ಮಣಿಪುರ ಚುನಾವಣೆ: ಮತದಾನದ ವೇಳೆ ಹಿಂಸಾಚಾರ, ಭದ್ರತಾ ಪಡೆ ಗುಂಡಿಗೆ ಓರ್ವ ಸಾವು
ನಾಗಾ ಪ್ರಾಬಲ್ಯದ ಬೆಟ್ಟಪ್ರದೇಶಗಳು ಈ ಬಾರಿ ಆಡಳಿತಾರೂಢ ಬಿಜೆಪಿ ಕಠಿಣ ಸವಾಲನ್ನು ಎದುರಿಸುವಂತಾಗಿದೆ.
Team Udayavani, Mar 5, 2022, 12:55 PM IST
ಇಂಫಾಲ್: ಮಣಿಪುರದ ವಿಧಾನಸಭೆಯ ಮತದಾನದ ವೇಳೆ ಕರೋಂಗ್ ಕ್ಷೇತ್ರದಲ್ಲಿ ಹಿಂಸಾಚಾರ ಭುಗಿಲೆದ್ದ ಪರಿಣಾಮ ಭದ್ರತಾ ಪಡೆಯ ಗುಂಡಿನ ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಶನಿವಾರ (ಮಾರ್ಚ್ 05) ನಡೆದಿದೆ. ಮಣಿಪುರದ 10 ಜಿಲ್ಲೆಗಳಲ್ಲಿನ 22 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಇದನ್ನೂ ಓದಿ:ರಷ್ಯಾ-ಉಕ್ರೇನ್ ನಡುವಿನ ಸಮರ; ತಾತ್ಕಾಲಿಕ ಕದನ ವಿರಾಮ ಘೋಷಣೆಗೆ ಕಾರಣವೇನು? ಅಂತಿಮ ಗಡುವು
ಬೆಳಗ್ಗೆ 11ಗಂಟೆವರೆಗೆ ಶೇ.28.20ರಷ್ಟು ಮತದಾನ ನಡೆದಿದ್ದು, 2017ಕ್ಕೆ ಹೋಲಿಸಿದಲ್ಲಿ ಇದು ಶೇ.16.80ರಷ್ಟು ಕಡಿಮೆ ಪ್ರಮಾಣದಲ್ಲಿ ಮತದಾನವಾಗಿರುವುದಾಗಿ ವರದಿ ತಿಳಿಸಿದೆ. ಮಣಿಪುರದ ತೌಬಾಲ್ ಜಿಲ್ಲೆ ಮತ್ತು ನಾಗಾ ಪ್ರಾಬಲ್ಯದ ಬೆಟ್ಟಪ್ರದೇಶಗಳು ಈ ಬಾರಿ ಆಡಳಿತಾರೂಢ ಬಿಜೆಪಿ ಕಠಿಣ ಸವಾಲನ್ನು ಎದುರಿಸುವಂತಾಗಿದೆ.
ಈ ಜಿಲ್ಲೆಗಳು ನಾಗಾ ಪೀಪಲ್ಸ್ ಫ್ರಂಟ್ (ಎನ್ ಪಿಎಫ್) ಮತ್ತು ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದು, ಇದು ಬಂದ್ ಹಾಗೂ ರಸ್ತೆತಡೆಯ ಪ್ರಮುಖ ಕೇಂದ್ರ ಸ್ಥಳಗಳಾಗಿದೆ ಎಂದು ವರದಿ ವಿವರಿಸಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಹಿಂಸಾಚಾರವನ್ನು ನಡೆಯದಂತೆ ತಡೆಯುವುದು ಚುನಾವಣಾ ಆಯೋಗದ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದೆ.
ಮಣಿಪುರದ ಎರಡನೇ ಹಂತದ ಚುನಾವಣೆಯಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿರುವ ಕಾಂಗ್ರೆಸ್ ನ ಓಕ್ರಾಮ್ ಇಬೋಬಿ ಸಿಂಗ್ ಮತ್ತು ಮಾಜಿ ಉಪಮುಖ್ಯಮಂತ್ರಿ ಖೈಕಾಂಗಮ್ ಗಾಂಗ್ ಮೈ ಚುನಾವಣಾ ಅಖಾಡದಲ್ಲಿರುವುದಾಗಿ ವರದಿ ಹೇಳಿದೆ.
ಎರಡನೇ ಹಂತದಲ್ಲಿ 8.38 ಲಕ್ಷ ಮತದಾರರಿದ್ದು, ಭಾರತೀಯ ಜನಾತ ಪಕ್ಷ 22 ಅಭ್ಯರ್ಥಿಗಳನ್ನು, ಕಾಂಗ್ರೆಸ್ 18, ನ್ಯಾಷನಲ್ ಪೀಪಲ್ಸ್ ಪಾರ್ಟಿ 11, ಜನತಾ ದಳ (ಸಂಯುಕ್ತ) 10 ಹಾಗೂ ನಾಗಾ ಪೀಪಲ್ಸ್ ಫ್ರಂಟ್ 10 ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ