Delhi Chalo: ದೇಶದ ಅನ್ನದಾತರಾದ ರೈತರನ್ನು ಜೈಲಿಗೆ ಹಾಕುವುದು ತಪ್ಪು-ಕೇಜ್ರಿವಾಲ್
ಶಾಂತಿಯುತವಾಗಿ ಧರಣಿ ನಡೆಸಲು ಪ್ರತಿಯೊಬ್ಬ ನಾಗರಿಕನಿಗೂ ಹಕ್ಕಿದೆ
Team Udayavani, Feb 13, 2024, 11:39 AM IST
ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೆಹಲಿ ಚಲೋ ಪ್ರತಿಭಟನೆಗೆ ಮುಂದಾಗಿರುವ ರೈತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಇದನ್ನೂ ಓದಿ:Team India; ಕೆಎಲ್ ರಾಹುಲ್ ವಿರುದ್ಧ ಕಿಡಿಕಾರಿದ ಬಿಸಿಸಿಐ: ಕಾರಣ ಇಲ್ಲಿದೆ
ಮಂಗಳವಾರ(ಫೆ.13) ಪಂಜಾಬ್, ಹರ್ಯಾಣದಿಂದ ರಾಜಧಾನಿ ದೆಹಲಿಯತ್ತ ಸಾವಿರಾರು ಮಂದಿ ರೈತರು ದೆಹಲಿ ಚಲೋ ಪ್ರತಿಭಟನೆ ಹಿನ್ನೆಲೆಯಲ್ಲಿ ಆಗಮಿಸುತ್ತಿದ್ದು, ಏತನ್ಮಧ್ಯೆ ದೆಹಲಿಯ ಬವಾನಾ ಸ್ಟೇಡಿಯಂ ಅನ್ನು ಜೈಲನ್ನಾಗಿ ಪರಿವರ್ತಿಸಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಆಪ್ ಸರ್ಕಾರ ತಳ್ಳಿಹಾಕಿದ ನಂತರ ಕೇಜ್ರಿವಾಲ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸೋಮವಾರ ಕೇಂದ್ರ ಸರ್ಕಾರ, ಫೆ,13ರಂದು ರೈತರ ದೆಹಲಿ ಚಲೋ ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ಬವಾನಾ ಸ್ಟೇಡಿಯಂ ಅನ್ನು ತಾತ್ಕಾಲಿಕವಾಗಿ ಜೈಲನ್ನಾಗಿ ಪರಿವರ್ತಿಸಬೇಕೆಂದು ಕೋರಿ ಪತ್ರ ಬರೆದಿತ್ತು.
ರೈತರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಂತಿಯುತವಾಗಿ ಧರಣಿ ನಡೆಸಲು ಪ್ರತಿಯೊಬ್ಬ ನಾಗರಿಕನಿಗೂ ಹಕ್ಕಿದೆ ಎಂದು ಆಪ್ ಪ್ರತಿಕ್ರಿಯೆ ನೀಡಿದೆ. ರೈತರು ದೇಶದ ಅನ್ನದಾತರಾಗಿದ್ದಾರೆ. ಹೀಗಾಗಿ ಅನ್ನದಾತರನ್ನು ಜೈಲಿನಲ್ಲಿಡುವುದು ತಪ್ಪು ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ.
ಭಾರೀ ಪ್ರಮಾಣದಲ್ಲಿ ದೆಹಲಿಯತ್ತ ರೈತರು ಟ್ರ್ಯಾಕ್ಟರ್ ಗಳಲ್ಲಿ ಆಗಮಿಸುತ್ತಿದ್ದು, ದೆಹಲಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಬ್ಬಿಣದ ತಡೆಬೇಲಿಯನ್ನು ಆಯಕಟ್ಟಿನ ಸ್ಥಳಗಳಲ್ಲಿ ಅಳವಳಡಿಸಲಾಗಿದೆ ಎಂದು ವರದಿ ಹೇಳಿದೆ.
ರೈತರ ದೆಹಲಿ ಚಲೋ ಹಿನ್ನೆಲೆಯಲ್ಲಿ ಸಿಂಘು, ಟಿಕ್ರಿ ಮತ್ತು ಘಾಜಿಪುರ್ ಗಡಿಯಲ್ಲಿ ಪೊಲೀಸ್, ಅರೆಸೇನಾಪಡೆ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ