World Sparrow Day 2023; ಎಲ್ಲಿ ಮರೆಯಾಗಿ ಹೋದವು…ಈ ಪುಟ್ಟ ಗುಬ್ಬಚ್ಚಿಗಳು!
ದಿನಗಳೆದಂತೆ ಶಬ್ದ ಮಾಲಿನ್ಯ ಹೆಚ್ಚಾಗಿದ್ದು, ಗುಬ್ಬಿಯ ಸಂತತಿ ಕ್ಷೀಣಿಸಿದೆ.
Team Udayavani, Mar 20, 2023, 10:32 AM IST
ನವದೆಹಲಿ: ಪ್ರತೀ ವರ್ಷ ಮಾರ್ಚ್ 20 ವಿಶ್ವ ಗುಬ್ಬಚ್ಚಿ ದಿನವನ್ನಾಗಿ ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಇದರ ಮೂಲ ಉದ್ದೇಶ ಗುಬ್ಬಚ್ಚಿಗಳನ್ನು ರಕ್ಷಣೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.
ಕಳೆದ ಕೆಲವು ವರ್ಷಗಳ ಹಿಂದೆ ಗುಬ್ಬಚ್ಚಿಯು ಮನೆಗಳಲ್ಲಿ ಗೂಡು ಕಟ್ಟಿಕೊಂಡು ಸ್ವತಂತ್ರವಾಗಿ ಬದುಕುತ್ತಿತ್ತು. ಕೆಲವು ಬಾರಿ ಮನೆಯ ಒಳಗಡೆ ಬಂದು ಸದ್ದು ಮಾಡುತ್ತ ಬದುಕುತ್ತಿತ್ತು. ಆದ್ರೆ ದಿನಗಳೆದಂತೆ ಶಬ್ದ ಮಾಲಿನ್ಯ, ಮೊಬೈಲ್ ಟವರ್ ಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು ಇದರ ಪರಿಣಾಮ ಗುಬ್ಬಿಯ ಸಂತತಿ ಕ್ಷೀಣಿಸಿದೆ.
ವಿಶ್ವ ಗುಬ್ಬಚ್ಚಿ ದಿನವನ್ನು ಭಾರತದ ನೇಚರ್ ಫಾರೆವರ್ ಸೊಸೈಟಿ, ಇಕೋ-ಸಿಸ್ ಆಕ್ಷನ್ ಫೌಂಡೇಶನ್ (ಫ್ರಾನ್ಸ್) ಮತ್ತು ಪ್ರಪಂಚದಾದ್ಯಂತ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಸಹಯೋಗದೊಂದಿಗೆ ಗುಬ್ಬಚ್ಚಿ ಮತ್ತು ಇತರ ಪಕ್ಷಿಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರಾರಂಭಿಸಲಾಗಿದೆ.
ಗುಬ್ಬಚ್ಚಿ ದಿನದ ಇತಿಹಾಸ : ಮೊಟ್ಟ ಮೊದಲ ಬಾರಿಗೆ 2010 ಮಾರ್ಚ್ 20 ರಂದು ಗುಬ್ಬಚ್ಚಿ ದಿನವನ್ನು ಆಚರಿಸಲಾಯಿತು. ಇದಾದ ಮೇಲೆ ಭಾರತ ಸೇರಿದಂತೆ ಎಲ್ಲಾ ದೇಶಗಳಲ್ಲಿ ಪ್ರತೀ ವರ್ಷ ಮಾರ್ಚ್ 20 ರಂದು ಗುಬ್ಬಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಭಾರತದ ನೇಚರ್ ಫಾರೆವರ್ ಸೊಸೈಟಿಯನ್ನು ಭಾರತೀಯ ಸಂರಕ್ಷಣಾವಾದಿ ಮೊಹಮ್ಮದ್ ದಿಲವಾರ್ ಸ್ಥಾಪನೆ ಮಾಡುತ್ತಾರೆ. ಅವರು ಗುಬ್ಬಚ್ಚಿಯ ಸಂರಕ್ಷಣೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹಲವಾರು ವರ್ಷಗಳಿಂದ ಸಾಕಷ್ಟು ಪ್ರಯತ್ನ ಮಾಡಿದ್ದಾರೆ.
2023ರ ಗುಬ್ಬಚ್ಚಿ ದಿನದ ಥೀಮ್ I love Sparrows. ಇದೇ ಹಿನ್ನೆಲೆಯಲ್ಲಿ ಗುಬ್ಬಿಗಳ ಸಂತತಿಯನ್ನು ರಕ್ಷಣೆ ಮಾಡುವುದರ ಜೊತೆ ಜೀವ ವೈವಿದ್ಯತೆಯನ್ನು ಉಳಿಸಿಕೊಂಡು ಮತ್ತು ಬೆಳೆಸಿಕೊಂಡು ಹೋಗುವುದೇ ಈ ವರ್ಷದ ಗುಬ್ಬಿ ದಿನದ ಧ್ಯೇಯವಾಗಿದೆ. ಮಾನವ ಮತ್ತು ಗುಬ್ಬಿಗಳ ನಡುವಿನ ಬಾಂಧವ್ಯ ಸುಮಾರು 10,000 ವರ್ಷಗಳಿಂದ ಇದೆ.
ಈ ಮೂಲಕ ನಾವು ಗೂಡುಗಳನ್ನು ನಿರ್ಮಿಸಿ, ಬೇಸಿಗೆಯಲ್ಲಿ ಗುಬ್ಬಚ್ಚಿಗಳಿಗೆ ನೀರು ಕುಡಿಯಲು ವ್ಯವಸ್ಥೆ ಮಾಡುವುದು, ಪಕ್ಷಿಯನ್ನು ರಕ್ಷಿಸಲು ಉದ್ಯಾನ ಸಿದ್ದ ಮಾಡುವುದು. ಅಲ್ಲದೆ ಮನೆಗಳ ಚಾವಣಿ ಮೇಲೆ ಪಕ್ಷಿಗಳು ವಾಸಿಸಲು ಅನುವು ಮಾಡುಕೊಡುವುದೇ ವಿಶ್ವ ಗುಬ್ಬಿ ದಿನಕ್ಕೆ ನಾವು ಸಲ್ಲಿಸುವ ಗೌರವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ