ವರ್ಷಾಂತ್ಯ ಕೆಪಿಸಿಸಿ ಪುನಾರಚನೆ?

ಶೀಘ್ರ ಎಐಸಿಸಿ ಪುನಾರಚನೆ ಮಾಡುವ ಸಾಧ್ಯತೆ

Team Udayavani, Dec 12, 2019, 6:45 AM IST

sx-48

ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ ಈಗಾಗಲೇ ಹಲವಾರು ಹಿನ್ನಡೆ ಸಾಧಿಸಿರುವ ದೇಶದ ಅತ್ಯಂತ ಹಳೆಯ ಪಕ್ಷವಾಗಿರುವ ಕಾಂಗ್ರೆಸ್‌, ಎಐಸಿಸಿ ಪುನಾರಚನೆ ಮಾಡಿ ಪಕ್ಷ ಸಂಘಟನೆ ಮಾಡಲು ಎಲ್ಲ ತಯಾರಿ ಮಾಡಿಕೊಂಡಿದೆ. ಎಐಸಿಸಿಗೆ ರಾಜ್ಯದಿಂದ ಯಾರು ಹೋಗುತ್ತಾರೆ ಎಂಬುದೇ ಸದ್ಯದ ಕುತೂಹಲದ ಸಂಗತಿಯಾಗಿದೆ.

ಇತ್ತ, ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ವಿಸರ್ಜನೆ ಮಾಡಲಾಗಿದ್ದ ಕೆಪಿಸಿಸಿ ಪುನಾರಚನೆಗೂ ಸಿದ್ಧತೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್‌, ಎಂ.ಬಿ. ಪಾಟೀಲ್‌, ಎಚ್‌.ಕೆ. ಪಾಟೀಲ್‌, ಡಾ| ಜಿ. ಪರಮೇಶ್ವರ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬಂದಿದೆ. ಸಿದ್ದರಾಮಯ್ಯ ಈಗಾಗಲೇ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರನ್ನು ಮುಂದೆ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡುವ ಸಾಧ್ಯತೆಯೂ ಇದೆ. ಆದರೆ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರನ್ನು ವಿಪಕ್ಷ ನಾಯಕನ ಸ್ಥಾನದಲ್ಲಿಯೇ ಮುಂದುವರೆಸುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.

ಖರ್ಗೆ ಅಧ್ಯಕ್ಷ?
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಮುಖವಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿ ಬರುತ್ತಿದೆ. ಸದ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದು, ಮಹಾರಾಷ್ಟ್ರ ಉಸ್ತುವಾರಿಯಾಗಿದ್ದಾರೆ. ಒಂದು ವೇಳೆ ಖರ್ಗೆಯವರಿಗೆ ಅಧ್ಯಕ್ಷ ಸ್ಥಾನ ನೀಡಿ, ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕರಾಗಿ ಮುಂದುವರಿಸಿದರೆ, ಎರಡೂ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಡಾ| ಜಿ. ಪರಮೇಶ್ವರ್‌ ಹಾಗೂ ಹಿರಿಯ ನಾಯಕ ಎಚ್‌.ಕೆ. ಪಾಟೀಲ್‌ ಅವರನ್ನು ಸಿಡಬ್ಲ್ಯುಸಿ (ಕಾಂಗ್ರೆಸ್‌ ವರ್ಕಿಂಗ್‌ ಕಮಿಟಿ)ಗೆ ನೇಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಾರ್ಯದರ್ಶಿಗಳಾಗಲು ಕಾತುರ
ರಾಜ್ಯ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ದೊರೆಯದೆ ಇರುವ ಅನೇಕ ನಾಯಕರು ಎಐಸಿಸಿ ಕಾರ್ಯದರ್ಶಿಯಾಗುವ ಬಗ್ಗೆ ಆಸಕ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ. ಪ್ರಮುಖವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ದಿನೇಶ್‌ ಗುಂಡೂರಾವ್‌ ಅವರಿಗೆ ಸೂಕ್ತ ಸ್ಥಾನ ಕಲ್ಪಿಸಲು ಅವರನ್ನು ಎಐಸಿಸಿ ಕಾರ್ಯದರ್ಶಿಯಾಗಿ ನೇಮಿಸಿ ಯಾವುದಾದರೂ ರಾಜ್ಯದ ಉಸ್ತುವಾರಿ ವಹಿಸಬಹುದು ಎನ್ನಲಾಗುತ್ತಿದೆ.

ರಾಹುಲ್‌ ಮರು ಪ್ರವೇಶ?
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಜವಾಬ್ದಾರಿ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ರಾಹುಲ್‌ ಗಾಂಧಿ ಅವರನ್ನೇ ಮತ್ತೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮರು ನೇಮಕ ಮಾಡುವ ಸಾಧ್ಯತೆ ಇದೆ ಎಂದು ದಿಲ್ಲಿ ಮಟ್ಟದಲ್ಲಿ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಯಾಗುತ್ತಿದೆ. ಒಂದು ವೇಳೆ, ರಾಹುಲ್‌ ಗಾಂಧಿ ಮತ್ತೆ ಅಧ್ಯಕ್ಷ ಸ್ಥಾನಕ್ಕೇರಿದರೆ ರಾಜ್ಯದಿಂದ ಯುವ ಕಾಂಗ್ರೆಸ್‌ ನಾಯಕರಿಗೆ ರಾಷ್ಟ್ರ ರಾಜಕಾರಣದಲ್ಲಿ ಹೆಚ್ಚಿನ ಅವಕಾಶ ದೊರೆಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

-  ಶಂಕರ ಪಾಗೋಜಿ

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.