ಗೂನುಬೆನ್ನು ಸಮಸ್ಯೆ ನಿವಾರಣೆಗೆ ಸರಳ ಆಸನ

ಜೀರ್ಣ ಶಕ್ತಿಯೂ ಹೆಚ್ಚುವುದರ ಜತೆಗೆ ಬೆನ್ನಿನ ಮೂಳೆಯೂ ಹೆಚ್ಚು ಬಲವಾಗುವ ಜತೆಗೆ ಗೂನುಬೆನ್ನು ಸಮಸ್ಯೆ ನಿವಾರಣೆ

Team Udayavani, Jun 16, 2021, 8:39 AM IST

ಗೂನುಬೆನ್ನು ಸಮಸ್ಯೆ ನಿವಾರಣೆಗೆ ಸರಳ ಆಸನ

ಕೆಲವರು ಬಾಲ್ಯದಿಂದಲೇ ಕತ್ತು ಬಗ್ಗಿಸಿ ಅಥವಾ ಭುಜವನ್ನು ತಗ್ಗಿಸಿ ನಡೆಯುತ್ತಾರೆ. ಅಧಿಕ ಭಾರ ಹೊರುವುದೂ ಸೇರಿದಂತೆ ಹಲವು ಕಾರಣಗಳಿಂದ ಗೂನು ಬೆನ್ನಿನ ಸಮಸ್ಯೆ ತಲೆದೋರುತ್ತದೆ. ವಂಶವಾಹಿಯಾಗಿಯೂ ಈ ಸಮಸ್ಯೆ ಬರುವುದನ್ನು ಅಲ್ಲಗಳೆಯುವಂತಿಲ್ಲ. ಆರಂಭದಲ್ಲೇ ಈ ಸಮಸ್ಯೆಯ ನಿವಾರಣೆ ಅನಿವಾರ್ಯವಾಗಿದ್ದು, ನಿರ್ಲಕ್ಷಿಸಿದಲ್ಲಿ ಸಮಸ್ಯೆ ಹೆಮ್ಮರವಾಗಿ ಬೆಳೆಯಲಿದೆ. ಸರಳ ಯೋಗಾಸನಗಳನ್ನು ಮಾಡುವ ಮೂಲಕ ಈ ಸಮಸ್ಯೆಯ ಪರಿಹಾರ ಸಾಧ್ಯವಿದ್ದು, ಅಂತಹ ಕೆಲವು ಆಸನಗಳನ್ನು ಇಲ್ಲಿ ತಿಳಿಸಲಾಗಿದೆ.

ಪರ್ವತಾಸನ
ಪದ್ಮಾಸನದ ಮಾದರಿಯಲ್ಲಿ ಎರಡೂ ಕೈಯನ್ನು ಮೇಲೆತ್ತಿ ಹಸ್ತಗಳನ್ನು ಜೋಡಿಸಬೇಕು. ಇದರಿಂದ ಕಾಲುಗಳಿಗೆ ರಕ್ತಪರಿಚಲನೆ ಸರಾಗವಾಗಿ ಎಲುಬುಗಳು ಗಟ್ಟಿಯಾಗುತ್ತವೆ. ಈ ವೇಳೆ ಬೆನ್ನು ನೇರವಾಗುವುದರಿಂದ ಹೊಟ್ಟೆಯ ಬೊಜ್ಜು ಕರಗುವುದು.

ತಾಡಾಸನ
ನೆರವಾಗಿ ನಿಂತು ಎರಡು ಕೈಗಳನ್ನು ನಮಸ್ಕಾರ ಭಂಗಿಯಲ್ಲಿ ಜೋಡಿಸಬೇಕು. ಈ ಆಸನದಲ್ಲಿ ಶರೀರದಲ್ಲಿ ಎಲ್ಲೂ ಸಡಿಲತೆ ಇಲ್ಲದೆ ನಿಧಾನವಾಗಿ ಉಸಿರಾಟದ ಪ್ರಕ್ರಿಯೆ ಪ್ರಾರಂಭವಾಗಬೇಕು. ಇದರಿಂದ ಕಾಲುಗಳ ವಕ್ರತೆ ದೂರವಾಗುವುದರ ಜತೆಗೆ ಬೆನ್ನು ನೋವಿನ ನಿವಾರಣೆ ಸಾಧ್ಯ.

ಶಲಭಾಸನ
ನೆಲದ ಮೇಲೆ ಕೆಳಮುಖವಾಗಿ ಮಲಗಿ ಎರಡು ಕೈಗಳನ್ನು ಮುಷ್ಠಿಕಟ್ಟಿ ತೊಡೆಗಳ ಕೆಳಗೆ ಇಡಬೇಕು. ಕಾಲನ್ನು ಮೇಲೆ ಮಾಡಿ ಮುಖವನ್ನು ನಿಧಾನಕ್ಕೆ ಮೇಲೆತ್ತಬೇಕು. ಇದರಿಂದ ಕಾಲಿನ ಬಲ ಹೆಚ್ಚುತ್ತದೆ ಮತ್ತು ಬೆನ್ನು ನೋವು ದೂರವಾಗುತ್ತದೆ.

ಪಾದಹಸ್ತಾಸನ
ಈ ಆಸನದಲ್ಲಿ ಪಾದ ಮತ್ತು ಅಂಗೈ ಸಂಪೂರ್ಣವಾಗಿ ನೆಲದ ಮೇಲೆ ತಾಗಿರುತ್ತದೆ. ಸೂರ್ಯ ನಮಸ್ಕಾರದ ಮೂರನೇ ಭಂಗಿಯಲ್ಲಿ ಈ ಪಾದಹಸ್ತಾಸನವನ್ನು ಕಾಣಬಹುದಾಗಿದ್ದು ಇದನ್ನು ಬೆಳಗ್ಗೆ ಮಾಡುವುದು ಉತ್ತಮ. ಇದರಿಂದ ಬೆನ್ನಿಗೆ ವಿಶೇಷ ವ್ಯಾಯಾಮ ದೊರೆತಂತಾಗುತ್ತದೆ. ಹಟ್ಟೆಯ ಬೊಜ್ಜು ಕರಗಿಸಲು, ಜೀರ್ಣಕ್ರಿಯೆ ಉತ್ತಮವಾಗಲು ಮತ್ತು ಸೊಂಟ, ತೊಡೆ ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ. ಇದನ್ನು ದಿನಕ್ಕೆ 10ರಿಂದ 15 ಬಾರಿ ಮಾಡುವುದರಿಂದ ಗೂನು ಬೆನ್ನಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಮಕರಾಸನ
ಮೊದಲು ಬೋರಲಾಗಿ ಮಲಗಿ ಬಳಿಕ ಕೈಗಳನ್ನು ಮಡಚಿ ಒಂದು ಕೆನ್ನೆಯನ್ನು ಕೈಗೆ ಒರೆಗಿಸಿಕೊಂಡು ವಿಶ್ರಾಂತಿ ಪಡೆಯಬೇಕು. ಬಹುತೇಕರಿಗೆ ಇದು ಆಸನವೆಂದು ತಿಳಿಯದಿದ್ದರೂ ದೈನಿಕವಾಗಿ ಮಲಗುವಾಗ ಈ ಭಂಗಿಯನ್ನು ತಮಗರಿವಿಲ್ಲದಂತೆ ಮಾಡುತ್ತಾರೆ. ಇದರಿಂದ ಶರೀರಕ್ಕೆ ವಿಶ್ರಾಂತಿ ಜತೆಗೆ ಗೂನು ಬೆನ್ನಿನ ಸಮಸ್ಯೆ ನಿವಾರಣೆ ಸಾಧ್ಯವಾಗುತ್ತದೆ.

ಧನುರಾಸನ
ನೆಲದ ಮೇಲೆ ಬೋರಲಾಗಿ ಮಲಗಿ ಬಳಿಕ ಎರಡು ಕಾಲನ್ನು ಮಂಡಿಗಳ ಬಳಿ ಹಿಂದಕ್ಕೆ ಬಗ್ಗಿಸಿ ಕೈಗಳಿಂದ ಕಾಲನ್ನು ಹಿಡಿದಿಟ್ಟು ಉಸಿರನ್ನು ಸಂಪೂರ್ಣವಾಗಿ ಹೊರಬಿಡಬೇಕು. ಧನುರಾಸನದಲ್ಲಿ ದೇಹವು ಬಿಲ್ಲಿನಂತೆ ಬಗ್ಗಿರುತ್ತದೆ. ಇದನ್ನು ಮಾಡುವುದರಿಂದ ಹೃದಯ, ಹೊಟ್ಟೆನೋವು ಸಮಸ್ಯೆ ನಿವಾರಣೆಯಾಗುವುದರೊಂದಿಗೆ ಶ್ವಾಸಕೋಶವು ಬಲಿಷ್ಠವಾಗುತ್ತದೆ. ಜೀರ್ಣ ಶಕ್ತಿಯೂ ಹೆಚ್ಚುವುದರ ಜತೆಗೆ ಬೆನ್ನಿನ ಮೂಳೆಯೂ ಹೆಚ್ಚು ಬಲವಾಗುವ ಜತೆಗೆ ಗೂನುಬೆನ್ನು ಸಮಸ್ಯೆ ನಿವಾರಣೆಯಾಗಲಿದೆ.

ಸೂಚನೆ: ಈ ಎಲ್ಲ ಆಸನಗಳನ್ನು ತರಬೇತಿ ಪಡೆದು ಮಾಡುವುದು ಒಳಿತು. ಯೋಗಾತ್ಮಕವಾಗಿ ಮಾಡಲು ಹೊರಟರೆ ಬೆನ್ನು ನೋವು, ಇತರ ಶಾರೀರಿಕ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.