ಬ್ಯಾಂಕ್ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ
Team Udayavani, Jun 3, 2023, 5:26 AM IST
ಮಂಗಳೂರು: ಮಹಿಳೆಯೋರ್ವರಿಂದ ಆಕೆಯ ಪತಿಯ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದು 1.21 ಲ.ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಮಹಿಳೆಯೋರ್ವರಿಗೆ ಅ. 11 ರಂದು ಅಪರಿಚಿತ ವ್ಯಕ್ತಿ ಬ್ಯಾಂಕ್ ಖಾತೆ ಸ್ಥಗಿತದ ಬಗ್ಗೆ ಸಂದೇಶ ಕಳುಹಿಸಿದ್ದ. ಅದರ ಬಗ್ಗೆ ವಿಚಾರಿಸಿದಾಗ ಬ್ಯಾಂಕ್ ಖಾತೆ ಬ್ಲಾಕ್ ಆಗಿದ್ದು ಅದನ್ನು ಸರಿಪಡಿಸಲು ಡೆಬಿಟ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರ ನೀಡುವಂತೆ ತಿಳಿಸಿದ. ಮಹಿಳೆ ಅದನ್ನು ನಿಜವೆಂದು ನಂಬಿ ತನ್ನ ಪತಿಯ ಬ್ಯಾಂಕ್ ಖಾತೆ ವಿವರಗಳನ್ನು ನೀಡಿದ್ದರು. ಅನಂತರ ಅವರ ಮೊಬೈಲ್ಗೆ ಬಂದಿದ್ದ ಒಟಿಪಿಯನ್ನು ಕೂಡ ನೀಡಿದ್ದರು. ಅದೇ ರೀತಿ ಇನ್ನೊಂದು ಬ್ಯಾಂಕ್ನ ಖಾತೆಯ ಮಾಹಿತಿಯನ್ನು ಕೂಡ ಆರೋಪಿ ಪಡೆದುಕೊಂಡಿದ್ದಾನೆ. ಕೆಲವು ಸಮಯದ ಬಳಿಕ ಅವರ ಪತಿಯ ಒಂದು ಖಾತೆಯಿಂದ 71,400 ರೂ. ಮತ್ತು ಇನ್ನೊಂದು ಖಾತೆಯಿಂದ 50,000 ರೂ. ಸೇರಿದಂತೆ ಒಟ್ಟು 1,21,400 ರೂ.ಗಳನ್ನು ಅಪರಿಚಿತ ಮೋಸದಿಂದ ವರ್ಗಾಯಿಸಿಕೊಂಡಿದ್ದಾನೆ.
ಬ್ಯಾಂಕ್ ಖಾತೆ ವಿವರ ಪಡೆದು ವಂಚನೆ
ಮಂಗಳೂರು: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಕೋಟೆಕಾರಿನ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದು ಅವರಿಗೆ ಮೇ 28ರಂದು 7328868392, 9948824849 ಸಂಖ್ಯೆಗಳಿಂದ ಸಂದೇಶ ಬಂದಿತ್ತು. ಅದರಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನ ಖಾತೆ ಈ ದಿನ ಸ್ಥಗಿತವಾಗಿದ್ದು ಅದನ್ನು ತಡೆಯಲು ಪಾನ್ ಕಾರ್ಡ್ ಮಾಹಿತಿ ಅಪ್ಡೇಟ್ ಮಾಡಬೇಕು ಎಂಬುದಾಗಿ ಇತ್ತು. ಅದರ ಜತೆ ಲಿಂಕ್ ಕೂಡ ಕಳುಹಿಸಲಾಗಿತ್ತು. ದೂರುದಾರರು ಮೇ 30ರಂದು ಆ ಲಿಂಕ್ನ್ನು ಕ್ಲಿಕ್ ಮಾಡಿದ್ದು ಅದರಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನ ಪೋರ್ಟಲ್ ರೂಪದ ಒಂದು ಪೇಜ್ ತೆರೆದಿದ್ದು ಅದರಲ್ಲಿ ಹೆಸರು, ಮೊಬೈಲ್ ಸಂಖ್ಯೆ, ಹುಟ್ಟಿದ ದಿನಾಂಕ, ಬ್ಯಾಂಕ್ ಖಾತೆ ಸಂಖ್ಯೆಗಳನ್ನು ನಮೂದಿಸಿದ್ದಾರೆ. ಬಳಿಕ ಅವರ ಮೊಬೈಲ್ಗೆ ಒಟಿಪಿ ಬಂದಿತ್ತು. ಅವರು ಒಟಿಪಿಯನ್ನು ಅದೇ ಪೇಜ್ನಲ್ಲಿ ನಮೂದಿಸಿದ್ದಾರೆ. ಅನಂತರ ಹಂತ ಹಂತವಾಗಿ 43,551 ರೂ. ಕಡಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ