ರೈಲು ಅಪಘಾತಕ್ಕೆ ಪ್ರತೀವರ್ಷ 1,200 ಮಂದಿ ಸಾವು!

ಪ್ರಯಾಣಿಕರ ಸುರಕ್ಷತೆಗೆ ಬೇಕಿದೆ ಹೆಚ್ಚಿನ ಒತ್ತು: 3 ವರ್ಷಗಳಲ್ಲಿ ರೈಲು ಅಪಘಾತದಿಂದ 3,530 ಮಂದಿ ಪ್ರಾಣ ತೆತ್ತರು

Team Udayavani, Jun 4, 2023, 7:52 AM IST

TRAIN

ಬೆಂಗಳೂರು: ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತ ಪ್ರಕರಣ ಇಡೀ ದೇಶವನೇ ಬೆಚ್ಚಿ ಬೀಳಿಸಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ರೈಲು ಅಪಘಾತಕ್ಕೆ ಪ್ರತೀ ವರ್ಷ ಸರಾಸರಿ 1,200 ಮಂದಿ ಸಾವಿಗೀಡಾಗುತ್ತಿರುವುದು ಆತಂಕಕಾರಿಯಾಗಿದೆ.

ದೇಶದ ಅತೀ ದೊಡ್ಡ ಸಾರಿಗೆ ವ್ಯವಸ್ಥೆಯಾಗಿರುವ ರೈಲ್ವೇ ಇಲಾಖೆಗೆ ಹೈಟೆಕ್‌ ಸ್ಪರ್ಶ ನೀಡಿ ಅತ್ಯಾಧುನಿಕ ಸೌಲಭ್ಯ ಅಳವಡಿಸಿಕೊಳ್ಳಲಾಗುತ್ತಿದೆ. ಮತ್ತೂಂದೆಡೆ ರೈಲು ಅಪಘಾತದಿಂದ ಸಂಭವಿಸುವ ಸಾವು ನಿಯಂತ್ರಿಸುವುದೇ ಸವಾಲಾಗಿ ಪರಿಣಮಿಸಿದೆ.

ಕಳೆದ ಎರಡೂವರೆ ವರ್ಷಗಳಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 3,530 ಮಂದಿ ರೈಲು ಅಪಘಾತಕ್ಕೆ ಬಲಿ ಯಾಗಿದ್ದು ಪ್ರತೀವರ್ಷ ಸರಾಸರಿ 1,200 ಜನ ರೈಲ್ವೇ ಅಪಘಾತಕ್ಕೆ ಪ್ರಾಣ ಕಳೆದುಕೊಂಡರೆ, ನಿತ್ಯವೂ ಇಬ್ಬರು ರೈಲು ಅಪಘಾತಕ್ಕೊಳಗಾಗುತ್ತಿದ್ದಾರೆ. ತಿಂಗಳಿಗೆ 50ರಿಂದ 60 ಮಂದಿ ಸಾವನ್ನಪ್ಪುತ್ತಿದ್ದಾರೆ.

ರೈಲ್ವೇ ಸುರಕ್ಷತಾ ವೈಫ‌ಲ್ಯವೂ ಇದಕ್ಕೆ ಪ್ರಮುಖ ಕಾರಣವಾಗಿದೆ. ಇನ್ನು ದೇಶದಲ್ಲಿ 12 ವರ್ಷಗಳಲ್ಲಿ ರೈಲ್ವೇ ಹಳಿ ದಾಟುವ ವೇಳೆ 26 ಸಾವಿರ ಮಂದಿ ಮರಣ ಹೊಂದಿದ್ದಾರೆ. ಪ್ರತೀದಿನ ಸರಾಸರಿ 6 ಮಂದಿ ಆಕಸ್ಮಿಕವಾಗಿ ಸಾವನ್ನಪ್ಪುತ್ತಿರುವುದು ಪೊಲೀಸ್‌ ಅಂಕಿ-ಅಂಶಗಳ ಸಮೀಕ್ಷೆಯಿಂದ ತಿಳಿದು ಬಂದಿದೆ.

ರೈಲು ಅಪಘಾತಕ್ಕೆ ಪ್ರಮುಖ ಕಾರಣಗಳೇನು?
ರೈಲಿನ ಹಳಿ, ಸಿಗ್ನಲ್‌ ದಾಟುವ ವೇಳೆ ಅಥವಾ ಮೊಬೈಲ್‌ನಲ್ಲಿ ಮಾತನಾಡಿಕೊಂಡು ರೈಲಿನ ಸಮೀಪ ಹೋಗುವ ವೇಳೆ ಆಕಸ್ಮಿಕವಾಗಿ ಸಾವನ್ನಪ್ಪುವ ಪ್ರಕರಣಗಳು ಏರಿಕೆಯಾಗಿವೆ. ಮುಖ್ಯವಾಗಿ ಚಲಿಸುವ ರೈಲಿನ ಸಮೀಪವೇ ಟಿಕ್‌ಟಾಕ್‌ ಮಾಡುವುದು, ಹಳಿಗಳ ಮೇಲೆ ನಿದ್ರಿಸುವುದು, ಚಲಿಸುವ ರೈಲಿನ ಸಮೀಪ ಸೆಲ್ಫಿ ತೆಗೆಯುವುದು, ರೈಲು ಬರುವ ವೇಳೆ ಕ್ರಾಸಿಂಗ್‌ ಗೇಟ್‌ ಮುಚ್ಚದಿರುವುದು, ಕಿವಿಗೆ ಇಯರ್‌ ಫೋನ್‌ ಸಿಕ್ಕಿಸಿಕೊಂಡು ಹಳಿ ಮೇಲೆ ನಡೆದಾಡುವುದು, ಆತುರದಲ್ಲಿ ಒಳದಾರಿಯಲ್ಲಿ ಹಳಿ ಕ್ರಾಸ್‌ ಮಾಡುವುದು, ರೈಲಿನ ಬಾಗಿಲಿನಲ್ಲಿ ನೇತಾಡುವುದೇ ಇತ್ತೀಚೆಗೆ ಸಂಭವಿಸಿದ ರೈಲು ಅಪಘಾತಕ್ಕೆ ಮುಖ್ಯ ಕಾರಣವಾಗಿದೆ. ಸಿಬಂದಿ ಕೊರತೆಯಿಂದ ರೈಲ್ವೇ ಪೊಲೀಸರಿಗೆ ಸುರಕ್ಷತೆಗೆ ಒತ್ತು ನೀಡಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳೂ ಕೇಳಿ ಬಂದಿವೆ.

ರೈಲ್ವೇ ಇಲಾಖೆ ಲೋಪದಿಂದ ಮೃತಪಟ್ಟರೆ ಅಥವಾ ಚಲಿಸುತ್ತಿರುವ ರೈಲಿನ ಬಾಗಿಲಿನಿಂದ ಕೆಳಕ್ಕೆ ಬಿದ್ದು ಆಕಸ್ಮಿಕವಾಗಿ ಸಾವನ್ನಪ್ಪಿದರೆ ಮೃತರ ಕುಟುಂಬಸ್ಥರಿಗೆ ಸರಕಾರದಿಂದ ಪರಿಹಾರ ಸಿಗಲಿದೆ. ಒಂದು ವೇಳೆ ಹಳಿ ದಾಟುವ ವೇಳೆ ಅಥವಾ ಇನ್ನಿತರ ಸಂದರ್ಭಗಳಲ್ಲಿ ಜನರ ನಿರ್ಲಕ್ಷ್ಯದಿಂದ ಮೃತಪಟ್ಟರೆ ಜೀವ ವಿಮೆ ಮಾಡಿಸಿದ್ದರೂ ಪರಿಹಾರ ಸಿಗುವುದಿಲ್ಲ. ಸರಕಾರ ಅಂತಹವರ ಕುಟುಂಬಗಳಿಗೆ ಸಹಾಯ ಮಾಡಬೇಕೆಂಬ ನಿಯಮಗಳಿಲ್ಲ.

ದೇಶದಲ್ಲಿ ರೈಲ್ವೇ ಸುರಕ್ಷತಾ ಕ್ರಮದ ವೈಫ‌ಲ್ಯಗಳನ್ನೇ ದುರ್ಬಳಕೆ ಮಾಡಿಕೊಂಡು ಭಯೋತ್ಪಾದಕರು ವಿಧ್ವಂಸಕ ಕೃತ್ಯ ಎಸಗಲು ತಂತ್ರ ಹೆಣೆಯುವ ಸಾಧ್ಯತೆಗಳಿವೆ. ಹೀಗಾಗಿ ರೈಲ್ವೇ ಸುರಕ್ಷತಾ ಕ್ರಮಗಳ ಬಗ್ಗೆ ಇನ್ನಷ್ಟು ಬಿಗಿ ಕ್ರಮ ಅಳವಡಿಸಿಕೊಂಡು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕಿದೆ.

ಏನೆಲ್ಲ ಮುನ್ನೆಚ್ಚರಿಕೆ ವಹಿಸಬೇಕು ?
ರೈಲು ಹೋಗುವ ವೇಳೆ ಹಳಿ ಸಮೀಪ ನಿಲ್ಲಬಾರದು.
ಹಳಿಯಲ್ಲಿ ವಾಯು ವಿಹಾರ ಮಾಡಬೇಡಿ.
ಕಿವಿಗೆ ಇಯರ್‌ ಫೋನ್‌ ಸಿಕ್ಕಿಸಿ ಹಳಿಯಲ್ಲಿ ನಡೆದಾಡಬೇಡಿ.
ಹಳಿ ದಾಟುವ ವೇಳೆ ರೈಲು ಬರುತ್ತಿದೆಯೇ ಗಮನಿಸಿ.
ಸಾರ್ವಜನಿಕರಿಗೆ ಕಾಣುವಂತೆ ರೈಲ್ವೇ ಸಿಗ್ನಲ್‌ ಅಳವಡಿಸಬೇಕು.
ರೈಲು ಹೋಗುವ ಮುನ್ನ ಕ್ರಾಸಿಂಗ್‌ ಗೇಟ್‌ ಮುಚ್ಚಬೇಕು.

ರೈಲು ಅಪಘಾತ ಪ್ರಕರಣಗಲ್ಲಿ ಲೋಕೋ ಪೈಲಟ್‌ಗಳು ನೀಡುವ ಮಾಹಿತಿ ಆಧರಿಸಿ ತನಿಖೆ ನಡೆಸಲಾಗುತ್ತದೆ. ರೈಲ್ವೇ ಸುರಕ್ಷತೆಗೆ ರೈಲ್ವೇ ಪೊಲೀಸರು ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಸಾರ್ವಜನಿಕರೂ ಈ ಬಗ್ಗೆ ಸದಾ ಎಚ್ಚರಿಕೆ ವಹಿಸಬೇಕು.
– ಡಾ| ಸೌಮ್ಯಲತಾ, ರೈಲ್ವೇ ವಿಭಾಗದ ಎಸ್‌ಪಿ

 ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.