ರೈಲು ಅಪಘಾತಕ್ಕೆ ಪ್ರತೀವರ್ಷ 1,200 ಮಂದಿ ಸಾವು!

ಪ್ರಯಾಣಿಕರ ಸುರಕ್ಷತೆಗೆ ಬೇಕಿದೆ ಹೆಚ್ಚಿನ ಒತ್ತು: 3 ವರ್ಷಗಳಲ್ಲಿ ರೈಲು ಅಪಘಾತದಿಂದ 3,530 ಮಂದಿ ಪ್ರಾಣ ತೆತ್ತರು

Team Udayavani, Jun 4, 2023, 7:52 AM IST

TRAIN

ಬೆಂಗಳೂರು: ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತ ಪ್ರಕರಣ ಇಡೀ ದೇಶವನೇ ಬೆಚ್ಚಿ ಬೀಳಿಸಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ರೈಲು ಅಪಘಾತಕ್ಕೆ ಪ್ರತೀ ವರ್ಷ ಸರಾಸರಿ 1,200 ಮಂದಿ ಸಾವಿಗೀಡಾಗುತ್ತಿರುವುದು ಆತಂಕಕಾರಿಯಾಗಿದೆ.

ದೇಶದ ಅತೀ ದೊಡ್ಡ ಸಾರಿಗೆ ವ್ಯವಸ್ಥೆಯಾಗಿರುವ ರೈಲ್ವೇ ಇಲಾಖೆಗೆ ಹೈಟೆಕ್‌ ಸ್ಪರ್ಶ ನೀಡಿ ಅತ್ಯಾಧುನಿಕ ಸೌಲಭ್ಯ ಅಳವಡಿಸಿಕೊಳ್ಳಲಾಗುತ್ತಿದೆ. ಮತ್ತೂಂದೆಡೆ ರೈಲು ಅಪಘಾತದಿಂದ ಸಂಭವಿಸುವ ಸಾವು ನಿಯಂತ್ರಿಸುವುದೇ ಸವಾಲಾಗಿ ಪರಿಣಮಿಸಿದೆ.

ಕಳೆದ ಎರಡೂವರೆ ವರ್ಷಗಳಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 3,530 ಮಂದಿ ರೈಲು ಅಪಘಾತಕ್ಕೆ ಬಲಿ ಯಾಗಿದ್ದು ಪ್ರತೀವರ್ಷ ಸರಾಸರಿ 1,200 ಜನ ರೈಲ್ವೇ ಅಪಘಾತಕ್ಕೆ ಪ್ರಾಣ ಕಳೆದುಕೊಂಡರೆ, ನಿತ್ಯವೂ ಇಬ್ಬರು ರೈಲು ಅಪಘಾತಕ್ಕೊಳಗಾಗುತ್ತಿದ್ದಾರೆ. ತಿಂಗಳಿಗೆ 50ರಿಂದ 60 ಮಂದಿ ಸಾವನ್ನಪ್ಪುತ್ತಿದ್ದಾರೆ.

ರೈಲ್ವೇ ಸುರಕ್ಷತಾ ವೈಫ‌ಲ್ಯವೂ ಇದಕ್ಕೆ ಪ್ರಮುಖ ಕಾರಣವಾಗಿದೆ. ಇನ್ನು ದೇಶದಲ್ಲಿ 12 ವರ್ಷಗಳಲ್ಲಿ ರೈಲ್ವೇ ಹಳಿ ದಾಟುವ ವೇಳೆ 26 ಸಾವಿರ ಮಂದಿ ಮರಣ ಹೊಂದಿದ್ದಾರೆ. ಪ್ರತೀದಿನ ಸರಾಸರಿ 6 ಮಂದಿ ಆಕಸ್ಮಿಕವಾಗಿ ಸಾವನ್ನಪ್ಪುತ್ತಿರುವುದು ಪೊಲೀಸ್‌ ಅಂಕಿ-ಅಂಶಗಳ ಸಮೀಕ್ಷೆಯಿಂದ ತಿಳಿದು ಬಂದಿದೆ.

ರೈಲು ಅಪಘಾತಕ್ಕೆ ಪ್ರಮುಖ ಕಾರಣಗಳೇನು?
ರೈಲಿನ ಹಳಿ, ಸಿಗ್ನಲ್‌ ದಾಟುವ ವೇಳೆ ಅಥವಾ ಮೊಬೈಲ್‌ನಲ್ಲಿ ಮಾತನಾಡಿಕೊಂಡು ರೈಲಿನ ಸಮೀಪ ಹೋಗುವ ವೇಳೆ ಆಕಸ್ಮಿಕವಾಗಿ ಸಾವನ್ನಪ್ಪುವ ಪ್ರಕರಣಗಳು ಏರಿಕೆಯಾಗಿವೆ. ಮುಖ್ಯವಾಗಿ ಚಲಿಸುವ ರೈಲಿನ ಸಮೀಪವೇ ಟಿಕ್‌ಟಾಕ್‌ ಮಾಡುವುದು, ಹಳಿಗಳ ಮೇಲೆ ನಿದ್ರಿಸುವುದು, ಚಲಿಸುವ ರೈಲಿನ ಸಮೀಪ ಸೆಲ್ಫಿ ತೆಗೆಯುವುದು, ರೈಲು ಬರುವ ವೇಳೆ ಕ್ರಾಸಿಂಗ್‌ ಗೇಟ್‌ ಮುಚ್ಚದಿರುವುದು, ಕಿವಿಗೆ ಇಯರ್‌ ಫೋನ್‌ ಸಿಕ್ಕಿಸಿಕೊಂಡು ಹಳಿ ಮೇಲೆ ನಡೆದಾಡುವುದು, ಆತುರದಲ್ಲಿ ಒಳದಾರಿಯಲ್ಲಿ ಹಳಿ ಕ್ರಾಸ್‌ ಮಾಡುವುದು, ರೈಲಿನ ಬಾಗಿಲಿನಲ್ಲಿ ನೇತಾಡುವುದೇ ಇತ್ತೀಚೆಗೆ ಸಂಭವಿಸಿದ ರೈಲು ಅಪಘಾತಕ್ಕೆ ಮುಖ್ಯ ಕಾರಣವಾಗಿದೆ. ಸಿಬಂದಿ ಕೊರತೆಯಿಂದ ರೈಲ್ವೇ ಪೊಲೀಸರಿಗೆ ಸುರಕ್ಷತೆಗೆ ಒತ್ತು ನೀಡಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳೂ ಕೇಳಿ ಬಂದಿವೆ.

ರೈಲ್ವೇ ಇಲಾಖೆ ಲೋಪದಿಂದ ಮೃತಪಟ್ಟರೆ ಅಥವಾ ಚಲಿಸುತ್ತಿರುವ ರೈಲಿನ ಬಾಗಿಲಿನಿಂದ ಕೆಳಕ್ಕೆ ಬಿದ್ದು ಆಕಸ್ಮಿಕವಾಗಿ ಸಾವನ್ನಪ್ಪಿದರೆ ಮೃತರ ಕುಟುಂಬಸ್ಥರಿಗೆ ಸರಕಾರದಿಂದ ಪರಿಹಾರ ಸಿಗಲಿದೆ. ಒಂದು ವೇಳೆ ಹಳಿ ದಾಟುವ ವೇಳೆ ಅಥವಾ ಇನ್ನಿತರ ಸಂದರ್ಭಗಳಲ್ಲಿ ಜನರ ನಿರ್ಲಕ್ಷ್ಯದಿಂದ ಮೃತಪಟ್ಟರೆ ಜೀವ ವಿಮೆ ಮಾಡಿಸಿದ್ದರೂ ಪರಿಹಾರ ಸಿಗುವುದಿಲ್ಲ. ಸರಕಾರ ಅಂತಹವರ ಕುಟುಂಬಗಳಿಗೆ ಸಹಾಯ ಮಾಡಬೇಕೆಂಬ ನಿಯಮಗಳಿಲ್ಲ.

ದೇಶದಲ್ಲಿ ರೈಲ್ವೇ ಸುರಕ್ಷತಾ ಕ್ರಮದ ವೈಫ‌ಲ್ಯಗಳನ್ನೇ ದುರ್ಬಳಕೆ ಮಾಡಿಕೊಂಡು ಭಯೋತ್ಪಾದಕರು ವಿಧ್ವಂಸಕ ಕೃತ್ಯ ಎಸಗಲು ತಂತ್ರ ಹೆಣೆಯುವ ಸಾಧ್ಯತೆಗಳಿವೆ. ಹೀಗಾಗಿ ರೈಲ್ವೇ ಸುರಕ್ಷತಾ ಕ್ರಮಗಳ ಬಗ್ಗೆ ಇನ್ನಷ್ಟು ಬಿಗಿ ಕ್ರಮ ಅಳವಡಿಸಿಕೊಂಡು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕಿದೆ.

ಏನೆಲ್ಲ ಮುನ್ನೆಚ್ಚರಿಕೆ ವಹಿಸಬೇಕು ?
ರೈಲು ಹೋಗುವ ವೇಳೆ ಹಳಿ ಸಮೀಪ ನಿಲ್ಲಬಾರದು.
ಹಳಿಯಲ್ಲಿ ವಾಯು ವಿಹಾರ ಮಾಡಬೇಡಿ.
ಕಿವಿಗೆ ಇಯರ್‌ ಫೋನ್‌ ಸಿಕ್ಕಿಸಿ ಹಳಿಯಲ್ಲಿ ನಡೆದಾಡಬೇಡಿ.
ಹಳಿ ದಾಟುವ ವೇಳೆ ರೈಲು ಬರುತ್ತಿದೆಯೇ ಗಮನಿಸಿ.
ಸಾರ್ವಜನಿಕರಿಗೆ ಕಾಣುವಂತೆ ರೈಲ್ವೇ ಸಿಗ್ನಲ್‌ ಅಳವಡಿಸಬೇಕು.
ರೈಲು ಹೋಗುವ ಮುನ್ನ ಕ್ರಾಸಿಂಗ್‌ ಗೇಟ್‌ ಮುಚ್ಚಬೇಕು.

ರೈಲು ಅಪಘಾತ ಪ್ರಕರಣಗಲ್ಲಿ ಲೋಕೋ ಪೈಲಟ್‌ಗಳು ನೀಡುವ ಮಾಹಿತಿ ಆಧರಿಸಿ ತನಿಖೆ ನಡೆಸಲಾಗುತ್ತದೆ. ರೈಲ್ವೇ ಸುರಕ್ಷತೆಗೆ ರೈಲ್ವೇ ಪೊಲೀಸರು ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಸಾರ್ವಜನಿಕರೂ ಈ ಬಗ್ಗೆ ಸದಾ ಎಚ್ಚರಿಕೆ ವಹಿಸಬೇಕು.
– ಡಾ| ಸೌಮ್ಯಲತಾ, ರೈಲ್ವೇ ವಿಭಾಗದ ಎಸ್‌ಪಿ

 ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.