ಬಿಜೆಪಿ ನಾಯಕನ ಕಾರಿನ ಮೇಲೆ ದಾಳಿ; ನೂರು ರೈತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಈ ಆರೋಪವನ್ನು ಅಲ್ಲಗಳೆದಿದೆ. ಇದೊಂದು ಸುಳ್ಳು ಮತ್ತು ಪೂರ್ವಯೋಜಿತವಾಗಿದ್ದು, ಆರೋಪವನ್ನು ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದೆ.
Team Udayavani, Jul 15, 2021, 6:39 PM IST
ನವದೆಹಲಿ:ರಾಜ್ಯದ ಆಡಳಿತಾರೂಢ ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷ ಮೈತ್ರಿ ಸರ್ಕಾರ, ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು ಬಿಜೆಪಿ ಮುಖಂಡ, ಡೆಪ್ಯುಟಿ ಸ್ಪೀಕರ್ ರಣಬೀರ್ ಗಂಗ್ವಾ ಅವರ ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಆರೋಪದಡಿ ಹರ್ಯಾಣ ಪೊಲೀಸರು ನೂರಕ್ಕೂ ಅಧಿಕ ರೈತರ ವಿರುದ್ಧ ದೇಶದದ್ರೋಹದ ಪ್ರಕರಣ ದಾಖಲಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಿಸಲು BCIC-SDM ನೋಡಲ್ ಸೆಂಟರ್ ಗಳು ಸಹಕಾರಿ: ಶೆಟ್ಟರ್
ಈ ಘಟನೆ ಹರ್ಯಾಣದ ಸಿರ್ಸಾ ಜಿಲ್ಲೆಯಲ್ಲಿ ಜುಲೈ 11ರಂದು ನಡೆದಿದ್ದು, ಅದೇ ದಿನ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು ಎಂದು ವರದಿ ಹೇಳಿದೆ. ದೇಶದ್ರೋಹ ಆರೋಪದ ಹೊರತಾಗಿಯೂ ರೈತರ ವಿರುದ್ಧ ಕೊಲೆಯತ್ನದ ಆರೋಪವನ್ನು ದಾಖಲಿಸಲಾಗಿದೆ ಎಂದು ವರದಿ ವಿವರಿಸಿದೆ.
ಎಫ್ ಐಆರ್ ನಲ್ಲಿ ರೈತ ಚಳವಳಿಯ ಮುಖಂಡರಾದ ಹರ್ ಚರಣ್ ಸಿಂಗ್ ಮತ್ತು ಪ್ರಹ್ಲಾದ್ ಸಿಂಗ್ ಸೇರಿದಂತೆ ಇಬ್ಬರ ಹೆಸರನ್ನು ಎಫ್ ಐಆರ್ ನಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದು, ಈ ಆರೋಪವನ್ನು ಅಲ್ಲಗಳೆದಿದೆ. ಇದೊಂದು ಸುಳ್ಳು ಮತ್ತು ಪೂರ್ವಯೋಜಿತವಾಗಿದ್ದು, ಆರೋಪವನ್ನು ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ