ಪ್ರಧಾನಿ ಸಂಕಲ್ಪದಂತೆ ಯೋಗ ವಿಶ್ವವ್ಯಾಪಿ: ನಳಿನ್
75 ಕೋಟಿ ಸೂರ್ಯನಮಸ್ಕಾರ ಮಹಾಯಜ್ಞ
Team Udayavani, Feb 7, 2022, 5:00 AM IST
ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ವಿವಿಧೆಡೆ 75 ಕೋಟಿ ಸೂರ್ಯನಮಸ್ಕಾರ ಮಹಾಯಜ್ಞದ ಮಂಗಳೂರು ಕಾರ್ಯಕ್ರಮ ನಗರದ ಮಂಗಳಾ ಕ್ರೀಡಾಂಗಣದಲ್ಲಿ ರವಿವಾರ ಬೆಳಗ್ಗೆ ನಡೆಯಿತು.
ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು. ಆರೋಗ್ಯ ಕಾಪಾಡಿಕೊಳ್ಳಲು ಯೋಗವೇ ಮಾರ್ಗ. ಪ್ರಧಾನಿ ಮೋದಿ ಯೋಗಕ್ಕೆ ಸ್ಥಾನಮಾನ ನೀಡಲು ಸಂಕಲ್ಪಿಸಿದಂತೆ ಯೋಗ ಇಂದು ವಿಶ್ವವ್ಯಾಪಿಯಾಗಿದೆ.ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ 75 ಕೋಟಿ ಸೂರ್ಯನಮಸ್ಕಾರ ಮಹಾಯಜ್ಞ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಕುಟುಂಬ ಪ್ರಬೋಧನ್ ಮಂಗಳೂರು ವಿಭಾಗ ಸಂಯೋಜಕ ಗಜಾನನ ಪೈ ಯೋಗದ ಮಹತ್ವ ವಿವರಿಸಿದರು. ಆರೆಸ್ಸೆಸ್ನ ಮಂಗಳೂರು ಮಹಾನಗರ ಸಂಘಚಾಲಕ್ ಡಾ| ಸತೀಶ್ ರಾವ್, ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜ, ಹಿರಿಯ ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ, ಕ್ರೀಡಾಭಾರತಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬೋಜರಾಜ್ ಕಲ್ಲಡ್ಕ, ಮಂಗಳೂರಿನ ಪತಂಜಲಿ ಯೋಗಪೀಠದ ಡಾ| ಜ್ಞಾನೇಶ್, ಸುಜಾತಾ ಮಾರ್ಲ, ಮಂಗಳೂರಿನ ಪತಂಜಲಿ ಶಿಕ್ಷಣ ಪ್ರತಿಷ್ಠಾನದ ಏಕನಾಥ ಬಾಳಿಗ, ಹಿಂದೂ ಜಾಗರಣ ವೇದಿಕೆಯ ಅಮಿತ್, ಮಂಗಳೂರು ಆವಿಷ್ಕಾರ ಯೋಗ ಸಂಸ್ಥೆಯ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.
ಕ್ರೀಡಾಭಾರತಿ ಮಂಗಳೂರು ಅಧ್ಯಕ್ಷ ಕಾರಿಯಪ್ಪ ರೈ ಸ್ವಾಗತಿಸಿದರು. ಕೃಷ್ಣ ಶೆಟ್ಟಿ ತಾರೆಮಾರ್ ವಂದಿಸಿದರು. ಕೇಶವ ಬಂಗೇರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ