ಮಧ್ಯಪ್ರದೇಶ: ಕೇರಳದ ಬಸ್ ಪಲ್ಟಿಯಾಗಿ 16 ವಿದ್ಯಾರ್ಥಿಗಳಿಗೆ ಗಾಯ; ಓರ್ವ ಮೃತ್ಯು
Team Udayavani, Feb 19, 2023, 3:38 PM IST
ಭೋಪಾಲ್ : ಕೇರಳದಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಪಲ್ಟಿಯಾಗಿದ್ದು, ವಾಹನದ ಸಹಾಯಕ ಸಾವನ್ನಪ್ಪಿದ್ದಾರೆ ಮತ್ತು 16 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 150 ಕಿಮೀ ದೂರದಲ್ಲಿರುವ ಕುಖೇಡಾ ಗ್ರಾಮದ ಬಳಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ರಾಯಪುರ ಪೊಲೀಸ್ ಠಾಣೆಯ ಉಸ್ತುವಾರಿ ಸುಧೀರ್ ಬೈಗಿ ತಿಳಿಸಿದ್ದಾರೆ.
ತ್ರಿಶೂರ್ನ ಕಾಲೇಜೊಂದರಿಂದ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ ಎಂಪಿಯ ಕಟ್ನಿಗೆ ಹೋಗುತ್ತಿದ್ದಾಗ ಪಲ್ಟಿ ಹೊಡೆದು ಅದರ ಸಹಾಯಕ ಸಾವನ್ನಪ್ಪಿದ್ದಾನೆ ಎಂದು ಅವರು ಹೇಳಿದರು.
ವಾಹನದಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು 32 ವಿದ್ಯಾರ್ಥಿಗಳ ಪೈಕಿ 16 ಮಂದಿ ಗಾಯಗೊಂಡಿದ್ದು, ಅವರು ರಾಯ್ಪುರದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ ಎಂದು ಶಾಹನಗರ ಪ್ರದೇಶದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ರಚನಾ ಶರ್ಮ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ