುರ್ಘ‌ಟನೆಗಳು ಸಂಭವಿಸಿದ ವೇಳೆ ವ್ಯಕ್ತಿಯೋರ್ವ ತನ್ನ ದೇಹದಲ್ಲಿನ ರಕ್ತವನ್ನು ಕಳೆದುಕೊಳ್ಳಬಹುದು. ಇಂತಹ ಸಂದರ್ಭದಲ್ಲಿ ಆತನಿಗೆ ರಕ್ತವನ್ನು ನೀಡುವ ಅನಿವಾರ್ಯ ಪರಿಸ್ಥಿತಿ ಎದುರಾಗುತ್ತದೆ. ಈ ವೇಳೆ ಆರೋಗ್ಯವಂತ ಮನುಷ್ಯನಿಂದ ಪಡೆದ ರಕ್ತವನ್ನು ಆ ವ್ಯಕ್ತಿಗೆ ನೀಡುವ ಮೂಲಕ ಆತನ ಜೀವವನ್ನು ರಕ್ಷಿಸಲಾಗುತ್ತದೆ.

ರಕ್ತದಾನದ ಮಹತ್ವದ ಬಗೆಗೆ ಜನರಲ್ಲಿ ಜಾಗೃತಿ ಮೂಡಿಸುವ, ರಕ್ತದಾನಕ್ಕೆ ಪ್ರೇರಣೆ ನೀಡುವ ಮತ್ತು ರಕ್ತದಾನಿಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಪ್ರತೀ ವರ್ಷ ಜೂನ್‌ 14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ.

ಹಿನ್ನೆಲೆ
ರಕ್ತದ ಗುಂಪುಗಳ ವರ್ಗೀಕರಣ ಮತ್ತು ಅದನ್ನು ವಿಂಗಡಿಸುವ ಬಗೆಯನ್ನು ಕಂಡುಹಿಡಿದ ಕಾರ್ಲ್ ಲ್ಯಾಂಡ್‌ಸ್ಟೈನರ್‌ಅವರ ಜನ್ಮದಿನವಾದ ಜೂನ್‌ 14ರಂದು ವಿಶ್ವ ರಕ್ತದಾನಿಗಳ ದಿನ ಆಚರಿಸಲಾಗುತ್ತದೆ. ಈ ದಿನವನ್ನು ಮೊದಲ ಬಾರಿಗೆ 2004ರ ಜೂನ್‌ 14ರಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮತ್ತದರ ಸಹಸಂಸ್ಥೆಗಳು ಆರಂಭಿಸಿದವು. ಆ ಬಳಿಕ ನಿರಂತರವಾಗಿ ಪ್ರತೀ ವರ್ಷ ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತ ಬರಲಾಗಿದೆ. ಆರೋಗ್ಯವಂತ ವ್ಯಕ್ತಿಯು ಸ್ವಯಂ ಪ್ರೇರಣೆಯಿಂದ ಮತ್ತು ಉದಾರವಾಗಿ ಸುರಕ್ಷಿತ ರಕ್ತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಅಂತಾರಾಷ್ಟ್ರೀಯ ರೆಡ್‌ಕ್ರಾಸ್‌ ಮತ್ತು ರೆಡ್‌ ಕ್ರೆಸೆಂಟ್‌ ಸೊಸೈಟಿಗಳ ಒಕ್ಕೂಟವು ಹೊಂದಿದೆ.

ಈ ವರ್ಷದ ಧ್ಯೇಯ “ರಕ್ತದಾನ ಮಾಡಿ;
ಲೋಕದ ಹೃದಯ ಮಿಡಿಯು ತ್ತಿರಲಿ’-ಇದು ಈ ವರ್ಷದ ಧ್ಯೇಯವಾಕ್ಯ.
– ಭಾರತದಲ್ಲಿ ಪ್ರತೀ 2 ಸೆಕೆಂಡ್‌ಗೆ ಒಬ್ಬರಿಗೆ ರಕ್ತದ ಅಗತ್ಯ ಉಂಟಾಗುತ್ತದೆ.
– ಪ್ರತೀ ವರ್ಷ ಸರಾಸರಿ 5 ಕೋ. ಯುನಿಟ್‌ ರಕ್ತ ಬೇಕಾಗುತ್ತದೆ. ಆದರೆ ಸಂಗ್ರಹವಾಗುವುದು 2.5 ಕೋ. ಯುನಿಟ್‌ ಮಾತ್ರ.
– ನಮ್ಮಲ್ಲಿ ಹೆಚ್ಚಾಗಿ ಬೇಡಿಕೆ ಇರುವುದು ಒ ಗುಂಪಿನ ರಕ್ತಕ್ಕೆ.
– ರಕ್ತದಲ್ಲಿ 4 ಘಟಕಗಳು. ಅವು ಕೆಂಪು ರಕ್ತಕಣ, ಪ್ಲೇಟ್‌ಲೆಟ್ಸ್‌, ಪ್ಲಾಸ್ಮಾ ಮತ್ತು ಕ್ರಯೋ ಪ್ರಸಿಪಿಟೆಟ್‌. ರಕ್ತವನ್ನು ದಾನ ಮಾಡಬಹುದು ಇಲ್ಲವೇ ಯಾವುದಾದರೂ ಘಟಕಗಳನ್ನು ಕೂಡ ನೀಡಬಹುದು.
– ದಾನವಾಗಿ ಪಡೆದ ರಕ್ತದ ಬಾಳಿಕೆ ಅವಧಿ 35ರಿಂದ 42ದಿನಗಳು.

ಏನು ಪ್ರಯೋಜನ?
– ದಾನಿಗಳು ಒಮ್ಮೆ ರಕ್ತದಾನ ಮಾಡಿದರೆ ಮುಂದಿನ ಮೂರು ತಿಂಗಳುಗಳವರೆಗೆ ದಾನ ಮಾಡಬಾರದು.
– ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಅಲ್ಲದೆ ಉತ್ತಮ ಆರೋಗ್ಯ ಹೊಂದಬಹುದು ಹಾಗೆಯೇ ಕಾರ್ಯತತ್ಪರತೆ ಮತ್ತು ಜ್ಞಾಪಕಶಕ್ತಿ ಹೆಚ್ಚುತ್ತದೆ.
– ಇದರಿಂದ ರಕ್ತದ ಒತ್ತಡ, ಮಧುಮೇಹದಂತಹ ರೋಗಗಳನ್ನು ತಡೆಯಬಹುದಲ್ಲದೆ ಇದು ಕೊಬ್ಬಿನ ಅಂಶ ಕಡಿಮೆ ಮಾಡಿ ಹೃದಯಾಘಾತವನ್ನು ತಡೆಯಲು ನೆರವಾಗುತ್ತದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.