ಕೋವಿಡ್ ನಿಯಂತ್ರಣಕ್ಕೆ ದೆಹಲಿ ಸರಕಾರದ ಹೊಸ ತಂತ್ರ! ಮಾಸ್ಕ್ ಧರಿಸದಿದ್ದರೆ 2000ರೂ ದಂಡ
Team Udayavani, Nov 19, 2020, 6:48 PM IST
ನವದೆಹಲಿ: ನಗರದಲ್ಲಿ ಹೆಚ್ಚಿತ್ತಿರುವ ಕೋವಿಡ್ ಸೋಂಕಿನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸರಕಾರ ಮಾಸ್ಕ್ ಧರಿಸದೇ ಇರುವವರಿಗೆ ವಿಧಿಸುವ ದಂಡದ ಮೊತ್ತವನ್ನು 500ರ ಬದಲು 2000ಕ್ಕೆ ಏರಿಕೆ ಮಾಡಿ ಸೂಚನೆ ಹೊರಡಿಸಿದೆ.
ಈ ಮೂಲಕ ಕಡ್ಡಾಯವಾಗಿ ಎಲ್ಲರೂ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚನೆಯನ್ನು ನೀಡಿದ್ದಾರೆ.
ಈಗಾಗಲೇ ದೆಹಲಿಯಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಮಿತಿಮೀರಿದ್ದು ಮೂರನೇ ಹಂತವನ್ನೂ ದಾಟಿದೆ ಹಾಗಾಗಿ ಸೋಂಕು ನಿಯಂತ್ರಿಸುವುದು ಬಹಳ ಅಗತ್ಯವಾಗಿದೆ, ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಈ ಮೊದಲು ಇದ್ದ 500 ರೂ ದಂಡ ಮೊತ್ತವನ್ನು 2000ಕ್ಕೆ ಏರಿಸಲು ಸೂಚನೆ ನೀಡಿದ್ದಾರೆ.
ದಂಡದ ಮೊತ್ತಕ್ಕೆ ಹೆದರಿ ಜನರು ಮಾಸ್ಕ್ ಧರಿಸುತ್ತಾರೆ ಎನ್ನುವ ಕಾರಣದಿಂದ ಈ ದಂಡ ಪ್ರಮಾಣವನ್ನು ಏರಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಚರಂಡಿ ಸೇರುತ್ತಿದೆ “ಜೀವ ಜಲ’! ಮುಖ್ಯ ಪೈಪ್ಲೈನ್ ಒಡೆದು ಕಳೆದಿವೆ ಹಲವು ತಿಂಗಳು
ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಗಳ ಸಂಖ್ಯೆಯನ್ನು ಜಾಸ್ತಿ ಮಾಡಲಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗಾಗಿ ಐಸಿಯುನಲ್ಲಿ ಶೇ 80ರಷ್ಟು ಹಾಸಿಗೆಗಳನ್ನು ಕಾಯ್ದಿರಿಸುವ ನಿರ್ಧಾರವನ್ನು ಇಂದಿನಿಂದ ಜಾರಿಗೆ ತರಲಾಗಿದೆ ಎಂದು ಅವರು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ