ಪದ್ಮ ಪ್ರಶಸ್ತಿ; PM ಮೋದಿ, ರಾಷ್ಟ್ರಪತಿ ಎದುರು ಮಂಡಿಯೂರಿ ನಮಸ್ಕರಿಸಿದ 125 ವರ್ಷದ ಯೋಗ ಗುರು

ನೆರೆದಿದ್ದ ಅತಿಥಿಗಳು ಎದ್ದು ನಿಂತು ಯೋಗ ಗುರುವಿನ ಸರಳತೆಗೆ ಚಪ್ಪಾಳೆ ತಟ್ಟಿ ಅಭಿನಂದಿಸಿದರು.

Team Udayavani, Mar 22, 2022, 2:49 PM IST

ಪದ್ಮ ಪ್ರಶಸ್ತಿ; PM ಮೋದಿ, ರಾಷ್ಟ್ರಪತಿ ಎದುರು ಮಂಡಿಯೂರಿ ನಮಸ್ಕರಿಸಿದ 125 ವರ್ಷದ ಯೋಗ ಗುರು

ನವದೆಹಲಿ:ಈ ಬಾರಿ ಕೇಂದ್ರ ಸರ್ಕಾರ ತೆರೆಮರೆ ಕಾಯಿಗಳಂತಿದ್ದ ಹಲವಾರು ವ್ಯಕ್ತಿಗಳನ್ನು ಗುರುತಿಸಿ ದೇಶದ ಉನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ ಪ್ರಶಸ್ತಿ ನೀಡಿದೆ. ಈ ಸಂದರ್ಭದಲ್ಲಿ 125 ವರ್ಷದ ಯೋಗ ಗುರು ಸ್ವಾಮಿ ಶಿವಾನಂದ ಅವರ ಸಾಧನೆ ಗುರುತಿಸಿ ಪದ್ಮ ಪ್ರಶಸ್ತಿ ನೀಡಲಾಗಿದೆ.

ಇದನ್ನೂ ಓದಿ:ಬುದ್ಧಿ ಹೇಳಿದ್ರೂ ಬುದ್ಧಿ ಬಿಡದ ಸೈಕೋ ಪತಿ: ಪತ್ನಿ ಕೊಲೆಗೈದು, ತಾನೂ ಆತ್ಮಹತ್ಯೆಗೆ ಯತ್ನ

ಪ್ರಧಾನಿ ಮೋದಿ, ರಾಷ್ಟ್ರಪತಿಗೆ ಯೋಗ ಗುರುವಿನ ಸಾಷ್ಟಾಂಗ ನಮಸ್ಕಾರ:

ಪ್ರಶಸ್ತಿ ಸ್ವೀಕರಿಸುವ ಮುನ್ನ ಯೋಗ ಗುರು ಮುಂದಿನ ಸಾಲಿನಲ್ಲಿ ಕುಳಿತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಮುಂಭಾಗದಲ್ಲಿ ಮಂಡಿಯೂರಿ ಸಾಷ್ಟಾಂಗ ನಮಸ್ಕಾರ ಮಾಡಿದರು. ಇದನ್ನು ಗಮನಿಸಿದ ಪ್ರಧಾನಿ ಮೋದಿಯವರು ಕೂಡಲೇ ಎದ್ದು ನಿಂತು ತಾವೂ ಕೂಡಾ ಬಾಗಿ ಭೂಮಿಯನ್ನು ಸ್ಪರ್ಶಿಸಿ ನಮಸ್ಕರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಅತಿಥಿಗಳು ಎದ್ದು ನಿಂತು ಯೋಗ ಗುರುವಿನ ಸರಳತೆಗೆ ಚಪ್ಪಾಳೆ ತಟ್ಟಿ ಅಭಿನಂದಿಸಿದರು.

ಬಿಳಿ ಕುರ್ತಾ, ಧೋತಿ ಧರಿಸಿದ್ದ ಸ್ವಾಮಿ ಶಿವಾನಂದ ಅವರು ವೇದಿಕೆ ಏರುವ ಮುನ್ನ ಮಂಡಿಯೂರಿ ಸಾಷ್ಟಾಂಗ ನಮಸ್ಕಾರ ಮಾಡಿದ ನಂತರ, ಮತ್ತೊಮ್ಮೆ ವೇದಿಕೆ ಏರಿದ ಮೇಲೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಮುಂದೆ ಮಂಡಿಯೂರಿ ಸಾಷ್ಟಾಂಗ ನಮಸ್ಕಾರ ಮಾಡುತ್ತಿರುವಾಗಲೇ ರಾಷ್ಟ್ರಪತಿ ಸ್ವಾಮಿ ಶಿವಾನಂದ ಅವರನ್ನು ತಾವೇ ಎತ್ತಿ ಪದ್ಮಪ್ರಶಸ್ತಿಯನ್ನು ನೀಡಿದ್ದು, ಈ ಸಂದರ್ಭದಲ್ಲಿಯೂ ರಾಷ್ಟ್ರಪತಿ ಭವನದಲ್ಲಿ ಚಪ್ಪಾಳೆ ಮುಗಿಲುಮುಟ್ಟಿತ್ತು.

ಮುಂಜಾನೆ ಯೋಗ, ಎಣ್ಣೆ ರಹಿತ ಬೇಯಿಸಿದ ಅಡುಗೆ, ಶಿಸ್ತುಬದ್ಧ ಮತ್ತು ನಿಯಂತ್ರಿತ ಸರಳ ಜೀವನವೇ ಸ್ವಾಮಿ ಶಿವಾನಂದ ಅವರ ರೋಗಮುಕ್ತ ಹಾಗೂ ಸುದೀರ್ಘ ಜೀವನ ನಡೆಸಲು ಸಹಾಯಕವಾಗಿದೆ.

ಶಿವಾನಂದ ಅವರು 1896ರ ಆಗಸ್ಟ್ 8ರಂದು ಅವಿಭಜಿತದ ಭಾರತದ ಶೈಲ್ಲೆಟ್ ಜಿಲ್ಲೆ(ಈಗ ಬಾಂಗ್ಲಾದೇಶದಲ್ಲಿದೆ)ಯಲ್ಲಿ ಜನಿಸಿದ್ದರು. ತಮ್ಮ 6ನೇ ವಯಸ್ಸಿನಲ್ಲಿಯೇ ಸ್ವಾಮಿ ಶಿವಾನಂದ ಅವರು ತಂದೆ, ತಾಯಿಯನ್ನು ಕಳೆದುಕೊಂಡಿದ್ದರು. ಅದು ತೀವ್ರವಾದ ಬಡತನದಲ್ಲಿಯೇ ಪೋಷಕರು ವಿಧಿವಶರಾಗಿದ್ದರು. ಸ್ವಾಮಿ ಶಿವಾನಂದ ಅವರು ಬಡತನದಲ್ಲಿ ಕಾಲಕಳೆದವರು, ಭಿಕ್ಷುಕರಾಗಿದ್ದ ಪೋಷಕರು ಶಿವಾನಂದ ಅವರಿಗೆ ಬಾಲ್ಯದಲ್ಲಿ ಗಂಜಿ ನೀರನ್ನು ಕುಡಿಸಿ ಬೆಳೆಸಿರುವುದಾಗಿ ವರದಿ ತಿಳಿಸಿದೆ.

ಪೋಷಕರ ಅಂತ್ಯಕ್ರಿಯೆ ನಡೆದ ನಂತರ ಶಿವಾನಂದ್ ಅವರನ್ನು ಪಶ್ಚಿಮಬಂಗಾಳದ ನವದ್ವೀಪ್ ನಲ್ಲಿರುವ ಗುರೂಜೀ ಆಶ್ರಮಕ್ಕೆ ಕರೆತರಲಾಯಿತು. ಗುರು ಓಂಕಾರಾನಂದ ಗೋಸ್ವಾಮಿ ಶಿವಾನಂದ್ ಅವರನ್ನು ಆಶ್ರಮಕ್ಕೆ ಕರೆತಂದು ಯೋಗ ಸೇರಿದಂತೆ ಎಲ್ಲಾ ರೀತಿಯ ಧಾರ್ಮಿಕ ಶಿಕ್ಷಣವನ್ನು ನೀಡಿದ್ದರು.

ಸಾಮಾಜಿಕ, ಯೋಗ ಸೇವೆಯಲ್ಲಿ ತೊಡಗಿರುವ ಸ್ವಾಮಿ ಶಿವಾನಂದ ಅವರು ದೇಶ, ವಿದೇಶಗಳಲ್ಲಿ ತಿರುಗಾಟ ನಡೆಸಿದ್ದರು. ಸ್ವಾಮಿ ಶಿವಾನಂದ ಅವರು ಕಳೆದ 50 ವರ್ಷಗಳಿಂದ ಪುರಿಯಲ್ಲಿ 400-600 ಮಂದಿ ಕುಷ್ಠರೋಗ ಪೀಡಿತ ಭಿಕ್ಷುಕರ ಸೇವೆಯಲ್ಲಿ ವೈಯಕ್ತಿಕವಾಗಿ ತೊಡಗಿಕೊಂಡಿದ್ದಾರೆ.

ಟಾಪ್ ನ್ಯೂಸ್

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.