ಬೀಡಾಡಿ ದನಗಳ ಸಾಕುವ ರೈತರಿಗೆ 900 ರೂ. ಸಹಾಯ ಧನ: ಉತ್ತರ ಪ್ರದೇಶ ಸಿಎಂ
Team Udayavani, Nov 22, 2020, 10:46 PM IST
ಸಾಂದರ್ಭಿಕ ಚಿತ್ರ ಬಳಸಲಾಗಿದೆ
ಭೋಪಾಲ/ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದ ತಾಂಡಾ ಫಾಲ್ಸ್ ಎಂಬಲ್ಲಿ ಗೋಪಾಷ್ಟಮಿ ಪ್ರಯುಕ್ತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋವುಗಳಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೀಡಾಡಿ ದನಗಳನ್ನು ಗೋ ಶಾಲೆಯಲ್ಲಿ ಇರಿಸಬೇಕು. ನಂತರ ಅವುಗಳನ್ನು ರೈತರಿಗೆ ಹಂಚುವ ವ್ಯವಸ್ಥೆಯಾಗಬೇಕು. ಬೀಡಾಡಿ ದನಗಳನ್ನು ಸಾಕುವ ಪ್ರತಿ ರೈತರಿಗೆ ಪ್ರತಿ ದನಕ್ಕೆ 900 ರೂ. ಸಿಗುವಂತಾಗಬೇಕು ಎಂದು ಹೇಳಿದ್ದಾರೆ.
ಮೊದಲ ಸಭೆ: ಮಧ್ಯಪ್ರದೇಶದಲ್ಲಿ ನೂತನವಾಗಿ ರಚಿಸಿರುವ ಗೋ ಸಂಪುಟ (ಕೌ ಕ್ಯಾಬಿನೆಟ್)ದ ಮೊದಲ ಸಭೆ ಭಾನುವಾರ ನಡೆಯಿತು. ಅಧಿಕೃತ ನಿವಾಸದಲ್ಲಿ ಆರಂಭದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಗೋವುಗಳಿಗೆ ಪತ್ನಿಸಮೇತರಾಗಿ ಪೂಜೆ ಸಲ್ಲಿಸಿದರು.
ಗೋಪಾಷ್ಟಮಿ ದಿನವೇ ಈ ಸಭೆ ನಡೆದಿರುವುದು ಮಹತ್ವ ಪಡೆದಿದೆ. ಪಶು ಸಂಗೋಪನೆ, ಅರಣ್ಯ, ಪಂಚಾಯಿತಿ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಗೃಹ ಮತ್ತು ರೈತರ ಕಲ್ಯಾಣ ಸಚಿವಾಲಯಗಳನ್ನು ಸೇರಿಸಿ ಗೋ ಸಂಪುಟವನ್ನು ಬುಧವಾರ ಸಿಎಂ ಚೌಹಾಣ್ ಘೋಷಿಸಿದ್ದರು. ಗ್ರಾಮೀಣ ಪ್ರದೇಶದ ಅರ್ಥ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಸರ್ಕಾರ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ