ಸರ್ಕಾರಿ ಕಛೇರಿಯಲ್ಲೇ ಪತ್ತೆಯಾಯ್ತು 2.31 ಕೋಟಿ ನಗದು, 1 ಕೆಜಿ Gold ಬಿಸ್ಕತ್ತು!
Team Udayavani, May 20, 2023, 6:12 PM IST
ಜೈಪುರ: ರಾಜಸ್ಥಾನದ ಸರ್ಕಾರಿ ಕಛೇರಿ ಯೋಜನಾ ಭವನದಲ್ಲಿ ಅನಧಿಕೃತವಾಗಿ ಸಂಗ್ರಹಿಸಿಡಲಾಗಿದ್ದ 2.31 ಕೋಟಿ ನಗದು ಮತ್ತು 1 ಕೆ.ಜಿ ತೂಕದ ಚಿನ್ನದ ಬಿಸ್ಕತ್ತು ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7-8 ಮಂದಿ ಇಲಾಖಾ ಸಿಬ್ಬಂದಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಜೈಪುರ ನಗರ ಪೊಲೀಸ್ ಅಧಿಕಾರಿ ಮಹೇಶ್ ಗುಪ್ತಾ ಅವರ ನೇತೃತ್ವದ ತಂಡ ಸರ್ಕಾರಿ ಕಟ್ಟಡದ ಮೇಲೆ ದಾಳಿ ನಡೆಸಿ ಈ ಹಣವನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ದೊಡ್ಡವರ ಕೈವಾಡ ಇದೆಯೆಂಬ ಗುಮಾನಿ ವ್ಯಕ್ತವಾಗಿದ್ದು ಸೂಕ್ತ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಜೈಪುರ ಪೊಲೀಸ್ ಕಮಿಷನರ್ ಆನಂದ್ ಕುಮಾರ್ ಶ್ರೀವಾಸ್ತವ, ʻಜೈಪುರದ ಸರ್ಕಾರಿ ಯೋಜನಾ ಭವನದ ಕಪಾಟಿನಲ್ಲಿದ್ದ ಚೀಲದಲ್ಲಿ ಸುಮಾರು 2.31 ಕೋಟಿ ರೂ. ನಗದು ಮತ್ತು 1 ಕೆ.ಜಿ ಗೂ ಹೆಚ್ಚಿನ ತೂಕದ ಚಿನ್ನದ ಬಿಸ್ಕತ್ತನ್ನು ವಶಪಡಿಸಿಕೊಳ್ಳಲಾಗಿದೆ. ಸೆಕ್ಷನ್ 102 ಅಡಿಯಲ್ಲಿ ಪೊಲೀಸರು ಈ ಹಣವನ್ನು ಜಪ್ತಿ ಮಾಡಿದ್ದು, ಈ ಬಗ್ಗೆ ತನಿಖೆ ಕೈಗೊಂಡಿದೆʼ ಎಂದು ಹೇಳಿದ್ದಾರೆ.
ʻಈ ಕುರಿತು ಸಿಸಿ ಟಿವಿಯಲ್ಲಿನ ದೃಶ್ಯಾವಳಿಗಳನ್ನು ಕಲೆಹಾಕಲಾಗಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆʼ ಎಂದು ಆನಂದ್ ಕುಮಾರ್ ಶ್ರೀವಾಸ್ತವ್ ಅವರು ಹೇಳಿದ್ದಾರೆ.
ಇದನ್ನೂ ಓದಿ: ಅಪಹರಣದ ನಾಟಕವಾಡಿ ಪೋಷಕರ ಬಳಿ 1 ಕೋಟಿ ರೂ.ಗೆ ಬೇಡಿಕೆ ಇಟ್ಟ ಮಗಳು… ಬಳಿಕ ಆದದ್ದೇ ಬೇರೆ
#WATCH | Jaipur, Rajasthan: Around Rs 2.31 crores of cash and 1 kg of gold biscuits have been found in a bag kept in a cupboard at the basement of the Government Office Yojana Bhawan. Police have seized these notes and further investigation has been started. CCTV footage is being… pic.twitter.com/xanN2NQhi7
— ANI MP/CG/Rajasthan (@ANI_MP_CG_RJ) May 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್