ಟ್ರಕ್ಕಿಂಗ್: ಹಿಮಾಚಲ್ ಪ್ರದೇಶದಲ್ಲಿ 17 ಚಾರಣಿಗರು ನಾಪತ್ತೆ, ಶೋಧ ಕಾರ್ಯ ಆರಂಭ
ಹವಾಮಾನ ವೈಪರೀತ್ಯದ ಪರಿಣಾಮ ಲಾಮ್ಖಾಗಾ ಪಾಸ್ ಬಳಿ ನಾಪತ್ತೆ
Team Udayavani, Oct 21, 2021, 9:59 AM IST
ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಟ್ರಕ್ಕಿಂಗ್ ಗೆ ತೆರಳಿದ್ದ 17 ಮಂದಿ ನಾಪತ್ತೆಯಾಗಿದ್ದಾರೆಂದು ಅಧಿಕಾರಿಯೊಬ್ಬರು ಬುಧವಾರ(ಅಕ್ಟೋಬರ್ 21) ತಿಳಿಸಿದ್ದಾರೆ.
ಇದನ್ನೂ ಓದಿ:ಐರ್ಲೆಂಡ್ ವಿರುದ್ಧ ಸುಲಭ ಜಯ: ಸೂಪರ್ 12 ಹಂತಕ್ಕೆ ತೇರ್ಗಡೆಯಾದ ಲಂಕಾ
ಅಕ್ಟೋಬರ್ 14ರಂದು ಈ 17 ಮಂದಿ ಚಾರಣಿಗರು ಹರ್ಷಿಲ್ ಮಾರ್ಗದ ಮೂಲಕ ಉತ್ತರಾಖಂಡದ ಉತ್ತರಕಾಶಿಯ ಚಿತ್ಕುಲ್(ಹಿಮಾಚಲ ಪ್ರದೇಶದ ಕಿನ್ನೌರ್) ನತ್ತ ತೆರಳಿದ್ದರು. ಆದರೆ ಅಕ್ಟೋಬರ್ 17ರಿಂದ 19ರವರೆಗಿನ ಹವಾಮಾನ ವೈಪರೀತ್ಯದ ಪರಿಣಾಮ ಲಾಮ್ಖಾಗಾ ಪಾಸ್ ಬಳಿ ನಾಪತ್ತೆಯಾಗಿದ್ದಾರೆಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಕಿನ್ನೌರ್ ಜಿಲ್ಲೆಯ ಉತ್ತರಾಖಂಡದ ಹರ್ಷಿಲ್ ಅನ್ನು ಸಂಪರ್ಕಿಸುವ ಲಾಮ್ಖಾಗಾ ಪಾಸ್ ಅತ್ಯಂತ ದುರ್ಗಮ ಮಾರ್ಗಗಳಲ್ಲಿ ಒಂದಾಗಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬಂದಿಗಳನ್ನು ಶೋಧ ಕಾರ್ಯಕ್ಕಾಗಿ ಕಳುಹಿಸಲಾಗಿದೆ ಎಂದು ಕಿನ್ನೌರ್ ಡೆಪ್ಯುಟಿ ಕಮಿಷನರ್ ಅಬಿದ್ ಹುಸೈನ್ ಸಾದಿಖ್ ತಿಳಿಸಿದ್ದಾರೆ.
ಅಷ್ಟೇ ಅಲ್ಲ ಇಂಡೋ-ಟಿಬೇಟಿಯನ್ ಗಡಿ ಭದ್ರತಾ ಪಡೆಯ ನೆರವನ್ನು ಕೋರಲಾಗಿದೆ. ಗುರುವಾರ ನಸುಕಿನ ವೇಳೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್