1.08 ಲಕ್ಷ ಕೋ.ರೂ. Subsidyಗೆ ಅನುಮೋದನೆ
Team Udayavani, May 18, 2023, 7:51 AM IST
ಹೊಸದಿಲ್ಲಿ: 2023-24ರ ಬಿತ್ತನೆ ಋತುವಿಗಾಗಿ ಕೇಂದ್ರ ಸಂಪುಟ ಸಭೆ ಬುಧವಾರ 1.08 ಲಕ್ಷ ಕೋಟಿ ರೂ. ರಸಗೊಬ್ಬರ ಸಬ್ಸಿಡಿಗೆ ಅನುಮೋದನೆ ನೀಡಿದೆ. ಈ ಕ್ರಮವು ರಸಗೊಬ್ಬರಗಳ ಚಿಲ್ಲರೆ ಮಾರಾಟ ಬೆಲೆಯಲ್ಲಿ ಯಾವುದೇ ಏರಿಕೆಯಾಗದಂತೆ ತಡೆಯುತ್ತದೆ. “ಈ ವರ್ಷದ ಎಪ್ರಿಲ್-ಸೆಪ್ಟೆಂಬರ್ ಬಿತ್ತನೆ ಋತುವಿಗಾಗಿ, ಯೂರಿಯಾಕ್ಕೆ 70,000 ಕೋಟಿ ರೂ. ಸಬ್ಸಿಡಿ ಮತ್ತು ಡಿಎಪಿ (ಡಿ-ಅಮೋನಿಯಂ ಫಾಸ್ಪೇಟ್)ಗಾಗಿ 38,000 ಕೋಟಿ ರೂ. ಸಬ್ಸಿಡಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೀಗಾಗಿ ರಸಗೊಬ್ಬರ ಚಿಲ್ಲರೆ ಮಾರಾಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ” ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ. ಪ್ರಸ್ತುತ ಪ್ರತೀ ಬ್ಯಾಗ್ ಯೂರಿಯಾ ಬೆಲೆ 276 ರೂ. ಹಾಗೂ ಡಿಎಪಿ ಪ್ರತೀ ಬ್ಯಾಗ್ ಬೆಲೆ 1,350 ರೂ. ಇದೆ. ಸಬ್ಸಿಡಿಯಿಂದ ಸುಮಾರು 12 ಕೋಟಿ ರೈತರಿಗೆ ಉಪಯೋಗವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ