ಟ್ರಕ್ಕಿಂಗ್: ಹಿಮಾಚಲ್ ಪ್ರದೇಶದಲ್ಲಿ 17 ಚಾರಣಿಗರು ನಾಪತ್ತೆ, ಶೋಧ ಕಾರ್ಯ ಆರಂಭ
ಹವಾಮಾನ ವೈಪರೀತ್ಯದ ಪರಿಣಾಮ ಲಾಮ್ಖಾಗಾ ಪಾಸ್ ಬಳಿ ನಾಪತ್ತೆ
Team Udayavani, Oct 21, 2021, 9:59 AM IST
ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಟ್ರಕ್ಕಿಂಗ್ ಗೆ ತೆರಳಿದ್ದ 17 ಮಂದಿ ನಾಪತ್ತೆಯಾಗಿದ್ದಾರೆಂದು ಅಧಿಕಾರಿಯೊಬ್ಬರು ಬುಧವಾರ(ಅಕ್ಟೋಬರ್ 21) ತಿಳಿಸಿದ್ದಾರೆ.
ಇದನ್ನೂ ಓದಿ:ಐರ್ಲೆಂಡ್ ವಿರುದ್ಧ ಸುಲಭ ಜಯ: ಸೂಪರ್ 12 ಹಂತಕ್ಕೆ ತೇರ್ಗಡೆಯಾದ ಲಂಕಾ
ಅಕ್ಟೋಬರ್ 14ರಂದು ಈ 17 ಮಂದಿ ಚಾರಣಿಗರು ಹರ್ಷಿಲ್ ಮಾರ್ಗದ ಮೂಲಕ ಉತ್ತರಾಖಂಡದ ಉತ್ತರಕಾಶಿಯ ಚಿತ್ಕುಲ್(ಹಿಮಾಚಲ ಪ್ರದೇಶದ ಕಿನ್ನೌರ್) ನತ್ತ ತೆರಳಿದ್ದರು. ಆದರೆ ಅಕ್ಟೋಬರ್ 17ರಿಂದ 19ರವರೆಗಿನ ಹವಾಮಾನ ವೈಪರೀತ್ಯದ ಪರಿಣಾಮ ಲಾಮ್ಖಾಗಾ ಪಾಸ್ ಬಳಿ ನಾಪತ್ತೆಯಾಗಿದ್ದಾರೆಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಕಿನ್ನೌರ್ ಜಿಲ್ಲೆಯ ಉತ್ತರಾಖಂಡದ ಹರ್ಷಿಲ್ ಅನ್ನು ಸಂಪರ್ಕಿಸುವ ಲಾಮ್ಖಾಗಾ ಪಾಸ್ ಅತ್ಯಂತ ದುರ್ಗಮ ಮಾರ್ಗಗಳಲ್ಲಿ ಒಂದಾಗಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬಂದಿಗಳನ್ನು ಶೋಧ ಕಾರ್ಯಕ್ಕಾಗಿ ಕಳುಹಿಸಲಾಗಿದೆ ಎಂದು ಕಿನ್ನೌರ್ ಡೆಪ್ಯುಟಿ ಕಮಿಷನರ್ ಅಬಿದ್ ಹುಸೈನ್ ಸಾದಿಖ್ ತಿಳಿಸಿದ್ದಾರೆ.
ಅಷ್ಟೇ ಅಲ್ಲ ಇಂಡೋ-ಟಿಬೇಟಿಯನ್ ಗಡಿ ಭದ್ರತಾ ಪಡೆಯ ನೆರವನ್ನು ಕೋರಲಾಗಿದೆ. ಗುರುವಾರ ನಸುಕಿನ ವೇಳೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ