ದೆಹಲಿ: ಹಿಂಸಾರೂಪಕ್ಕೆ ತಿರುಗಿದ ರೈತರ ಪ್ರತಿಭಟನೆ; ಟ್ರ್ಯಾಕ್ಟರ್ ಮಗುಚಿ ಬಿದ್ದು ರೈತ ಸಾವು
ರೈತರಿಗೆ ಮನವರಿಕೆ ಮಾಡಲು ಯತ್ನಿಸಿದರೂ ಕೂಡಾ ರೈತರು ಬಲವಂತದಿಂದ ಬ್ಯಾರಿಕೇಡ್ ಕಿತ್ತೆಸೆದು ಒಳನುಗ್ಗಿದ್ದರು.
Team Udayavani, Jan 26, 2021, 2:25 PM IST
ನವದೆಹಲಿ: ಕೇಂದ್ರದ ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಗಣರಾಜ್ಯೋತ್ಸವ ದಿನಾಚರಣೆ(ಜನವರಿ 26, 2021) ನಡೆಸುತ್ತಿರುವ ಟ್ರ್ಯಾಕ್ಟರ್ ರಾಲಿ ಹಿಂಸಾರೂಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಟ್ರ್ಯಾಕ್ಟರ್ ಉರುಳಿಬಿದ್ದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ದೀನ್ ದಯಾಳ್ ಉಪಾಧ್ಯಾಯ್ (ಡಿಡಿಯು) ರಸ್ತೆಯಲ್ಲಿ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೆಂಪುಕೋಟೆಗೆ ನುಗ್ಗಿದ ರೈತರು: ಪ್ರಧಾನಿ ಧ್ವಜಾರೋಹಣ ಮಾಡುವ ಸ್ಥಳದಲ್ಲಿ ರೈತರಿಂದ ಧ್ವಜಾರೋಹಣ!
ದೆಹಲಿಯ ಸಿಂಘು ಹಾಗೂ ಟಿಖ್ರಿ ಗಡಿಯಿಂದ ಟ್ರ್ಯಾಕ್ಟರ್ ಮೂಲಕ ಹೊರಟಿದ್ದ ರೈತರು ವಿವಿಧ ಮಾರ್ಗಗಳಿಂದ ದೆಹಲಿಯೊಳಕ್ಕೆ ನುಗ್ಗಲು ಯತ್ನಿಸಿದ ಪರಿಣಾಮ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ನಡೆದಿತ್ತು. ಘಟನೆಯಲ್ಲಿ ಹಲವಾರು ಪೊಲೀಸರು ಗಾಯಗೊಂಡಿದ್ದರು.
ಪೊಲೀಸರು ಕೂಡಾ ಪ್ರತಿಭಟನಾಕಾರರನ್ನು ತಡೆಯಲು ಲಾಠಿಚಾರ್ಜ್, ಅಶ್ರುವಾಯು ಸಿಡಿಸಿದರೂ ಕೂಡಾ ಯಾವುದಕ್ಕೂ ಬಗ್ಗದ ಪರಿಣಾಮ ಪರಿಸ್ಥಿತಿ ನಿರ್ಮಾಣವಾಗಿತ್ತು. ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ದೆಹಲಿಯೊಳಕ್ಕೆ ಪ್ರವೇಶಿಸಲು ಇರುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿದ್ದು, ಯಾವುದೇ ವಾಹನಗಳಿಗೂ ಒಳಬರಲು ಅನುಮತಿ ನೀಡುತ್ತಿಲ್ಲ ಎಂದು ವರದಿ ತಿಳಿಸಿದೆ.
#WATCH A protestor hoists a flag from the ramparts of the Red Fort in Delhi#FarmLaws #RepublicDay pic.twitter.com/Mn6oeGLrxJ
— ANI (@ANI) January 26, 2021
ರಾಜಪಥ್ ನಲ್ಲಿ ಗಣರಾಜ್ಯೋತ್ಸವ ಪರೇಡ್ ಅಂತ್ಯಗೊಂಡ ಬೆನ್ನಲ್ಲೇ ಟ್ರ್ಯಾಕ್ಟರ್ ರಾಲಿಗೆ ಅನುಮತಿ ನೀಡುವುದಾಗಿ ಪೊಲೀಸರು ರೈತರಿಗೆ ಮನವರಿಕೆ ಮಾಡಲು ಯತ್ನಿಸಿದರೂ ಕೂಡಾ ರೈತರು ಬಲವಂತದಿಂದ ಬ್ಯಾರಿಕೇಡ್ ಕಿತ್ತೆಸೆದು ಒಳನುಗ್ಗಿದ್ದರು. ಇದರಿಂದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿರುವುದಾಗಿ ವರದಿ ತಿಳಿಸಿದೆ.
ಕೆಂಪುಕೋಟೆಗೆ ನುಗ್ಗಿ ಧ್ವಜಹಾರಿಸಿದ ರೈತರು:
ಆಕ್ರೋಶಗೊಂಡ ರೈತರು ಲಾಠಿಚಾರ್ಜ್ ಅಶ್ರುವಾಯು ಪ್ರಯೋಗಕ್ಕೆ ಜಗ್ಗದೇ ಟ್ರ್ಯಾಕ್ಟರ್ ಮೂಲಕ ಕೆಂಪು ಕೋಟೆಗೆ ನುಗ್ಗಿದ ರೈತರು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸುವ ಸ್ಥಳದಲ್ಲಿ ರೈತ ಸಂಘಟನೆಯ ಧ್ವಜಗಳನ್ನು ಹಾರಿಸಿರುವ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ