ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ


Team Udayavani, Feb 4, 2023, 7:56 PM IST

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

ಸವದತ್ತಿ: ಕೋವಿಡ್ ಹಿನ್ನಲೆಯಲ್ಲಿ ಕಳೆದ ಎರಡು ವರ್ಷ ಕಳೆಗುಂದಿದ್ದ ಭರತ ಹುಣ್ಣಿಮೆ ಜಾತ್ರೆಗೆ ಈ ಬಾರಿ ವಿಶೇಷ ಮೇರಗು ಬಂದಿದೆ. ಭಾನುವಾರ ನಡೆಯಲಿರುವ ಜಾತ್ರೆಯ ಅಂಗವಾಗಿ ಯಲ್ಲಮ್ಮನಗುಡ್ಡ ಮಧುವನಗಿತ್ತಿಯಂತೆ ಸಿದ್ದಗೊಳ್ಳುತ್ತಿದೆ. ದೇವಸ್ಥಾನ, ಪವಳಿಗಳನ್ನು ಶುಚಿಗೊಳಸಿ ತಳಿರು ತೋರಣಗಳಿಂದ ಅಮ್ಮನ ದೇವಸ್ಥಾನವನ್ನು ಅಲಂಕರಿಸಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಒಂದೆಡೆ ಸೇರಿ ಜಾತ್ರೆ ಆಚರಿಸುವ ಅಮ್ಮನ ಸನ್ನಿಧಿಯಲ್ಲಿ ಮೂಲಸೌಕರ್ಯ ಒದಗಿಸುವ ಕಾರ್ಯ ನಡೆದಿದೆ.

ಚಕ್ಕಡಿ, ಟ್ರ್ಯಾಕ್ಟರ್, ಖಾಸಗಿ ವಾಹನ, ದ್ವಿಚಕ್ರ ವಾಹನಗಳ ಮೂಲಕ ದೇವಸ್ಥಾನದತ್ತ ಆಗಮಿಸುವ ಭಕ್ತರು ಇಲ್ಲಿಯೇ ಕೆಲ ದಿನಗಳವರೆಗೆ ವಾಸ್ತವ್ಯ ಹೂಡಿ, ದೇವಿಗೆ ಪರಡಿ ತುಂಬುತ್ತಾರೆ. ಪರಂಪರೆಯಂತೆ ಪೂಜಾ ಕೈಂಕರ್ಯ ನೆರವೇರಿಸುತ್ತಾರೆ. ಶನಿವಾರದಿಂದಲೇ ತಂಡೋಪ ತಂಡವಾಗಿ ಭಕ್ತರು ಗುಡ್ಡದತ್ತ ಹೆಜ್ಜೆ ಹಾಕುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಭಾನುವಾರ ಅದ್ದೂರಿಯಾಗಿ ಜಾತ್ರೆ ಜರುಗಲಿದ್ದು, 20 ಲಕ್ಷಕ್ಕೂ ಅಧಿಕ ಭಕ್ತರು ಸೇರಲಿದ್ದಾರೆ.

ದೂರದೂರುಗಳಿಂದ ವಿವಿಧ ವಾದ್ಯಮೇಳಗಳೊಂದಿಗೆ ಸಾಂಸ್ಕೃತಿಕ ಕುಣಿತ ಹಾಕುತ್ತಾ ಕಾಲ್ನಡಿಗೆ ಮೂಲಕ ಜೋಗುತಿಯರು ದೇವರ ಮೂರ್ತಿ ಹೊತ್ತು ದೇವಸ್ಥಾನದತ್ತ ಹೆಜ್ಜೆ ಹಾಕುತ್ತಿರುವ ದೃಷ್ಯಗಳು ಕಾಣ ಸಿಗುತ್ತಿವೆ. ವರ್ಷಕ್ಕೊಮ್ಮೆ ಅತೀದೊಡ್ಡ ಪ್ರಮಾಣದಲ್ಲಿ ಜರುಗಲಿರುವ ಈ ಜಾತ್ರೆಗೆ ಸೇರಿದ ಅಸಂಖ್ಯಾತ ಭಕ್ತರನ್ನು ಕಣ್ತುಂಬಿಸಿಕೊಳ್ಳುವುದೇ ಸಂಭ್ರಮದ ಸಂಗತಿ.

ಅತೀ ಹೆಚ್ಚು ಜನಸಂದಣಿಯಾಗುವ ಜಾತ್ರೆ ಇದಾಗಿದ್ದು, ಹುಣ್ಣಿಮೆಯ ಮೊದಲ ಹಾಗೂ ನಂತರದ ಮಂಗಳವಾರ, ಶುಕ್ರವಾರದಂದು ಜನ ಸಾಗರವೇ ಹರಿದು ಬರಲಿದೆ. ಈಗಾಗಲೇ ಗುಡ್ಡದ ಇಕ್ಕೆಲಗಳಲ್ಲಿ ಭಕ್ತರ ದಂಡು ಬೀಡು ಬಿಟ್ಟಿದೆ. ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಹಾಗೂ ಸಂಕಷ್ಟ ಪರಿಹರಿಸುವ ದೈವೀಶಕ್ತಿಯಾಗಿ ಭಕ್ತರ ಮನದಲ್ಲಿ ನೆಲೆಸಿರುವ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಗೆ ಮುನ್ನಾದನವಾದ ಶನಿವಾರದಿಂದಲೇ ಕುಟಂಬ ಸಮೇತರಾಗಿ ಅಮ್ಮನ ಸನ್ನಿಧಿಯತ್ತ ಮುಖ ಮಾಡಿದ್ದಾರೆ.

ಉದ್ಘಾಟನೆಯಾಗದ ರಸ್ತೆ ಸೇತುವೆ: ಜೋಗುಳಬಾವಿ ಮಾರ್ಗದಿಂದ ಉಗರಗೋಳ ನಾಕಾದವರೆಗೆ ರಸ್ತೆ ಸೇತುವೆ ನಿರ್ಮಾಣ ಹಂತದಲ್ಲಿದೆ. ಕಾಮಗಾರಿ ಆರಂಭವಾಗಿ 5 ವರ್ಷವಾದರೂ ಅದನ್ನು ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸದಿರುವದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ಸಿಸಿ ಕ್ಯಾಮೆರಾಗಳ ನಿಗಾ: 300 ಪೊಲೀಸ್, 500 ಗೃಹ ರಕ್ಷಕ ಸಿಬ್ಬಂದಿ ನಿಯೋಜಿಸಿ ಬೀಗಿ ಭದ್ರತೆಗೆ ಒತ್ತು ಕೊಡಲಾಗಿದ್ದು, ಭಕ್ತರ ಚಲನವಲನ ಮೇಲೆ ನಿಗಾಯಿರಿಸಲು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪೊಲೀಸ್ ಇಲಾಖೆ ಸಂಚಾರ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಜರುಗಿಸಿದೆ.

ವಿಶೇಷ ಬಸ್ ವ್ಯವಸ್ಥೆ: ಜಾತ್ರೆಗೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸಲು ಸಾರಿಗೆ ಸಂಸ್ಥೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿ, ಚಿಕ್ಕೋಡಿ, ಧಾರವಾಡ, ನರಗುಂದ ಸವದತ್ತಿ ಮತ್ತಿತರ ಘಟಕಗಳಿಂದ ಬಸ್‍ಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿವೆ. ಗದಗ, ರೋಣ, ಬಳ್ಳಾರಿ, ರಾಯಚೂರ, ಸಿಂಧನೂರುಗಳಿಂದ ಆಗಮಿಸುವ ಭಕ್ತರಿಗೆ ವಾಹನಳ ನಿಲುಗಡೆಗಾಗಿ ವ್ಯವಸ್ಥೆ ಕಲ್ಪಿಸಲಾಗಿದೆ. ಉಗರಗೋಳದ ಕಿರಿದಾದ ರಸ್ತೆಯಲ್ಲಿ ದಟ್ಟನೆಯಿಂದಾಗಿ ಸಮಸ್ಯೆ ಎದುರಿಸುವದು ಸರ್ವೇ ಸಾಮಾನ್ಯದಂತಿದೆ.

– ಡಿ.ಎಸ್. ಕೊಪ್ಪದ, ಸವದತ್ತಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.