Breaking : ವಿಧಾನಪರಿಷತ್ ನ 14 ಮಂದಿ ಕಾಂಗ್ರೆಸ್ ಸದಸ್ಯರ ಅಮಾನತು: ಸಭಾಪತಿ ಆದೇಶ
Team Udayavani, Dec 15, 2021, 4:01 PM IST
ಬೆಂಗಳೂರು : ಸಭಾಪತಿ ಅದೇಶ ಉಲ್ಲಂಘನೆ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.
ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಕಾಂಗ್ರೆಸ್ ನ 14 ಮಂದಿ ಸದಸ್ಯರನ್ನು ಅಮಾನತು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.
ಪಿ ಆರ್ ರಮೇಶ್, ಪ್ರತಾಪ್ ಚಂದ್ರ ಶೆಟ್ಟಿ, ಸಿ ಎಂ ಇಬ್ರಾಹಿಂ, ಎಸ್ ಆರ್ ಪಾಟೀಲ್, ಪಿ ಆರ್ ರಮೇಶ್, ನಾರಾಯಣ ಸ್ವಾಮಿ, ಬಿಕೆ ಹರಿಪ್ರಸಾದ್, ಯಬಿ ವೆಂಕಟೇಶ್, ವೀಣಾ ಅಚ್ಚಯ್ಯ ಸೇರಿ 14 ಮಂದಿಯನ್ನು ಅಮಾನತು ಮಾಡಲಾಗಿದೆ.