ಆಘಾತ: ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ
ಇಂದು ಮುಂಜಾನೆ ದೆಹಲಿಯಿಂದ ತಮಿಳುನಾಡಿಗೆ ವಿಮಾನದಲ್ಲಿ ಆಗಮಿಸಿದ್ದ ರಾವತ್ ಮತ್ತು ಅಧಿಕಾರಿಗಳು.
Team Udayavani, Dec 8, 2021, 6:10 PM IST
ನವದೆಹಲಿ:ತಮಿಳುನಾಡಿನ ಕೂನುರು ಸಮೀಪ ನಡೆದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೇಶದ ಮೂರು ಸೇನೆಗಳ ಮುಖ್ಯಸ್ಥ ಬಿಪಿನ್ ರಾವತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ವಾಯುಸೇನೆ ಅಧಿಕೃತವಾಗಿ ತಿಳಿಸಿವೆ.
ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಸೇನೆಯ ಅತ್ಯಾಧುನಿಕ MI-17 V5 ಹೆಲಿಕಾಪ್ಟರ್ ತಮಿಳುನಾಡಿನ ಕೂನುರು ಸಮೀಪ ಪತನಕ್ಕೀಡಾದ ಭೀಕರ ದುರಂತ ಬುಧವಾರ (ಡಿಸೆಂಬರ್ 08) ನಡೆದಿತ್ತು.
ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ. ಇನ್ನುಳಿದ ಹನ್ನೊಂದು ಮಂದಿಯ ಶವವನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ವರದಿ ತಿಳಿಸಿತ್ತು. ಇಂದು ಮುಂಜಾನೆ ದೆಹಲಿಯಿಂದ ತಮಿಳುನಾಡಿಗೆ ವಿಮಾನದಲ್ಲಿ ಆಗಮಿಸಿದ್ದ ರಾವತ್ ಮತ್ತು ಅಧಿಕಾರಿಗಳು. ನಂತರ ಎಂಐ-17ವಿ 5 ಹೆಲಿಕಾಪ್ಟರ್ ನಲ್ಲಿ ಸೂಳೂರಿನತ್ತ ಪ್ರಯಾಣಿಸಿದ್ದರು. ಹೆಲಿಕಾಪ್ಟರ್ ದುರಂತದಲ್ಲಿ 14 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ
Gujarat University;ದಾಳಿಯ ಬಳಿಕ ವಿದೇಶಿ ವಿದ್ಯಾರ್ಥಿಗಳ ಸ್ಥಳಾಂತರ: ಭದ್ರತೆ ಬಿಗಿ