ಅಯೋಧ್ಯೆ ಸುಸಜ್ಜಿತ ವಿಮಾನ ನಿಲ್ದಾಣ ಶೀಘ್ರ ಸಾರ್ವಜನಿಕರಿಗೆ ಸಂಚಾರ ಮುಕ್ತ
Team Udayavani, Mar 10, 2021, 7:15 AM IST
ಅಯೋಧ್ಯೆ: ಶ್ರೀರಾಮ ಜನ್ಮಭೂಮಿಗೆ ಆಗಮಿಸುವ ಭಕ್ತಾದಿಗಳು ಶೀಘ್ರದಲ್ಲಿಯೇ ಅಯೋಧ್ಯೆಯ ಅತ್ಯಾಧುನಿಕ ವಿಮಾನ ನಿಲ್ದಾಣದಲ್ಲಿ ಇಳಿಯಬಹುದು!
ಇಂಥದ್ದೊಂದು ಸಿಹಿಸುದ್ದಿಯನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವಿಟರಿನಲ್ಲಿ ತಿಳಿಸಿದ್ದಾರೆ. “ನಾಗರೀಕ ವೈಮಾನಿಕ ಸಂಚಾರ ಸೇವೆ ಶೀಘ್ರವೇ ಅಯೋಧ್ಯೆಗೆ ಸಂಪರ್ಕ ಬೆಸೆಯಲಿದೆ. ಅಯೋಧ್ಯೆಯಲ್ಲಿ ಸುಸಜ್ಜಿತ ವಿಮಾನ ನಿಲ್ದಾಣಕ್ಕೆ ಭಾರತೀಯ ವಿಮಾನ ಪ್ರಾಧಿಕಾರ 242 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಪ್ರವಾಸಿಗರಿಗೆ, ಭಕ್ತಾದಿಗಳಿಗೆ ಏರ್ಪೋರ್ಟ್ನಲ್ಲಿ ಸಕಲ ವ್ಯವಸ್ಥೆ ಕಲ್ಪಿಸಲಾಗುತ್ತದೆ. ವಿಮಾನ ನಿಲ್ದಾಣಕ್ಕಾಗಿ 270 ಎಕರೆ ಜಾಗ ನೀಡಿದ ಉ.ಪ್ರ. ಸರ್ಕಾರಕ್ಕೆ ನನ್ನ ಧನ್ಯವಾದಗಳು’ ಎಂದು ಟ್ವೀಟಿಸಿದ್ದಾರೆ. ಮೊದಲನೇ ಹಂತದಲ್ಲಿ ಶೀಘ್ರವೇ ಎಟಿಆರ್72 ಕಾರ್ಯಾರಂಭಿಸಲಿದೆ. ಹಂತ 2ರಲ್ಲಿ ರಾಜ್ಯ ಸರಕಾರ ನೀಡಿರುವ ಭೂಮಿಯಲ್ಲಿ ವಿಮಾನ ನಿಲ್ದಾಣವನ್ನು ವಿಸ್ತರಿಸಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ