ಗಡಿ ಜಿಲ್ಲೆ ಬೀದರ್ ನಲ್ಲಿ 2 ಕೋವಿಡ್ ಸೋಂಕು ದೃಢ
14 ಜನ ಸೋಂಕಿನಿಂದ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, Jun 1, 2020, 7:28 PM IST
ಬೀದರ್: ಮಹಾರಾಷ್ಟ್ರ ಕಂಟಕದಿಂದ ತಲ್ಲಣಗೊಂಡಿರುವ ಗಡಿ ಜಿಲ್ಲೆ ಬೀದರ್ ನಲ್ಲಿ ಸೋಮವಾರ ಕೋವಿಡ್-19 ಆರ್ಭಟ ಕೊಂಚ ತಗ್ಗಿದ್ದು, ಎರಡು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಬಳಲುತ್ತಿದ್ದ 14 ಜನರು ಗುಣಮುಖರಾಗಿ ಬಿಡುಗಡೆ ಆಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
ರಕ್ಕದ ಕೋವಿಡ್ 19 ನಿಂದ ನಿರಂತರ ಸಾವು ಮತ್ತು ಸೋಂಕಿತರ ಸಂಖ್ಯೆ ಏರಿಕೆಯಿಂದಾಗಿ ಬೀದರ ನಲುಗಿ ಹೋಗಿತ್ತು. ಆದರೆ, ಸೋಮವಾರ ಇಬ್ಬರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಚಿಟಗುಪ್ಪ ಪಟ್ಟಣದ ಇಬ್ಬರು ಸಹೋದರರಾದ 36 ವರ್ಷದ ಪಿ 3339ಮತ್ತು 40 ವರ್ಷದ ಪಿ 3340 ರೋಗಿಗಳಿಗೆ ಕಂಟೈನ್ಮೆಂಟ್ ಝೋನ್ ಸಂಪರ್ಕದಿಂದ ವೈರಾಣು ತಗುಲಿದೆ.
ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆಗಿರುವ 14 ಜನ ಕೋವಿಡ್ 19 ಸೋಂಕಿತರಲ್ಲಿ 8 ಮಂದಿ ಪುರುಷರು ಮತ್ತು 6 ಜನ ಮಹಿಳೆಯರು ಸೇರಿದ್ದಾರೆ. ಪಿ 1430, ಪಿ 1451, ಪಿ 1452, ಪಿ 1453, ಪಿ 1455, ಪಿ 1456, ಪಿ 1458, ಪಿ 1666, ಪಿ 1667, ಪಿ 1730, ಪಿ 1731, ಪಿ 1950, 1952 ಮತ್ತು ಪಿ 1042 ಸಂಖ್ಯೆಯ ರೋಗಿಗಳು ಬಿಡುಗಡೆ ಆಗಿದ್ದಾರೆ. ಇವರಲ್ಲಿ ಬೀದರ ನಗರದ 9, ಭಾಲ್ಕಿ 3, ಚಿಟಗುಪ್ಪ ಮತ್ತು ಧನ್ನೂರನ ತಲಾ 1 ಸೇರಿದ್ದಾರೆ.
ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 165ಕ್ಕೆ ಏರಿಕೆಯಾಗಿದೆ. ಒಟ್ಟು 14 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇನ್ನೂ 119 ಪ್ರಕರಣಗಳು ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ದೃಡಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ