ರಾಜ್ಯದ ಆರೋಗ್ಯ ವ್ಯವಸ್ಥೆಗೆ ಬಲ: 1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ : ಸಚಿವ ಸುಧಾಕರ್

ಉತ್ತರ ಕರ್ನಾಟಕ ಭಾಗದಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ

Team Udayavani, May 24, 2021, 8:00 PM IST

ರಾಜ್ಯದ ಆರೋಗ್ಯ ವ್ಯವಸ್ಥೆಗೆ ಬಲ: 1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ : ಸಚಿವ ಸುಧಾಕರ್

ಬೆಂಗಳೂರು : ಸೋಮವಾರ ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್, ಬ್ಲ್ಯಾಕ್ ಫಂಗಸ್ ಸ್ಥಿತಿಗತಿ ಕುರಿತು ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 1,763 ವೈದ್ಯರನ್ನು ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಮುಗಿದು ಅಧಿಸೂಚನೆ ಹೊರಡಿಸಲಾಗಿದೆ. 715 ತಜ್ಞರು, 75 ಜನರಲ್ ಮೆಡಿಸಿನ್, 57 ಜನರಲ್ ಸರ್ಜನ್, 145 ಗೈನಕಾಲಜಿಸ್ಟ್, 40 ಇಎನ್ ಟಿ, 35 ಚರ್ಮರೋಗ ತಜ್ಞರು, 142 ಅರವಳಿಕೆ ತಜ್ಞರು, 153 ಮಕ್ಕಳ ತಜ್ಞರು, 17 ರೇಡಿಯಾಲಜಿಸ್ಟ್ ಗಳನ್ನು ನೇಮಿಸಲಾಗುತ್ತಿದೆ. ಜೊತೆಗೆ 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಇದರಿಂದಾಗಿ ಆರೋಗ್ಯ ವ್ಯವಸ್ಥೆ ಬಲವಾಗಲಿದೆ. ಉತ್ತರ ಕರ್ನಾಟಕ ಭಾಗದ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಿದ್ದು, ಈಗ ಸಮಸ್ಯೆ ನೀಗಲಿದೆ. ಗದಗ, ಹುಬ್ಬಳ್ಳಿ, ಬೆಳಗಾವಿ, ರಾಯಚೂರು ಮೊದಲಾದ ಜಿಲ್ಲೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಿ ಅಲ್ಲಿಗೆ ನೇಮಿಸಬೇಕೆಂದು ಸೂಚಿಸಲಾಗಿದೆ. ಶೀಘ್ರದಲ್ಲಿ ಸ್ಥಳ ನಿಯೋಜನೆ ಮಾಡಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ :ಉಡುಪಿ : ಬ್ಲಾಕ್‌ ಫಂಗಸ್ ಚಿಕಿತ್ಸೆಗೆ ಬೆಡ್‌ಗಳನ್ನು ಮೀಸಲಿಡಿ: ಸಚಿವ ಬೊಮ್ಮಾಯಿ ಸೂಚನೆ

1,200 ಟನ್ ಹಂಚಿಕೆ

ರಾಜ್ಯಕ್ಕೆ 230 ಟನ್ ನಿಂದ ಆರಂಭಿಸಿ 1,015 ಟನ್ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ. ಈಗ ಮತ್ತಷ್ಟು ಏರಿಕೆ ಮಾಡಿ 1,200 ಟನ್ ಆಕ್ಸಿಜನ್ ಹಂಚಿಕೆ ಮಾಡಲಾಗಿದೆ. ಇದಕ್ಕಾಗಿ ಕೇಂದ್ರದ ಸಚಿವರಿಗೆ, ಪ್ರಧಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದರು.

ಎಲ್ಲ ಕೋವಿಡ್ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಇದರಿಂದ ಸಂಬಂಧಿಕರು ಆರೈಕೆ ಹೇಗಾಗುತ್ತಿದೆ ಎಂದು ನೋಡಬಹುದು, ಹೊರಗಿನಿಂದ ಬರುವುದನ್ನು ತಪ್ಪಿಸುವುದರಿಂದ ಬ್ಲ್ಯಾಕ್ ಫಂಗಸ್ ನಿಯಂತ್ರಿಸಬಹುದು, ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬಹುದು. ಪ್ರತಿ ಜಿಲ್ಲೆಯ ಆಸ್ಪತ್ರೆಗಳ ಕಾರ್ಯನಿರ್ವಹಣೆಯನ್ನು ಒಂದೇ ಕಡೆ ವೀಕ್ಷಿಸುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದರು.

ಆರೋಗ್ಯ ಸಹಾಯಕರಿಗೆ ಅಧಿಕಾರಿಗಳು ಎಂದು ಪದನಾಮ ಬದಲಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ 10 ಸಾವಿರ ರೂ., ನರ್ಸಿಂಗ್ ಸಿಬ್ಬಂದಿಗೆ 8 ಸಾವಿರ ರೂ., ಗ್ರೂಪ್ ಡಿ ಸಿಬ್ಬಂದಿಗೆ 10 ಸಾವಿರ ರೂ. ರಿಸ್ಕ್ ಭತ್ಯೆಯನ್ನು ಏಪ್ರಿಲ್ 1 ರಿಂದ ನೀಡಲು ಆದೇಶಿಸಲಾಗಿದೆ. ಆಶಾ ಕಾರ್ಯಕರ್ತರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲೇ ವೇತನ ಪಾವತಿಸುವ ವ್ಯವಸ್ಥೆ ತರಲಾಗಿದೆ. 17 ಜಿಲ್ಲೆಗಳಲ್ಲಿ ವೇತನ ಸಂಪೂರ್ಣ ಸಿಕ್ಕಿದೆ. ಎರಡು ದಿನಗಳಲ್ಲಿ ಉಳಿದೆಡೆ ವೇತನ ಕೈ ಸೇರಲಿದೆ ಎಂದು ಸ್ಪಷ್ಟಪಡಿಸಿದರು.

446 ಮಂದಿಗೆ ಬ್ಲ್ಯಾಕ್ ಫಂಗಸ್

ಈವರೆಗೆ ರಾಜ್ಯದಲ್ಲಿ 446 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದಾರೆ. 433 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 11 ಮಂದಿ ಮನೆಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿದೆ. 12 ರೋಗಿಗಳು ಮೃತಪಟ್ಟಿದ್ದಾರೆ. ಈ ಸೋಂಕು ನಿವಾರಣೆಗೆ 1 ಸಾವಿರ ಔಷಧಿ ವೈಲ್ ಗಳು ಕೇಂದ್ರದಿಂದ ಸಿಗಲಿದೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.