ಜನಸಂಖ್ಯೆ ಹೆಚ್ಚಳವು ದೇಶದ ಅಭಿವೃದ್ಧಿಗೆ ಮಾರಕ, ನಿಯಂತ್ರಿಸಬೇಕಾದ ಅಗತ್ಯವಿದೆ : ಯೋಗಿ
Team Udayavani, Jul 11, 2021, 8:15 PM IST
ಲಕ್ನೋ: “ಜನಸಂಖ್ಯೆಯ ಹೆಚ್ಚಳವು ಅಭಿವೃದ್ಧಿಗೆ ಮಾರಕವಾಗಿದ್ದು, ಅದನ್ನು ನಿಯಂತ್ರಿಸಬೇಕಾದ ಅಗತ್ಯವಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ವಿಶ್ವ ಜನಸಂಖ್ಯಾ ದಿನವಾದ ಭಾನುವಾರ ಲಕ್ನೋದಲ್ಲಿ “ಉತ್ತರ ಪ್ರದೇಶ ಜನಸಂಖ್ಯಾ ನೀತಿ 2021-2030′ ಅನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದ್ದಾರೆ.
ಜನಸಂಖ್ಯೆಯ ಹೆಚ್ಚಳವು ಪ್ರಗತಿಗೆ ಅಡ್ಡಿಯಾಗುತ್ತಲೇ ಇದೆ. ಕಳೆದ 4 ದಶಕಗಳಿಂದಲೂ ಈ ಬಗ್ಗೆ ಚರ್ಚಿಸಲಾಗುತ್ತಿದೆ. ಸಮಾಜದ ಎಲ್ಲ ವರ್ಗಗಳನ್ನೂ ಗಮನದಲ್ಲಿ ಇರಿಸಿಕೊಂಡು ನಮ್ಮ ಸರ್ಕಾರ ಈ ನೀತಿ ಜಾರಿ ಮಾಡುತ್ತಿದೆ. ರಾಜ್ಯದ ಜನಸಂಖ್ಯೆಯಲ್ಲಿ ನಿಯಂತ್ರಣ ಹಾಗೂ ಸ್ಥಿರತೆ ತಂದು, ಆ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಬೇಕಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಜತೆಗೆ, 2026ರ ವೇಳೆಗೆ ರಾಜ್ಯದಲ್ಲಿ ಜನನ ಪ್ರಮಾಣವನ್ನು 2.1ಕ್ಕಿಳಿಸುವುದು ನಮ್ಮ ಗುರಿ ಎಂದೂ ಹೇಳಿದ್ದಾರೆ.
ಇದನ್ನೂ ಓದಿ :ಸೆಪ್ಪೆಂಬರ್ ಹೊತ್ತಿಗೆ ಕೋವಿಡ್ ಲಸಿಕೆ ಹಾಕಿಸಿ 3ನೇ ಅಲೆ ತಡೆಗಟ್ಟಿ: ಸುರೇಶ್ ಕುಮಾರ್
ಇದೇ ವೇಳೆ, ಹೊಸ ಜನಸಂಖ್ಯಾ ಕರಡು ನೀತಿಗೆ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷ ಕಾಂಗ್ರೆಸ್, “ಇದೊಂದು ರಾಜಕೀಯ ಅಜೆಂಡಾ’ ಎಂದು ಕರೆದರೆ, ಸಮಾಜವಾದಿ ಪಕ್ಷವು ಈ ನೀತಿಯನ್ನು “ಪ್ರಜಾಸತ್ತೆಯ ಕಗ್ಗೊಲೆ’ ಎಂದು ಬಣ್ಣಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು