ಕೋವಿಡ್ ಸಂಕಷ್ಟದಲ್ಲಿರುವವರ ನೆರವಿಗೆ ಯುವಿ “ಮಿಷನ್-1000 ಬೆಡ್’ ಅಭಿಯಾನ
Team Udayavani, Jun 12, 2021, 10:56 PM IST
ಹೊಸದಿಲ್ಲಿ: ಕೊರೊನಾ ಎರಡನೇ ಅಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಜನತೆಗೆ ಅನೇಕ ಕ್ರೀಡಾಪಟುಗಳು ನೆರವು ನೀಡುತ್ತಿದ್ದಾರೆ. ಇದೀಗ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಕೂಡ ಕೋವಿಡ್ ಪರಿಹಾರಕ್ಕೆ ಕೈ ಜೋಡಿಸಿದ್ದಾರೆ.
ಯುವರಾಜ್ ತಮ್ಮ “ಯುವಿಕ್ಯಾನ್’ ಚಾರಿಟಿ ಸಂಸ್ಥೆಯ ಮೂಲಕ “ಮಿಷನ್-1000 ಬೆಡ್’ ಎನ್ನುವ ನೆರವಿನ ಅಭಿಯಾನ ಆರಂಭಿಸಿದ್ದಾರೆ. ಭಾರತದಾದ್ಯಂತ ಆಸ್ಪತ್ರೆಗಳಲ್ಲಿ “ಕ್ರಿಟಿಕಲ್ ಕೇರ್’ ಸೌಲಭ್ಯಗಳನ್ನು ಹೆಚ್ಚಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಯುವಿ ಟ್ವಿಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ.
“ಕ್ರಿಟಿಕಲ್ ಕೇರ್ ಬೆಡ್ ಮತ್ತು ಸಲಕರಣೆಗಳನ್ನು ಹೊತ್ತ ಟ್ರಕ್ ಹೊಸದಿಲ್ಲಿಯಿಂದ ಹಿಮಾಚಲ ಪ್ರದೇಶ ತಲುಪಿದೆ. ಭಾರತದಾದ್ಯಂತ ಆರೋಗ್ಯ ಸೌಲಭ್ಯ ಹೆಚ್ಚಿಸುವ ನಮ್ಮ ಪಯಣಕ್ಕೆ ನಿಮ್ಮ ಬೆಂಬಲ ಇರಲಿ’ ಎಂದು ಯುವಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಇಫ್ಕೋ ಕಂಪನಿಯಿಂದ ರಾಜ್ಯದಲ್ಲಿ ನ್ಯಾನೋ ಯೂರಿಯಾ ಘಟಕ : ಸಚಿವ ಡಿ.ವಿ. ಸದಾನಂದ ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ