ನಾಮ್ ಸಭೆ: ಪಾಕ್ ವಿರುದ್ಧ ಮೋದಿ ಗುಡುಗು
ಭಯೋತ್ಪಾದನೆ, ಸುಳ್ಳು ಸುದ್ದಿ ಹಬ್ಬಿಸುತ್ತಿರುವುದಕ್ಕೆ ಪ್ರಧಾನಿ ಆಕ್ರೋಶ
Team Udayavani, May 5, 2020, 6:20 AM IST
ಹೊಸದಿಲ್ಲಿ: ಜಗತ್ತೇ ಕೋವಿಡ್-19 ವಿರುದ್ಧ ಹೋರಾಡುತ್ತಿದ್ದರೆ ಕೆಲವರು ಭಯೋತ್ಪಾದನೆ, ಸುಳ್ಳು ಸುದ್ದಿ, ತಿರುಚಿದ ವೀಡಿಯೋಗಳಂಥ ಅಪಾಯಕಾರಿ ವೈರಸ್ಗಳನ್ನು ಹಬ್ಬಿಸುವುದರಲ್ಲಿ ನಿರತರಾಗಿದ್ದಾರೆ.
ಸೋಮವಾರ ಇದೇ ಮೊದಲ ಬಾರಿಗೆ ಅಲಿಪ್ತ ಚಳವಳಿ (ನಾಮ್) ಶೃಂಗದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಪಾಕಿಸ್ಥಾನದ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದ್ದು ಹೀಗೆ. ಕೋವಿಡ್-19ದಂಥ ವೈರಸ್ನಿಂದಾಗಿ ಮಾನವತೆಯೇ ಅತಿದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದರೆ ಕೆಲವು ದೇಶಗಳು ಸುಳ್ಳು ಸುದ್ದಿ ಹಬ್ಬಿಸುತ್ತ, ಉಗ್ರ ಕೃತ್ಯಗಳನ್ನು ಎಸಗುತ್ತ ಸಮುದಾಯಗಳು ಮತ್ತು ದೇಶ-ದೇಶಗಳ ನಡುವೆ ವೈರತ್ವ ಉಂಟುಮಾಡುವ ಹೀನ ಕೃತ್ಯದಲ್ಲಿ ತೊಡಗಿವೆ ಎಂದು ಮೋದಿ ಕಿಡಿಕಾರಿದ್ದಾರೆ.
ಗಡಿಯಲ್ಲಿ ಸತತ ಗುಂಡಿನ ದಾಳಿ, ಉಗ್ರರ ಒಳನುಸುಳುವಿಕೆ, ಕಣಿವೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯ, ಗಲ್ಫ್ ರಾಷ್ಟ್ರಗಳಲ್ಲಿ ಭಾರತದ ವಿರುದ್ಧ ಪಿತೂರಿ ಮುಂತಾದ ಕುತಂತ್ರಗಳಲ್ಲಿ ತೊಡಗಿರುವ ಪಾಕ್ ವಿರುದ್ಧ ಪ್ರಧಾನಿ ಆಕ್ರೋಶ ಹೊರಹಾಕಿದ್ದಾರೆ.
ನೆರೆರಾಷ್ಟ್ರಗಳೊಂದಿಗೆ ಸಮನ್ವಯ
ಪ್ರಸ್ತುತ ಭಾರತವು ಜಗತ್ತಿನ ಫಾರ್ಮಸಿ ಎಂದು ಪರಿಗಣಿಸಲ್ಪಟ್ಟಿದೆ. ಕೋವಿಡ್-19ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಾವು ನೆರೆರಾಷ್ಟ್ರಗಳೊಂದಿಗೆ ಸಮನ್ವಯ ಸಾಧಿಸಿದ್ದೇವೆ. ಅಲಿಪ್ತ ಚಳವಳಿಯ 59 ಸದಸ್ಯ ರಾಷ್ಟ್ರಗಳು ಸೇರಿದಂತೆ ಸುಮಾರು 123 ಪಾಲುದಾರ ದೇಶಗಳಿಗೆ ವೈದ್ಯಕೀಯ ಸಾಮಗ್ರಿ ಪೂರೈಸಿದ್ದೇವೆ. ಅಭಿವೃದ್ಧಿಶೀಲ ದೇಶಗಳಲ್ಲಿ ವೈದ್ಯಕೀಯ ಸಾಮರ್ಥ್ಯ ವೃದ್ಧಿಗಾಗಿ ಹೆಜ್ಜೆಯಿಡುವಂತೆ ನಾಮ್ ನೋಡಿಕೊಳ್ಳಬೇಕು ಎಂದೂ ಮೋದಿ ಹೇಳಿದ್ದಾರೆ.
ಹೊಸ ಜಾಗತೀಕರಣ ಮಾದರಿ
ಕೋವಿಡ್-19 ಮಹಾಮಾರಿ ಹಾಲಿ ಅಂತಾರಾಷ್ಟ್ರೀಯ ವ್ಯವಸ್ಥೆಯಲ್ಲಿನ ಕೊರತೆಗಳನ್ನು ತೋರಿಸಿಕೊಟ್ಟಿದೆ. ಹೀಗಾಗಿ ಕೋವಿಡ್-19 ಬಿಕ್ಕಟ್ಟು ಶಮನವಾದ ಬಳಿಕ ನಮಗೆ ನ್ಯಾಯಯುತ, ಸಮಾನ ಮತ್ತು ಮಾನವೀಯತೆಯ ಆಧಾರದ ಹೊಸ ಜಾಗತೀಕರಣದ ಮಾದರಿ ಅಗತ್ಯ ಎಂದೂ ಮೋದಿ ಹೇಳಿದ್ದಾರೆ. ಕೋವಿಡ್-19ದಿಂದಾಗಿ ಪ್ರೀತಿಪಾತ್ರರನ್ನು ಕಳೆದುಕೊಂಡ ಜನರಿಗೆ ಅವರು ಸಾಂತ್ವನ ಹೇಳಿದ್ದಾರೆ. ಅಲಿಪ್ತ ಚಳವಳಿಯು ಜಗತ್ತಿನ ನೈತಿಕ ಧ್ವನಿ ಯಾಗಿದ್ದು, ಎಲ್ಲರನ್ನೂ ಒಳಗೊಂಡ ಜಾಗತಿಕ ಒಗ್ಗಟ್ಟನ್ನು ಉತ್ತೇಜಿಸಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ