ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕು ತಗುಲಿದ 12 ಮಂದಿ ಆಸ್ಪತ್ರೆಗೆ ದಾಖಲು
ಒಬ್ಬರು ಫ್ರಾನ್ಸ್ ಹಾಗೂ ಮತ್ತೊಬ್ಬರು ನೆದರ್ಲ್ಯಾಂಡ್ ನಿಂದ ಆಗಮಿಸಿರುವುದಾಗಿ ವರದಿ ವಿವರಿಸಿದೆ.
Team Udayavani, Dec 3, 2021, 1:28 PM IST
ನವದೆಹಲಿ:ದೆಹಲಿಯ ಲೋಕ್ ನಾಯಕ್ ಜೈ ಪ್ರಕಾಶ್ ನಾರಾಯಣ್ (ಎಲ್ ಎನ್ ಜೆಪಿ) ಆಸ್ಪತ್ರೆಯಲ್ಲಿ ಈವರೆಗೆ ಸುಮಾರು ಶಂಕಿತ 12 ಮಂದಿ ಕೋವಿಡ್ ನ ನೂತನ ರೂಪಾಂತರಿ ಒಮಿಕ್ರಾನ್ ಸೋಂಕಿಗೆ ಒಳಗಾದವರು ದಾಖಲಾಗಿರುವುದಾಗಿ ಶುಕ್ರವಾರ(ಡಿಸೆಂಬರ್ 03) ಮೂಲಗಳು ತಿಳಿಸಿರುವುದಾಗಿ ಜೀ ನ್ಯೂಸ್ ವರದಿ ಮಾಡಿದೆ.
ಇದನ್ನೂ ಓದಿ:ಕೆಲವು ಕಠಿಣ ನಿಯಮಗಳನ್ನು ಮತ್ತೆ ಜಾರಿ ಮಾಡಬೇಕಾಗಬಹುದು: ಗೌರವ್ ಗುಪ್ತಾ
ಮೂಲಗಳ ಪ್ರಕಾರ, ಗುರುವಾರ ಲೋಕ್ ನಾಯಕ್ ಜೈಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ಒಮಿಕ್ರಾನ್ ಸೋಂಕಿಗೊಳಗಾದ ಶಂಕಿತ ಎಂಟು ಮಂದಿ ದಾಖಲಾಗಿದ್ದರು ಎಂದು ತಿಳಿಸಿದೆ. ನಾಲ್ಕು ಮಂದಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಬ್ಬರಿಗೆ ಕೋವಿಡ್ 19 ಪಾಸಿಟಿವ್ ವರದಿ ಬಂದಿದ್ದು, ಇನ್ನಿಬ್ಬರ ವರದಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ಹೇಳಿದೆ. ನಾಲ್ಕು ಮಂದಿ ಶಂಕಿತರಲ್ಲಿ, ಇಬ್ಬರು ಬ್ರಿಟನ್ ನಿಂದ ಆಗಮಿಸಿದ್ದು, ಒಬ್ಬರು ಫ್ರಾನ್ಸ್ ಹಾಗೂ ಮತ್ತೊಬ್ಬರು ನೆದರ್ಲ್ಯಾಂಡ್ ನಿಂದ ಆಗಮಿಸಿರುವುದಾಗಿ ವರದಿ ವಿವರಿಸಿದೆ.
ಎಲ್ಲಾ ನಾಲ್ಕು ಮಂದಿಯ ಸ್ಯಾಂಪಲ್ಸ್ ಅನ್ನು ಜಿನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದ್ದ ಒಮಿಕ್ರಾನ್ ಕ್ಷಿಪ್ರವಾಗಿ ಹರಡಬಲ್ಲದಾಗಿದ್ದು, ಇದು ತುಂಬಾ ಅಪಾಯಕಾರಿ ವೈರಸ್ ಆಗಿರುವುದಾಗಿ ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ