ನೆಹರೂ ಹೆಸರು ಎತ್ತುತ್ತೇನೆ… ಎಂಜಾಯ್‌!ಕಾಂಗ್ರೆಸ್‌ ಕಾಲೆಳೆದ  ಮೋದಿ

ಕಾಂಗ್ರೆಸ್‌ ಕಾಲೆಳೆದ  ಮೋದಿ;ಹಣದುಬ್ಬರ ವಿಚಾರದಲ್ಲಿ ನೆಹರೂ ಹೇಳಿಕೆ ಉಲ್ಲೇಖ

Team Udayavani, Feb 8, 2022, 10:40 AM IST

ನೆಹರೂ ಹೆಸರು ಎತ್ತುತ್ತೇನೆ… ಎಂಜಾಯ್‌!

ಹೊಸದಿಲ್ಲಿ: “ಕಾಂಗ್ರೆಸ್‌ ಸದಾ ಬಡತನವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿತು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಸಿದ್ದಾರೆ. ಜತೆಗೆ, ತಮ್ಮ ವಾದವನ್ನು ಸಮರ್ಥಿಸಿಕೊಳ್ಳಲು ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರೂ ಹೆಸರನ್ನು ಉಲ್ಲೇಖಿಸಿ, ಕಾಂಗ್ರೆಸ್‌ ವಿರುದ್ಧ ವಾಕ್‌ಪ್ರಹಾರ ನಡೆಸಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ನಾನು ನೆಹರೂ ಅವರ ಹೆಸರನ್ನೇ ಉಲ್ಲೇಖೀಸುವುದಿಲ್ಲ ಎಂದು ನೀವು ಯಾವಾಗಲೂ ದೂರುತ್ತಿರುತ್ತೀರಲ್ವಾ…. ಇಂದು ನಾನು ಅದೆಷ್ಟು ಬಾರಿ ನೆಹರೂ ಹೆಸರು ಹೇಳುತ್ತೇನೆ ಎಂದು ನೋಡಿ. ಎಂಜಾಯ್‌ ಮಾಡಿ…’ ಎನ್ನುತ್ತಲೇ ತಮ್ಮ ಮಾತುಗಳನ್ನು ಆರಂಭಿಸಿದರು.

“ಪಂಡಿತ್‌ ಜವಾಹರಲಾಲ್‌ ನೆಹರೂ ಅವರು ಅಂದು ಕೆಂಪುಕೋಟೆಯಲ್ಲಿ ಭಾಷಣ ಮಾಡುತ್ತಾ, ಕೊರಿಯಾ ಯುದ್ಧದಿಂದಾಗಿ ಹಣದುಬ್ಬರ ಉಂಟಾಗಿದೆ ಎಂದಿದ್ದರು. ಅಮೆರಿಕದಲ್ಲಿ ಏನಾದರೂ ಗೊಂದಲಗಳು ಆದರೆ ಇಲ್ಲಿ ಹಣದುಬ್ಬರ ಜಾಸ್ತಿಯಾಗುತ್ತದೆ ಎಂದಿದ್ದರು. ದೇಶದ ಮೊದಲ ಪ್ರಧಾನಮಂತ್ರಿಗಳು ದೇಶವಾಸಿಗಳ ಮುಂದೆ ಹೇಗೆ ಕೈಚೆಲ್ಲಿದ್ದರು ಎಂಬುದನ್ನು ನೀವು ಅರ್ಥಮಾಡಿಕೊಳ್ಳಿ’ ಎಂದೂ ಮೋದಿ ಹೇಳಿದ್ದಾರೆ. ಒಂದು ವೇಳೆ, ಈಗಲೂ ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಿದ್ದರೆ, ಹಣದುಬ್ಬರ ಉಂಟಾಗಲು ಕೊರೊನಾವೈರಸ್‌ ಕಾರಣ ಎಂದು ಹೇಳಿ ನಿಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದಿರಿ ಎಂದೂ ಹೇಳುವ ಮೂಲಕ ಮೋದಿ ಕಾಂಗ್ರೆಸ್‌ ನಾಯಕರ ಕಾಲೆಳೆದಿದ್ದಾರೆ. ಕಾಂಗ್ರೆಸ್‌ ಹಲವು ಚುನಾವಣೆಗಳನ್ನು “ಗರೀಬಿ ಹಟಾವೋ’ ಎಂಬ ಸ್ಲೋಗನ್‌ನಿಂದಲೇ ಗೆದ್ದಿದೆ. ಆದರೆ ಬಡತನವನ್ನು ನಿರ್ಮೂಲನೆ ಮಾಡುವಲ್ಲಿ ಸಂಪೂರ್ಣ ವಿಫ‌ಲವಾಗಿದೆ ಎಂದೂ ಅವರು ಆರೋಪಿಸಿದ್ದಾರೆ.

ದೀರ್ಘ‌ ಲೇಖನ ಮಾತ್ರವೇ?
“ಕಾಂಗ್ರೆಸ್‌ ಹಿರಿಯ ನಾಯಕ ಪಿ. ಚಿದಂಬರಂ ಅವರು ಈಗ ಆರ್ಥಿಕತೆಯ ಬಗ್ಗೆ ದೀರ್ಘ‌ವಾದ ಲೇಖನಗಳನ್ನು ಬರೆಯುತ್ತಾರೆ. ಆದರೆ ಅವರು ಅಧಿಕಾರದಲ್ಲಿದ್ದಾಗ ಹಣದುಬ್ಬರವನ್ನು ಇಳಿಸಲು ಯಾವ ಪ್ರಯತ್ನವನ್ನೂ ಮಾಡಲಿಲ್ಲ’  ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ. ಸರಕಾರದ ನೀತಿನಿಯಮಾವಳಿಗಳ ಬಗ್ಗೆ ಪ್ರಸ್ತಾವಿಸಿ ಮಾತನಾಡಿದ ಅವರು, “ದೇಶದ ಗ್ರಾಹಕ ದರ ಸೂಚ್ಯಂಕ ಹಣದುಬ್ಬರದ ಕುರಿತು ಕಾಂಗ್ರೆಸ್‌ನವರು ಅವರ ಪಕ್ಷ ಅಧಿಕಾರದಲ್ಲಿದ್ದಾಗಲೇ ಮಾತನಾಡಬೇಕಿತ್ತು. 2014ರಿಂದ 2020ರ ವರೆಗೆ ಹಣದುಬ್ಬರವು ಶೇ.5ಕ್ಕಿಂತ ಕೆಳಗಿರುವಂತೆ ನಮ್ಮ ಸರಕಾರ ನೋಡಿಕೊಂಡಿದೆ. ಕೊರೊನಾ ಸೋಂಕು ಇದ್ದರೂ ಹಣದುಬ್ಬರ ನಿಯಂತ್ರಣ ತಪ್ಪಿ ಹೋಗದಂತೆ ನಾವು ನೋಡಿಕೊಂಡಿದ್ದೇವೆ. ಹಿಂದಿನ ಯುಪಿಎ ಸರಕಾರದ ಅವಧಿಯಲ್ಲಿ ಹಣದುಬ್ಬರವು ಎರಡಂಕಿಗೆ ತಲುಪಿತ್ತು. ಅಂದಿನ ವಿತ್ತ ಸಚಿವರಾಗಿದ್ದ ಚಿದಂಬರಂ ಅವರಿಗೆ ಅದನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗಿರಲಿಲ್ಲ. ಈಗ ಮಾತ್ರ ಅವರು ಪತ್ರಿಕೆಗಳಲ್ಲಿ ಆರ್ಥಿಕತೆಯ ಬಗ್ಗೆ ದೀರ್ಘ‌ ಲೇಖನ ಬರೆಯುತ್ತಾರೆ. ತಾವೇನು ಮಾಡಿದ್ದರು ಎಂಬುದು ಅವರಿಗೆ ನೆನಪಿಲ್ಲ’ ಎಂದು ವಾಗ್ಧಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಇನ್ನೂ 100ವರ್ಷ ಅಧಿಕಾರಕ್ಕೆ ಬರಬಾರದು ಅಂತ ನಿರ್ಧರಿಸಿದ್ದೀರಾ? ಕಾಂಗ್ರೆಸ್ ವಿರುದ್ಧ ಮೋದಿ

ರಾಹುಲ್‌ರಿಂದ “ಒಡೆದು ಆಳು ನೀತಿ’
ಬಜೆಟ್‌ ಅಧಿವೇಶನದಲ್ಲಿ ರಾಷ್ಟ್ರಪತಿಗಳು ಮಾಡಿದ್ದ ಭಾಷಣಕ್ಕೆ ವಂದನಾರ್ಪಣೆ ನಿಮಿತ್ತ ಲೋಕಸಭೆಯಲ್ಲಿ ನಡೆಸಲಾದ ಕಲಾಪದ ವೇಳೆ, ಕೇಂದ್ರ ಸರಕಾರ ತಮಿಳುನಾಡನ್ನು ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಮಾಡಿದ್ದ ಆರೋಪಕ್ಕೆ, ಪ್ರಧಾನಿ ಮೋದಿ, ತಮ್ಮ ಭಾಷಣದಲ್ಲಿ ತಿರುಗೇಟು ನೀಡಿದರು. ಈ ಸಂದರ್ಭದಲ್ಲಿ ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕವಿ ಸುಬ್ರಹ್ಮಣ್ಯ ಭಾರತಿಯವರ ಕವಿತೆಯ ಸಾಲೊಂದನ್ನೂ ಹೇಳಿದರು. ರಾಹುಲ್‌ ವಿರುದ್ಧ ಕಿಡಿಕಾರಿದ ಅವರು, “ತಮಿಳರ ಭಾವನೆಗಳನ್ನು ಕೆಣಕುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ. ಅದಕ್ಕಾಗಿ ಅದು ಬ್ರಿಟಿಷರು ಅನುಸರಿಸಿದ್ದ ಒಡೆದು ಆಳುವ ನೀತಿಯನ್ನೇ ಅನುಕರಿಸುತ್ತಿದೆ. ಇತ್ತೀಚೆಗೆ, ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಅವರು ನಿಧನರಾದಾಗ, ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯುವ ಸಂದರ್ಭ ಅಲ್ಲಿ ನಿಂತಿದ್ದ ತಮಿಳುನಾಡಿನ ಸಹೋದರ, ಸಹೋದರಿಯರು ರಾವತ್‌ ಅವರಿಗೆ “ವೀರ ವಣಕ್ಕಂ’ (ವೀರ ನಮನ) ಸಲ್ಲಿಸಿದರು. ವಿಷ್ಣು ಪುರಾಣದಲ್ಲಿ ಉತ್ತರದ ಹಿಮಾಲಯದಿಂದ, ದಕ್ಷಿಣದ ಹಿಂದೂ ಮಹಾಸಾಗರದವರೆಗೆ ಇರುವ ಭೂಭಾಗವೆಲ್ಲ ಭಾರತವೇ ಎಂದು ಹೇಳಲಾಗಿದೆ. ಆದರೂ ಕಾಂಗ್ರೆಸ್‌, ದೇಶದಲ್ಲಿ ತಮಿಳರ ಭಾವನೆಗಳನ್ನು ಕೆಣಕುವ ಮೂಲಕ ಒಡೆದು ಆಳುವ ಅಸ್ತ್ರ ಪ್ರಯೋಗಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಮೋದಿ ಮಾತಿಗೆ ವಿಪಕ್ಷಗಳು ಕೆಂಡ
ಪ್ರಧಾನಿ ಮೋದಿ ಅವರು ಲೋಕಸಭೆಯಲ್ಲಿ ಆಡಿರುವ ಮಾತುಗಳಿಗೆ ವಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. “ಮುಂಬಯಿ ನಿಲ್ದಾಣಗಳಲ್ಲಿ ನಿಂತಿದ್ದ ಕಾಂಗ್ರೆಸ್‌, ವಲಸೆ ಕಾರ್ಮಿಕರನ್ನು ರಾಜ್ಯ ಬಿಟ್ಟು ತೆರಳುವಂತೆ ಬೆದರಿಸುತ್ತಿತ್ತು’ ಎಂಬ ಪ್ರಧಾನಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಕಾಂಗ್ರೆಸ್‌, “ಕೊರೊನಾ ಸೋಂಕಿನ ಕಾಲದಲ್ಲಿ ಕೇಂದ್ರ ಸರಕಾರವು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸಿತ್ತು. ಆದರೆ ಆ ಸಮಯದಲ್ಲಿ ವಲಸೆ ಕಾರ್ಮಿಕರ ನೆರವಿಗೆ ಬಂದಿದ್ದು ಕಾಂಗ್ರೆಸ್‌’ ಎಂದು ಹೇಳಿದೆ. ಕಾಂಗ್ರೆಸ್‌ ಅನ್ನು ಟೀಕಿಸುವ ಮೂಲಕ ಮೋದಿ ಅವರು ತಮ್ಮ ಕ್ಷುಲ್ಲಕ ಮನಸ್ಥಿತಿ ಪ್ರದರ್ಶಿಸಿದ್ದಾರೆ ಎಂದೂ ಕಿಡಿಕಾರಿದೆ. ಇದೇ ವೇಳೆ, ಕೊರೊನಾ ವೈರಸ್‌ ಸೋಂಕಿನ ಸಂದರ್ಭದಲ್ಲಿ ದಿಲ್ಲಿ ಸರಕಾರವೇ ಬಸ್ಸುಗಳನ್ನು ಮಾಡಿ ಜನರನ್ನು ರಾಜಧಾನಿ ಬಿಟ್ಟು ತೆರಳುವಂತೆ ಕಳುಹಿಸಿತು ಎಂಬ ಮೋದಿ ಅವರ ಮಾತು ಶುದ್ಧ ಸುಳ್ಳು ಎಂದು ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ. “ದೇಶದ ಪ್ರಧಾನಿಯವರ ಹೇಳಿಕೆ ಸಂಪೂರ್ಣ ಸುಳ್ಳು. ಜನರ ನೋವಿನಲ್ಲೂ ರಾಜಕೀಯ ಮಾಡುವುದು ಪ್ರಧಾನಿ ಹುದ್ದೆಯಲ್ಲಿರುವವರಿಗೆ ಸರಿಹೊಂದುವ ನಡವಳಿಕೆಯಲ್ಲ’ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.