ಸ್ಫೋಟ ರಹಿತ ಕಾರ್ಯಾಚರಣೆ… ಝವಾಹಿರಿ ಹತ್ಯೆಗೈಯಲು CIA ಬಳಕೆ ಮಾಡಿದ ಶಸ್ತ್ರಾಸ್ತ್ರ ಯಾವುದು?

ಅಲ್ ಖೈದಾ ಚಟುವಟಿಕೆ ಮತ್ತು ಝವಾಹಿರಿಯ ಅಡಗುತಾಣ ಪತ್ತೆ ಹಚ್ಚುವ ಬಗ್ಗೆ ಸಿಐಎ ರಹಸ್ಯವಾಗಿ ಕಾರ್ಯಾಚರಿಸುತ್ತಿತ್ತು.

Team Udayavani, Aug 2, 2022, 11:59 AM IST

ಸ್ಫೋಟ ರಹಿತ ಕಾರ್ಯಾಚರಣೆ… ಝವಾಹಿರಿ ಹತ್ಯೆಗೈಯಲು CIA ಬಳಕೆ ಮಾಡಿದ ಶಸ್ತ್ರಾಸ್ತ್ರ ಯಾವುದು?

ವಾಷಿಂಗ್ಟನ್: ಅಫ್ಘಾನಿಸ್ತಾನದಲ್ಲಿ ಅಡಗಿ ಕುಳಿತಿದ್ದ ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಮುಖಂಡ ಐಮನ್ ಅಲ್ ಝವಾಹಿರಿಯನ್ನು ಅಮೆರಿಕ ವೈಮಾನಿಕ ದಾಳಿಯ ಮೂಲಕ ಹತ್ಯೆಗೈದಿದೆ. 2011ರಲ್ಲಿ ಅಲ್ ಖೈದಾ ಸ್ಥಾಪಕ ಒಸಾಮಾ ಬಿನ್ ಲಾಡೆನ್ ನನ್ನು ಹತ್ಯೆಗೈದ ನಂತರ ನಡೆದ ಎರಡನೇ ಅತೀ ದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ವರದಿ ವಿವರಿಸಿದೆ.

ಇದನ್ನೂ ಓದಿ:ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ: ಹತ್ಯೆಗೈದವರ ಮಾಹಿತಿ ಸಿಕ್ಕಿದೆ ಎಂದ SP

ಪಾಕಿಸ್ತಾನದ ಬುಡಕಟ್ಟು ಪ್ರದೇಶದ ಅಥವಾ ಅಫ್ಘಾನಿಸ್ಥಾನದಲ್ಲಿ ಅಡಗಿ ಕೊಂಡಿದ್ದಾನೆ ಎಂದು ಈ ಮೊದಲು ಊಹಾಪೋಹಗಳು ಹರಿದಾಡುತ್ತಿದ್ದರೂ ಕೂಡಾ ಝವಾಹಿರಿಯ ಅಡಗುತಾಣವನ್ನು ಪತ್ತೆಹಚ್ಚಿ ಹೇಗೆ ಕೊಲ್ಲಲಾಯಿತು ಎಂಬ ಬಗ್ಗೆ ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಜಾಲದ ಕುರಿತು ಅಮೆರಿಕ ಹಲವಾರು ವರ್ಷಗಳಿಂದ ಹಲವಾರು ಮಾಹಿತಿಗಳನ್ನು ಕಲೆ ಹಾಕುತ್ತಿತ್ತು. ಅಫ್ಘಾನಿಸ್ತಾನದಿಂದ ಸೇನೆಯನ್ನು ಹಿಂಪಡೆದ ನಂತರ ಅಮೆರಿಕ ಅಲ್ ಖೈದಾ ಚಟುವಟಿಕೆ ಮತ್ತು ಝವಾಹಿರಿಯ ಅಡಗುತಾಣ ಪತ್ತೆ ಹಚ್ಚುವ ಬಗ್ಗೆ ಸಿಐಎ ರಹಸ್ಯವಾಗಿ ಕಾರ್ಯಾಚರಿಸುತ್ತಿತ್ತು.

ಝವಾಹಿರಿ ಕುಟುಂಬ ಸದಸ್ಯರ ಪತ್ತೆ:

ಅಫ್ಘಾನಿಸ್ತಾನ, ಗುಡ್ಡಪ್ರದೇಶ ಸೇರಿದಂತೆ ಹಲವೆಡೆ ಝವಾಹಿರಿ ಅಡಗುತಾಣ ಪತ್ತೆಗಾಗಿ ರಹಸ್ಯ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಈ ವರ್ಷ ಝವಾಹಿರಿ ಪತ್ನಿ, ಆತನ ಪುತ್ರಿಯರು, ಪುತ್ರರು ಕಾಬೂಲ್ ನಲ್ಲಿ ವಾಸವಾಗಿದ್ದ ಸ್ಥಳವನ್ನು ಕಂಡು ಹಿಡಿಯಲಾಗಿತ್ತು. ರಹಸ್ಯ ಮಾಹಿತಿಯನ್ನು ಏಪ್ರಿಲ್ ತಿಂಗಳಿನಲ್ಲಿ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾಕ್ ಸುಲ್ಲಿವ್ಯಾನ್ ಅವರಿಗೆ ವಿವರಿಸಲಾಗಿತ್ತು. ಅದೇ ರೀತಿ ಅಧ್ಯಕ್ಷ ಜೋ ಬೈಡೆನ್ ಅವರಿಗೂ ಮಾಹಿತಿ ನೀಡಲಾಗಿತ್ತು ಎಂದು ವರದಿ ತಿಳಿಸಿದೆ.

ಕಾಬೂಲ್ ನಲ್ಲಿ ಸುರಕ್ಷಿತ ಪ್ರದೇಶದಲ್ಲಿ ಝವಾಹಿರಿ ವಾಸವಾಗಿದ್ದಾನೋ ಇಲ್ಲವೋ ಎಂಬುದನ್ನು ಖಚಿತಪಡಿಸಲು ಸಿಐಎ ಗುಪ್ತಚರ ಅಧಿಕಾರಿಗಳು ಹಲವಾರು ತಿಂಗಳುಗಳ ಕಾಲ ಮಾಹಿತಿಯನ್ನು ಕಲೆಹಾಕಿದ್ದರು.

ರಹಸ್ಯ ಕಾರ್ಯಾಚರಣೆಗೆ ಸಿದ್ಧತೆ:

ಝವಾಹಿರಿ ವಾಸ್ತವ್ಯ ಹೂಡಿದ್ದ ಕಟ್ಟಡದ ಮಾಹಿತಿ, ಅದರ ಗುಣಮಟ್ಟದ ಬಗ್ಗೆಯೂ ಮಾಹಿತಿ ಕಲೆಹಾಕಲಾಗಿತ್ತು. ಸುತ್ತಮುತ್ತ ನಾಗರಿಕರಿಗೆ ಹಾನಿಯಾಗದಂತೆ ಕಾರ್ಯಾಚರಣೆ ನಡೆಸುವ ಮೂಲಕ ಝವಾಹಿರಿಯನ್ನು ಹತ್ಯೆಗೈಯುವ ಬಗ್ಗೆ ಸಿಐಎ ಹಾಗೂ ಬೈಡೆನ್ ಜೊತೆ ಹಲವು ಸುತ್ತಿನ ಮಾತುಕತೆ ನಡೆದಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಹಸ್ಯ ಕಾರ್ಯಾಚರಣೆಯ ಅಂಗವಾಗಿ ಅಮೆರಿಕ ಮಾರಕ ಹೆಲ್ ಫೈರ್ ಆರ್9x ಮಿಸೈಲ್ ಅನ್ನು ಅಮೆರಿಕ ಬಳಸಿರುವುದು ಜಗಜ್ಜಾಹೀರಾಗಿದೆ. ಇದೊಂದು ಸಿಡಿತಲೆ ರಹಿತ ಮಿಸೈಲ್ ಆಗಿದ್ದು, ಇದು ಆರು ಹರಿತವಾದ ಬ್ಲೇಡ್ ಹೊಂದಿದ್ದು, ನಿಗದಿತ ಗುರಿಯನ್ನು ತಲುಪಿ ಝವಾಹಿರಿಯನ್ನು ಹತ್ಯೆಗೈಯಲಾಗಿತ್ತು. ಇದು ಸ್ಫೋಟ ಮತ್ತು ಶಬ್ದ ರಹಿತ ದಾಳಿಯಾಗಿದೆ ಎಂದು ವರದಿ ವಿವರಿಸಿದೆ.

ಭಯೋತ್ಪಾದಕ ಸಂಘಟನೆಯ ಮುಖಂಡರನ್ನು ಹತ್ಯೆಗೈಯುವ ಸಂದರ್ಭದಲ್ಲಿ ಬಳಸುವ ಡೆಡ್ಲಿ ಶಸ್ತ್ರಾಸ್ತ್ರದ ಬಗ್ಗೆ ಅಮೆರಿಕವಾಗಲಿ ಅಥವಾ ಸಿಐಎ ಆಗಲಿ ಬಹಿರಂಗವಾಗಿ ಯಾವ ಹೇಳಿಕೆಯನ್ನೂ ನೀಡಿಲ್ಲ. 2017ರಲ್ಲಿ ಮೊದಲ ಬಾರಿಗೆ ಅಲ್ ಖೈದಾ ಹಿರಿಯ ಮುಖಂಡ ಅಬು ಅಲ್ ಖೈರ್ ಅಲ್ ಮಸ್ರಿಯನ್ನು ಹತ್ಯೆಗೈಯುವ ಸಂದರ್ಭದಲ್ಲಿ ಆರ್ 9x ಮಿಸೈಲ್ ಬಳಸಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.