
ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕು ತಗುಲಿದ 12 ಮಂದಿ ಆಸ್ಪತ್ರೆಗೆ ದಾಖಲು
ಒಬ್ಬರು ಫ್ರಾನ್ಸ್ ಹಾಗೂ ಮತ್ತೊಬ್ಬರು ನೆದರ್ಲ್ಯಾಂಡ್ ನಿಂದ ಆಗಮಿಸಿರುವುದಾಗಿ ವರದಿ ವಿವರಿಸಿದೆ.
Team Udayavani, Dec 3, 2021, 1:28 PM IST

ನವದೆಹಲಿ:ದೆಹಲಿಯ ಲೋಕ್ ನಾಯಕ್ ಜೈ ಪ್ರಕಾಶ್ ನಾರಾಯಣ್ (ಎಲ್ ಎನ್ ಜೆಪಿ) ಆಸ್ಪತ್ರೆಯಲ್ಲಿ ಈವರೆಗೆ ಸುಮಾರು ಶಂಕಿತ 12 ಮಂದಿ ಕೋವಿಡ್ ನ ನೂತನ ರೂಪಾಂತರಿ ಒಮಿಕ್ರಾನ್ ಸೋಂಕಿಗೆ ಒಳಗಾದವರು ದಾಖಲಾಗಿರುವುದಾಗಿ ಶುಕ್ರವಾರ(ಡಿಸೆಂಬರ್ 03) ಮೂಲಗಳು ತಿಳಿಸಿರುವುದಾಗಿ ಜೀ ನ್ಯೂಸ್ ವರದಿ ಮಾಡಿದೆ.
ಇದನ್ನೂ ಓದಿ:ಕೆಲವು ಕಠಿಣ ನಿಯಮಗಳನ್ನು ಮತ್ತೆ ಜಾರಿ ಮಾಡಬೇಕಾಗಬಹುದು: ಗೌರವ್ ಗುಪ್ತಾ
ಮೂಲಗಳ ಪ್ರಕಾರ, ಗುರುವಾರ ಲೋಕ್ ನಾಯಕ್ ಜೈಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ಒಮಿಕ್ರಾನ್ ಸೋಂಕಿಗೊಳಗಾದ ಶಂಕಿತ ಎಂಟು ಮಂದಿ ದಾಖಲಾಗಿದ್ದರು ಎಂದು ತಿಳಿಸಿದೆ. ನಾಲ್ಕು ಮಂದಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಬ್ಬರಿಗೆ ಕೋವಿಡ್ 19 ಪಾಸಿಟಿವ್ ವರದಿ ಬಂದಿದ್ದು, ಇನ್ನಿಬ್ಬರ ವರದಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ಹೇಳಿದೆ. ನಾಲ್ಕು ಮಂದಿ ಶಂಕಿತರಲ್ಲಿ, ಇಬ್ಬರು ಬ್ರಿಟನ್ ನಿಂದ ಆಗಮಿಸಿದ್ದು, ಒಬ್ಬರು ಫ್ರಾನ್ಸ್ ಹಾಗೂ ಮತ್ತೊಬ್ಬರು ನೆದರ್ಲ್ಯಾಂಡ್ ನಿಂದ ಆಗಮಿಸಿರುವುದಾಗಿ ವರದಿ ವಿವರಿಸಿದೆ.
ಎಲ್ಲಾ ನಾಲ್ಕು ಮಂದಿಯ ಸ್ಯಾಂಪಲ್ಸ್ ಅನ್ನು ಜಿನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದ್ದ ಒಮಿಕ್ರಾನ್ ಕ್ಷಿಪ್ರವಾಗಿ ಹರಡಬಲ್ಲದಾಗಿದ್ದು, ಇದು ತುಂಬಾ ಅಪಾಯಕಾರಿ ವೈರಸ್ ಆಗಿರುವುದಾಗಿ ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

CSK Forever: ಮದುವೆ ಕಾರ್ಡ್ನಲ್ಲಿ ಧೋನಿ ಫೋಟೋ ಪ್ರಿಂಟ್ ಮಾಡಿಸಿದ ಅಭಿಮಾನಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್ಯಾಂಕಿಂಗ್ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ