
ಕೋವಿಶೀಲ್ಡ್ 2 ಡೋಸ್ ಗಳ ನಡುವೆ ಎಷ್ಟು ವಾರಗಳ ಅಂತರ ಬೇಕು? ಕೇಂದ್ರದ ಸಮಿತಿ ಹೇಳಿದ್ದೇನು
ಕೋವಿಶೀಲ್ಡ್ ಎರಡು ಡೋಸ್ ನಡುವಿನ ಅಂತರವನ್ನು ಕೇಂದ್ರ ಸರ್ಕಾರ ಇದೀಗ ಎರಡನೇ ಬಾರಿ ಹೆಚ್ಚಳ ಮಾಡಿದಂತಾಗಿದೆ.
Team Udayavani, May 13, 2021, 11:41 AM IST

ನವದೆಹಲಿ:ದೇಶಾದ್ಯಂತ ಕೋವಿಡ್ 19 ಸೋಂಕಿಗೆ ಕೋವ್ಯಾಕ್ಸಿನ್, ಕೋವಿಶೀಲ್ಡ್ ಮತ್ತು ರೆಮಿಡಿಸಿವಿರ್ ಲಸಿಕೆ ನೀಡುತ್ತಿದ್ದು, ಏತನ್ಮಧ್ಯೆ ಲಸಿಕೆಯ ಕೊರತೆ ಹಿನ್ನೆಲೆಯಲ್ಲಿ ಕೋವಿಶೀಲ್ಡ್ ಮೊದಲ ಹಂತದ ಲಸಿಕೆ ತೆಗೆದುಕೊಂಡ ನಂತರ ಎರಡನೇ ಲಸಿಕೆಯನ್ನು ಎಷ್ಟು ದಿನಗಳ ನಂತರ ತೆಗೆದುಕೊಳ್ಳಬೇಕೆಂಬ ಜಿಜ್ಞಾಸೆಗೆ ಇದೀಗ ಕೇಂದ್ರ ಸರ್ಕಾರ ಗುರುವಾರ(ಮೇ 13) ಸ್ಪಷ್ಟ ಸಂದೇಶವನ್ನು ಹೊರಡಿಸಿದೆ.
ಇದನ್ನೂ ಓದಿ:ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ 19 ಚಿಕಿತ್ಸೆ: ಹಿಮಾಚಲ್ ಸರ್ಕಾರ ಘೋಷಣೆ
ಕೋವಿಡ್ 19 ಲಸಿಕೆ ಕೋವಿಶೀಲ್ಡ್ ಎರಡು ಡೋಸ್ ಗಳ ನಡುವಿನ ಅವಧಿಯನ್ನು 12ರಿಂದ 16ವಾರಗಳವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರದ ಸಮಿತಿ ಶಿಫಾರಸು ಮಾಡಿದೆ. ಆದರೆ ಭಾರತದಲ್ಲಿ ಬಳಕೆಯಲ್ಲಿರುವ ಎರಡನೇ ಲಸಿಕೆಯಾದ ಕೋವ್ಯಾಕ್ಸಿನ್ ಗೆ ಸಂಬಂಧಿಸಿದಂತೆ ಎರಡು ಡೋಸ್ ಗಳ ನಡುವಿನ ಅವಧಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆಯನ್ನು ಸೂಚಿಸಿಲ್ಲ ಎಂದು ವರದಿ ತಿಳಿಸಿದೆ.
ಭಾರತದಲ್ಲಿ ಕೋವಿಶೀಲ್ಡ್ ಲಸಿಕೆಗೆ ಬೇಡಿಕೆ ಹೆಚ್ಚುತ್ತಿರುವ ನಡುವೆಯೇ ಸೀರಂ ಇನ್ಸ್ ಟಿಟ್ಯೂಟ್ ಹೆಚ್ಚಿನ ಪ್ರಮಾಣದ ಲಸಿಕೆ ಉತ್ಪಾದಿಸಲು ಹರಸಾಹಸಪಡುತ್ತಿದ್ದು, ಇದರ ಪರಿಣಾಮವಾಗಿ ದೇಶದಲ್ಲಿ ಕೋವಿಶೀಲ್ಡ್ ಲಸಿಕೆ ಕೊರತೆ ಎದುರಿಸುವಂತಾಗಿದೆ.
ಕೋವಿಶೀಲ್ಡ್ ಎರಡು ಡೋಸ್ ನಡುವಿನ ಅಂತರವನ್ನು ಕೇಂದ್ರ ಸರ್ಕಾರ ಇದೀಗ ಎರಡನೇ ಬಾರಿ ಹೆಚ್ಚಳ ಮಾಡಿದಂತಾಗಿದೆ. ಈ ಮೊದಲು ಕೋವಿಶೀಲ್ಡ್ ಲಸಿಕೆಯ ಉತ್ತಮ ಫಲಿತಾಂಶಕ್ಕಾಗಿ ಮೊದಲ ಡೋಸ್ ನ ನಂತರ ಎರಡನೇ ಡೋಸ್ ಗೆ 28ದಿನಗಳಿಂದ ಆರರಿಂದ ಎಂಟು ವಾರಗಳವರೆಗೆ ಹೆಚ್ಚಿಸುವಂತೆ ಮಾರ್ಚ್ ತಿಂಗಳಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸೂಚಿಸಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Server Issue: ವಿಮಾನ ವಿಳಂಬ… ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

Land For Jobs Scam: ಲಾಲು ಪ್ರಸಾದ್, ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿಗೆ ಜಾಮೀನು

Tragic: ದೇವರ ದರ್ಶನದಿಂದ ವಾಪಾಸಾಗುವ ವೇಳೆ ದುರಂತ: ಕಾರು– ಟ್ರಕ್ ಅಪಘಾತದಲ್ಲಿ 8ಮಂದಿ ಸಾವು
MUST WATCH
ಹೊಸ ಸೇರ್ಪಡೆ

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ

Chemistry ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್ ಸಿಂಹ ವಾಗ್ದಾಳಿ